Home Posts tagged padubidri (Page 3)

ಹೆಜಮಾಡಿ ಗ್ರಾಮಸಭೆಯಲ್ಲಿ ಮೊಳಗಿದ ಅಕ್ರಮ ಮರಳುಗಾರಿಕೆ ಹಾಗೂ ಮಟ್ಕಾದಂಧೆ ವಿಚಾರ

ಉಡುಪಿ ಮಂಗಳೂರು ಗಡಿಭಾಗ ಹೆಜಮಾಡಿ ಗ್ರಾಮಸಭೆಯಲ್ಲಿ ಶಾಂಭವಿ ಹೊಳೆಯಲ್ಲಿ ರಾಜರೋಷವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಮಟ್ಕಾದಂಧೆಯ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದು, ಸಭೆಯಲ್ಲಿದ್ದ ಅಧಿಕಾರಿಗಳಲ್ಲಿ ತಕ್ಷಣವೇ ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಮಾಜಿ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ವಾಮನ್

ಹೆದ್ದಾರಿ ಸೂಚನಾ ಫಲಕಕ್ಕೆ ಅಳವಡಿಸಿದ ಕಟೌಟ್ ಗಳ ತೆರವು:ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಕಾರ್ಯಚರಣೆ

ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ ಸ್ಪಂದನೆ ನೀಡಿದ ಹೆದ್ದಾರಿ ಇಲಾಖೆ ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಮೂಲಕ ಕಟೌಟ್ ತೆರವು ಕಾರ್ಯ ನಡೆದಿದೆ. ಕಟೌಟ್ ಅಳವಡಿಸಲು ಯಾವುದೇ ಸಂಸ್ಥೆಗಳು ಗುತ್ತಿಗೆ ನೀಡಿದ್ದಲ್ಲಿ ಕಂಬ ಅಳವಡಿಸುವ ಕಷ್ಟ ತಪ್ಪಿಸಲು ಹೆದ್ದಾರಿ ಪಕ್ಕದ

ಹೆದ್ದಾರಿ ಸೂಚನಾ ಫಲಕಗಳಿಗೆ ಕಂಟಕ: ಹೆದ್ದಾರಿ ಇಲಾಖಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ರಾಷ್ಟ್ರೀಯ ಹೆದ್ದಾರಿ ಸಂಚಾರಿಗಳಿಗೆ ಹೆದ್ದಾರಿಯ ಬಗೆಗಿನ ಮಾಹಿತಿ ನೀಡುತ್ತಿರುವ ಸೂಚನಾ ಫಲಕಗಳಿಗೆ ಕಟೌಟ್ ಗಳನ್ನು ಅಳವಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದರೂ ಹೆದ್ದಾರಿ ಇಲಾಖೆ ಮೌನವಾಗಿರುದು ಗಮನಿಸಿದರೆ ಇದರಿಂದ ಇಲಾಖೆ ಲಾಭ ಪಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇಂಥಹುದೇ ಕೃತ್ಯವನ್ನು ದೇವಸ್ಥಾನವೊಂದರ ಕಾರ್ಯಕ್ರಮದ ಕಟೌಟ್ ಅಳವಡಿಸುವ ಮೂಲಕ ಚಾಲನೆ ನೀಡಿದ್ದು ಇಲ್ಲಿ ಸ್ಮರಿಸ ಬಹುದಾಗಿದೆ. ಇದೀಗ ಅದು ಮುಂದುವರಿದು ಆಸ್ಕರ್ ನಿಧನದ ಕಟೌಟ್

ಉಚ್ಚಿಲ ಬಬ್ಬು ಸ್ವಾಮಿ ದೈವಸ್ಥಾನದ ಬಳಿಯ ಮನೆಗೆ ಕಳ್ಳರ ಲಗ್ಗೆ, ನಗ, ನಗದು ಕಳವು

ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಬಬ್ಬು ಸ್ವಾಮಿ ದೈವಸ್ಥಾನದ ಪಕ್ಕದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದು 12 ಸಾವಿರ ನಗದು ಮತ್ತು ಎರಡು ಗ್ರಾಂ ಚಿನ್ನದ ಆಭರಣ ಕದ್ದೊಯ್ದ ಘಟನೆ ನಡೆದಿದೆ. ಉಚ್ಚಿಲದ ನಿವಾಸಿ ಅಬ್ದುಲ್ ಮಲೀಕ್‌ನವರ ಬೈತುಲ್ ಅಲ್ ಸಫಾ ಮನೆಗೆ ಹಿಂಬಾಗಿಲ ಚಿಲಕ ಮುರಿದು ಒಳಪ್ರವೇಶಿಸಿದ ಕಳ್ಳರು, ತಳ ಮಹಡಿ ಮತ್ತು ಮೇಲ್ಮಹಡಿಯ ಎರಡೂ ಕಡೆಗಳ ಬೀಗ ಮುರಿದು ಒಳ ನುಗ್ಗಿದ್ದಾರೆ. ಬೀರುವಿನಲ್ಲಿದ್ದ 12 ಸಾವಿರ ರುಪಾಯಿ ನಗದು ಹಾಗೂ 2ಗ್ರಾಂ

ಪಡುಬಿದ್ರಿಯಲ್ಲಿ ಜಾತಿ ಧರ್ಮ ಮೀರಿ ನಡೆದ ಮುದ್ದು ಕೃಷ್ಣ ಸ್ಪರ್ಧೆ

ಪಡುಬಿದ್ರಿ: ಮಹಮ್ಮದ್ ನಿಯಾಜ್ ನೇತೃತ್ವದ ಪಡುಬಿದ್ರಿ ರೋಟರಿ ಕ್ಲಬ್, ಮಹಿಳಾ ವಿಭಾಗದ ಇನ್ನರ್ ವೀಲ್ ಕ್ಲಬ್ ಹಾಗೂ ಸಮುದಾಯ ದಳ ಈ ಸಂಸ್ಥೆಗಳ ಜಂಟಿ ಆಯೋಜನೆಯಲ್ಲಿ, ಜಾತಿ ಧರ್ಮಗಳನ್ನು ಮೆಟ್ಟಿನಿಂತು ಎಲ್ಲಾ ಸಮುದಾಯದ ಮಂದಿ ಪಾಲ್ಗೊಂಡು ಎಂಬತ್ತಕ್ಕೂ ಅಧಿಕ ಪುಟಾಣಿ ಸ್ಪರ್ಧಾಳುಗಳ ಭಾಗವಹಿಸುವಿಕೆಯ ಮೂಲಕ ಪಡುಬಿದ್ರಿ ಆರ್. ಆರ್. ಕಲೋನಿಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ರೋಟರಿ ಸಂಸ್ಥೆಯ ಪ್ರಮುಖರಾದ ನವೀನ್

ಏಳೂರು ಮೊಗವೀರ ಮಹಾಸಭಾದ ವತಿಯಿಂದ ಹೆಜಮಾಡಿಯಲ್ಲಿ ಸಮುದ್ರ ಪೂಜೆ

ಏಳೂರು ಮೊಗವೀರ ಮಹಾ ಸಭಾದ ವತಿಯಿಂದ ಭಾನುವಾರ ಹೆಜಮಾಡಿಯ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ ನೆರವೇರಿಸಿ, ಸಮುದ್ರ ದೇವತೆಗೆ ಹಾಲು, ತೆಂಗಿನಕಾಯಿ ಸಮರ್ಪಣೆ ನೆರವೇರಿಸಲಾಯಿತು. ಪಲಿಮಾರು, ಗುಂಡಿ, ಸಣ್ಣ ಗುಂಡಿ, ಹೆಜಮಾಡಿ, ಮಟ್ಟು, ಆಚೆಮಟ್ಟು ಹಾಗೂ ಕನ್ನಂಗಾರು ಸೇರಿ ಏಳು ಊರಿನ ಮೊಗವೀರ ಬಾಂಧವರು ಹಾಲು, ತೆಂಗಿನ ಕಾಯಿ, ಫಲವಸ್ತುಗಳನ್ನು ತಂದು ಸಮುದ್ರ ದೇವರಿಗೆ ಸಮರ್ಪಿಸಲಾಯಿತು.ಈ ಸಂದರ್ಭದಲ್ಲಿ ಏಳೂರು ಮೊಗವೀರ ಮಹಾ ಸಭಾದ ಸದಸ್ಯ, ಹೆಜಮಾಡಿ ಗ್ರಾಪಂ ಮಾಜಿ

ಕಳಪೆ ಕಾಮಗಾರಿಗೆ ಸಾಕ್ಷಿ ನುಡಿಯುತ್ತಿದೆ ಪಡುಬಿದ್ರಿ ಹೆದ್ದಾರಿ

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿಯಲ್ಲಿ ಕಳೆದ ಸುಮಾರು ಹನ್ನೊಂದು ವರ್ಷಗಳಿಂದ ಕುಂಟುತ್ತಾ ಸಾಗಿದ ಚತುರ್ಷ್ಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯ ಕಾಣುವ ಲಕ್ಷಣಗಳು ಗೊಚರಿಸುತ್ತಿದ್ದರೂ ಮಾಡಿದ ಕಾಮಗಾರಿ ಕೆಲವೇ ಗಂಟೆಗಳಲ್ಲಿ ಆಯುಷ್ಯ ಕಳೆದುಕೊಳ್ಳುತ್ತಿದ್ದರೂ ಪ್ರಶ್ನಿಸುವವರಿಲ್ಲದೆ, ಆನೆ ನಡೆದಿದ್ದೇ ದಾರಿ ಎಂಬಂತ್ತಾಗಿದೆ. ಪಡುಬಿದ್ರಿ- ಎರ್ಮಾಳು ಗಡಿಭಾಗಲ್ಲಿ ಹೆದ್ದಾರಿಗೆ ಕಿರು ಸೇತುವೆ ನಿರ್ಮಾಣ ಕಾರ್ಯ ಆರಂಭಿಸಿ ದಶಕಗಳೇ ಕಳೆದು ಇದೀಗ ಪೂರ್ಣಗೊಂಡು,

ಪೂರಕ ದಾಖಲೆ ಪಡೆಯದೆ ಮನೆ ಕಟ್ಟಲು ಅನುಮತಿ:ಕಟಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಆರೋಪ

ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ ಹಕ್ಕುದಾರ ಜಾನ್ ರಿಚಾರ್ಡ್ ತಿಳಿಸಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಪಾರ್ಮ್ ನಂಬರ್ ೧೦ ಸಹಿತ ಪೂರಕ ದಾಖಲೆಗಳೇ ಇಲ್ಲದೆ ನೀಡಿದ ಅರ್ಜಿಗೆ ಕಟಪಾಡಿ ಗ್ರಾ.ಪಂ. ಪಿಡಿಒ ಮಮತ ವಿ.

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ: ಆತಂಕದಲ್ಲಿ ಸ್ಥಳೀಯರು

ಜನವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲೆ ಎತ್ತಿದ ಯುಪಿಸಿಎಲ್ ಕಂಪನಿಯ ಸುತ್ತಲ ಪ್ರದೇಶದಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ ಕಾಣಿಸಿಕೊಂಡು ಬಹಳಷ್ಟು ದನಗಳು ಮರಣ ಹೊಂದುತ್ತಿದ್ದು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರೂ ಯಾವುದೇ ವರದಿ ನೀಡುತ್ತಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಎಲ್ಲೂರು ಗ್ರಾಮದ ತಜೆ ನಿವಾಸಿ ಹೈನುಗಾರಿಕೆಯನ್ನೇ ಜೀವನಾಧಾರವಾಗಿ ನಡೆಸಿಕೊಂಡು ಬಂದು ಇದೀಗ ಹತ್ತಕ್ಕೂ ಅಧಿಕ

ಯುಪಿಸಿಎಲ್‌ ನಿಂದ ಮತ್ತೆ ಪರಿಸರಕ್ಕೆ ಉಪ್ಪು ಮಿಶ್ರಿತ ರಾಸಾಯನಿಕ ನೀರು

ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು ತೆಂಕ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕುಡಿಯುವ ನೀರಿನ ಬಾವಿ ಪ್ರದೇಶದಲ್ಲಿ ಇಂಗಿದ ಪರಿಣಾಮ ಈ ಭಾಗದ