Home Posts tagged #puttur (Page 27)

ಡ್ರಗ್ಸ್ ಜಾಗೃತಿಗಾಗಿ ಎಲ್ಲಾ ಇಲಾಖೆಗಳ ಸಹಯೋಗ ಅಗತ್ಯ : ಪುತ್ತೂರು ಎ.ಸಿ. ಗಿರೀಶ್ ನಂದನ್ ಹೇಳಿಕೆ

ಪುತ್ತೂರು: ಡ್ರಗ್ಸ್ ಚಟಗಳು ಯುವ ಸಮುದಾಯವನ್ನು ಹೆಚ್ಚಾಗಿ ಕಾಡುತ್ತಿದೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ನಡೆಯಬೇಕು. ಡ್ರಗ್ಸ್ ಕುರಿತ ಜನ ಜಾಗೃತಿಗಾಗಿ ಎಲ್ಲಾ ಇಲಾಖೆಗಳ ಸಹಯೋಗ ಅಗತ್ಯವಾಗಿದೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ತಿಳಿಸಿದರು. ಅವರು ಮಂಗಳವಾರ

ಪುತ್ತೂರು : ನಕಲಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲ ಪತ್ತೆ

ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ, ಸುಳ್ಯ, ಬಂಟ್ವಾಳ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳ ನಕಲಿ ದಾಖಲೆಗಳನ್ನು

ಉಚಿತ ಯೋಜನೆಗಳಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ : ಪುತ್ತೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ ಸಮಾನ್ಯರಿಗೆ ಉಂಟಾಗುವ ತೊಂದರೆಯನ್ನು ವಿರೋಧಿಸಿ ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟ ಅನುರಾಗ ವಠಾರ ಇದರ ಆಶ್ರಯದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಕಾರ್ಮಿಕ ಸಂಘಗಳ

ಯುವ ವಾಹಿನಿ ಪುತ್ತೂರು ಘಟಕದಿಂದ ಬಿಲ್ಲವ ವಧು-ವರಾನ್ವೇಷಣೆ-2023

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬಿಲ್ಲವ ವಧು ವರಾನ್ವೇಷಣೆ-೨೦೨೩  ಪುತ್ತೂರಿನ ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಿದರು. ಮದುವೆಯಾಗುವ ಯುವಕ ಯುವತಿಯರಿಗೆ ವೇದಿಕೆಯನ್ನು ಕಲ್ಪಿಸುವ ಕೆಲಸವನ್ನು ಯುವವಾಹಿನಿ ಘಟಕ ಮಾಡುತ್ತಿದೆ. ಈ

ಪುತ್ತೂರು : ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ. ಬಾವಿ ಕುಸಿದ ಹಿನ್ನಲೆಯಲ್ಲಿ ಹೊಸ ಮನೆಯೂ ಕುಸಿಯುವ ಅಪಾಯದಲ್ಲಿದೆ. ಬಪ್ಪಳಿಕೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಾಗಿದ್ದು, ಭೂ ಕುಸಿತದಿಂದಾಗಿ ಪರಿಸರದ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕ ದಳ ದವರು ಮನೆ ಮಂದಿಯನ್ನು

ಮಣಿಪುರ ಗಲಭೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿಕೆ

ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು. ಪುತ್ತೂರು ಪ್ರೆಸ್‍ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ

ಪುತ್ತೂರಿನ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ನಿಷೇಧ

ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಮೊದಲ ಬಾರಿಗೆ ಈ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾದ ಹಿನ್ನಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಶೇಧಿಸಲಾಗಿದ್ದು, ಆ ಭಾಗದ

ಫಸಲ್ ಭಿಮಾ, ಬೆಳೆ ವಿಮಾ ಯೋಜನೆಯ ಕುರಿತು ಪುತ್ತೂರು ಶಾಸಕರಿಂದ ಜನತೆಗೆ ತಪ್ಪು ಮಾಹಿತಿ : ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ ಪೆರಿಯತ್ತೋಡಿ, ನಿತೀಶ್ ಶಾಂತಿವನ, ಉಪ್ಪಿನಂಗಡಿ ಸಿ.ಎ.ಬ್ಯಾಂಕ್

ಫಸಲು ಭೀಮಾ ಯೋಜನೆಗೆ ಅಡಿಕೆ ಮತ್ತು ಕಾಳುಮೆಣಸು ಸೇರ್ಪಡೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು ಭೇಟಿಯಾಗಿ ನಿನ್ನೆ ನಡೆದ ಕ್ಯಾಬಿನೆಟ್ ನಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಫಸಲು ಭೀಮಾ ಯೋಜನೆಗೆ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು. ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪಣೆಗಳು ಮಹತ್ವವಾಗಿದ್ದು 21ನೇ ಶತಮಾನದಲ್ಲಿಯೂ