Home Posts tagged #puttur (Page 28)

ಯುವಕರಿಂದ ಸಮಾಜ ಕಟ್ಟುವ ಕೆಲಸವಾಗಲಿ: ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಯುವಕರು ಸಮಾಜ ಕಟ್ಟಬೇಕು ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ

ಪುತ್ತೂರು : ಕಟ್ಟಡ ಕಾಮಗಾರಿ ಮುಗಿದರೂ ಕಾಲೇಜು ಪ್ರಾರಂಭ ಕನಸು ಇನ್ನೂ ದೂರ

ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಿರ್ಮಾಣವಾದ ಪಶು ವೈದ್ಯಕೀಯ ಕಾಲೇಜಿಗೆ 2012-13ನೇ ಸಾಲಿನಲ್ಲಿ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಬಜೆಟ್ ನಲ್ಲಿ ಪಶು ವೈದ್ಯಕೀಯ ಕಾಲೇಜು ಘೋಷಿಸಿ 145 ಕೋಟಿ ರೂ. ಮೀಸಲಿಟ್ಟಿದ್ದರು. ಬಳಿಕ ಸದಾನಂದ ಗೌಡ ಕನಸಿನ ಕೂಸಿಗೆ 2016 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರು ಶಿಲಾನ್ಯಾಸ ನೆರವೇರಿಸಿದ್ದರು. ಆದ್ರೆ ಅಂದಿನಿಂದ ಇಂದಿನ ತನಕವೂ ಕಾಮಗಾರಿ ಕುಂಟುತ್ತಾ ಸಾಗಿ ಒಂದು ಹಂತಕ್ಕೆ ಬಂದು ನಿಂತಿದೆ.

ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ- ಪಾದಚಾರಿ ಸಾವು.

ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಬೆಳಗ್ಗೆ ಕಾಲೇಜು ಬರುವಾಗ ಬೈಕ್ ಪಾದಚಾರಿ ಇಳಂತಿಲದ ಪೆರ್ನಾಂಡೀಸ್ (64 ವ.) ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ

ಪುತ್ತೂರು ತಾಲೂಕಿನ ಹಿರೇಬಂಡಾಡಿಯ ಆಶಾ ಕಾರ‍್ಯಕರ್ತೆ ಭವ್ಯ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತ್ಯು.

ಪುತ್ತೂರು :ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ

ಕಲ್ಲರ್ಪೆ : ಕಾರು ಮತ್ತು ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ಮೃತ್ಯು

ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್

ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಬೀದಿಗಿಳಿದು ಹೋರಾಟ :ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಎಚ್ಚರಿಕೆ

ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ ಪಕ್ಷ. ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಯಾವುದೇ ಸರಕಾರ ಕೆಲಸ ಮಾಡಿದರೂ ಬೀದಿಗಿಳಿದು ಹೋರಾಟ ಮಾಡಲು ಸಂತರೆಲ್ಲರೂ ಈಗಾಗಲೇ ತೀರ್ಮಾನ ಮಾಡಿದ್ದೇವೆ ಎಂದು ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ರಹಸ್ಯ ಹವನ

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ಹವನ ನಡೆಯಲಿದೆ ನಿರಂತರ 9 ದಿನಗಳ ಕಾಲ ನಡೆಯುವ ಈ ಹೋಮದ ನೇತೃತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು

ಜೂನ್ 17 ಮತ್ತು 18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023

ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇಳದಲ್ಲಿ ಸುಮಾರು 30ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳ ಲೋಕಾರ್ಪಣೆ

ಪುತ್ತೂರು : ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದ ರೀತಿಯಲ್ಲಿ ಅಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್, ಅಮೆರಿಕಾ ಫ್ಲೋರಿಡಾ ರೋಟರಿ ಕ್ಲಬ್ ನ್ಯೂ