ಮಂಗಳೂರು, ಆ.19(ಕ.ವಾ):- ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2022-23ನೇ ಸಾಲಿನ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಜಯಾನಂದ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಲ್ಕಿಯ ಜಯಾನಂದ ದೇವಾಡಿಗರು ಡಿ. ದೇವರಾಜ ಅರಸು ಅವರ ಚಿಂತನೆ,
ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ. ಜೈವಿಕ ಸರಪಳಿ ನಾಶವಾಗಿ ಹಲವಾರು ವಿರಳ ಗಿಡ ಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ ನಾಡು ಸಮೃದ್ಧವಾಗಿ ಕಾಲ ಕಾಲಕ್ಕೆ ಮಳೆ,
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು
ಮುಲ್ಕಿ:ಗ್ರಾಮೀಣ ಪ್ರದೇಶದ ಸಹಕಾರಿ ಕ್ಷೇತ್ರದಲ್ಲಿ ಜನಸೇವೆ ಮೂಲಕ ರಂಗನಾಥ ಶೆಟ್ಟಿಯವರ ಸಾಧನೆ ಅನುಕರಣೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಮುಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕರಾಗಿ ಆಯ್ಕೆಯಾದ ಮುಲ್ಕಿ ವಿಜಯ ಸೊಸೈಟಿಯ ಅಧ್ಯಕ್ಷ ರಂಗನಾಥ ಶೆಟ್ಟಿಯವರನ್ನು ಗೌರವಿಸಿ ಮಾತನಾಡಿದರು.ಕಳೆದ ಹಲವಾರು
ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.