Home Posts tagged #newdelhi

ವೈಎಸ್‌ಆರ್ ಸಂಸ್ಥಾಪಕಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್‌ಗೆ ಸೇರ್ಪಡೆ

ತೆಲಂಗಾಣದಲ್ಲಿ ವೈಎಸ್‌ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ

ಆಂಧ್ರಪ್ರದೇಶ : ಎಕ್ಸ್‌ ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿ ಉಡಾವಣೆ

ಎಕ್ಸ್‌ ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಿರ್ಮಿತ ಎಕ್ಸ್‌ ರೇ ಪೋಲಾರಿಮೀಟರ್ ಉಪಗ್ರಹವನ್ನು ಇಂದು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಿಗ್ಗೆ 9.10ಕ್ಕೆ ‘ಎಕ್ಸ್‌ ಪೊಸ್ಯಾಟ್’ ಸೇರಿದಂತೆ ವಿದ್ಯಾಸಂಸ್ಥೆಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಸಂಬಂಧಿಸಿದ ಇತರೆ 9 ಉಪಗ್ರಹಗಳನ್ನು

ನವದೆಹಲಿ: ಬ್ರಿಟಿಷರ ಕಾಲದ ಕ್ರಿಮಿನಲ್ ಕಾಯ್ದೆಗೆ ತಿದ್ದುಪಡಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಇತ್ತೀಚೆಗೆ ಸಂಸತ್ತಿನಲ್ಲಿ ಪಾಸಾದ ಮೂರು ಕ್ರಿಮಿನಲ್ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕುವ ಮೂಲಕ ಅವನ್ನು ಕಾನೂನು ಆಗಿಸಿದರು. ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷ್ಯ ಕಾಯ್ದೆ ಇವೇ ಆ ಮೂರು. 1872ರ ಬ್ರಿಟಿಷರ ಕಾನೂನುಗಳಿಗೆ ಈ ಮೂಲಕ ಇನ್ನಷ್ಟು ತಿದ್ದುಪಡಿ ತರಲಾಗಿದೆ.

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

2023 ಬಜೆಟ್ ಹೈಲೈಟ್ಸ್

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ  ಮುಂಚಿತವಾಗಿ  ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್ ನಲ್ಲಿ ಏಳು ಆದ್ಯತಾ ವಲಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ

ಗಣರಾಜ್ಯೋತ್ಸವ ಪರೇಡ್‌: ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

 ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ಮಂಗಳೂರಿನ ದಿಶಾ ಅಮೃತ್‌ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್‌ ಲೆ| ವಲ್ಲಿ ಮೀನಾ ಎಸ್‌. ಸಹ ಇರುವರು.

ಮಾಜಿ ಕೇಂದ್ರ ಸಚಿವ, RJD ಹಿರಿಯ ನಾಯಕ ಶರದ್ ಯಾದವ್ ನಿಧನ

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.