ಪುತ್ತೂರು: ಇತಿಹಾಸ ಪ್ರಸಿದ್ಧವಾಗಿರುವ ಪುತ್ತೂರಿನ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಮಾ.1ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಕಂಬಳವನ್ನು ಉತ್ತಮವಾಗಿ ನಡೆಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ
ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ
ಪುತ್ತೂರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀ ರಾಮಲಲ್ಲ,ನ ಪ್ರತಿಷ್ಠಾಪನ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಸೀಮೆಗೆ ಸಂಬಂಧಿಸಿ ಮೂರು ದಿವಸ ಪುತ್ತೂರು ತಾಲೂಕಿನ ದೇವಸ್ಥಾನಗಳಿಗೆ ಭೇಟಿ ನೀಡಲಿರುವ ಶ್ರೀ ರಾಮಶ್ವ ಯಾತ್ರೆಗೆ ದೇವಳದ ರಥ ಬೀದಿಯಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ ದೇವಳದ ವಠಾರದಲ್ಲಿ ಅಶ್ವಕ್ಕೆ ಹೂವಿನ ಹಾರ ಹಾಕಿ ಗಂಧ ಪ್ರಸಾದ ಹಚ್ಚಿ ತೀರ್ಥ ಸಿಂಪಡಿಸಲಾಯಿತು.
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ಎ.12 ರಂದು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ದಂಪತಿ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಅವರು ಡಾ.ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು. ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ ಶ್ರಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ತೆಂಗಿನಕಾಯಿ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹತ್ತಾರು ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾರ್ಯಗಳು ನಿರಂತರ ನಡೆಯುತ್ತಿದ್ದು, ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಿಲಾ ಕಟ್ಟೆಯ ಕಾಮಗಾರಿ ಜಾತ್ರೆ ಮುಂದೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ ಅನ್ನಛತ್ರ ಮೇಲಂತಸ್ತು ನಿರ್ಮಾಣ, ಸಭಾಭವನದ ನವೀಕರಣ, ಆವರಣಗೋಡೆ, ದೇವಳದ ಹೊರಾಂಗಣ ಚರಂಡಿ ಅಭಿವೃದ್ಧಿ, ಇಂಟರ್ಲಾಕ್ ಅಳವಡಿಕೆ, ರಥ ಮಂದಿರ ನಿರ್ಮಾಣ ಸಹಿತ ಹಲವಾರು
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮಮ’ ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5 ಅಂಶಗಳ ಕಾರ್ಯಕ್ರಮಗಳ ಯೋಜನೆ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ಮುರ ರೈಲ್ವೇ ಹಳಿ ಚರಂಡಿಯಲ್ಲಿ ಮೃತ ದೇಹ ಪತ್ತೆ https://v4news.com/mura-railway-station-death/ ಜನವರಿ ತಿಂಗಳಲ್ಲಿ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಪ್ರಧಾನ ಅರ್ಚಕ ವೇದ.ಮೂ.ವಿ.ಎಸ್.ಭಟ್ ಮತ್ತು ವೇ.ಮೂ. ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಉತ್ಸವಾದಿಗಳು ನಡೆಯಿತು. ದೇವಳದ ಪ್ರಾಕಾರ ಗುಡಿಗಳಲ್ಲಿ ಹೂವಿನ ಪೂಜೆ
ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವಿಟ್ಲ ಮೂಲದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವೃದ್ದರೊಬ್ಬರು ಅಸು ನೀಗಿದ ಘಟನೆ ನಡೆದಿದೆ. ಮೃತರನ್ನು ಕೇಶವ ನಾಯ್ಕ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಕರು ವಿಟ್ಲ ಮೂಲದವರು ಎನ್ನಲಾಗಿದೆ. ಸಂಬಂಧಿಕರು ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಪೊಲೀಸರು ಮನವಿ