Home Posts tagged sullia

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಆಯುರ್ವೇದ ದಿನಾಚರಣೆ

ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ

ಡಾ. ಎಂ. ಮೋಹನ ಆಳ್ವ ಅವರಿಗೆ ‘ಕೀರಿಕ್ಕಾಡು ಪ್ರಶಸ್ತಿ ‘

ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ “ಕೀರಿಕ್ಕಾಡು ಪ್ರಶಸ್ತಿ”ಯನ್ನುಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ ಕು. ಸವಿತಾ ಎಂ. ಎಸ್, ದೀಪ ಬೆಳಗಿಸಿ ಮತ್ತು ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ – 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ

ಸುಳ್ಯ: ಪಿಎಸ್ಆರ್ ಸಿಲ್ಕ್ & ಸಾರೀಸ್‌ನ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ

ಸುಳ್ಯ:ಮಂಗಳೂರಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಜವಳಿ ಉದ್ಯಮದಲ್ಲಿ ಜನರ ಮನಗೆದ್ದ ಪಿ.ಎಸ್.ಆರ್.ಸಿಲ್ಕ್ ವತಿಯಿಂದ ಸುಳ್ಯದ ಜ್ಯೂನಿಯರ್ ಕಾಲೇಜು ರಸ್ತೆಯ ಲಯನ್ಸ್ ಸೇವಾ ಸದನದಲ್ಲಿ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದು ಜನರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆ.22ರಿಂದ ಆರಂಭಗೊಂಡ ಸಾರಿಗಳ ಪ್ರದರ್ಶನ ಎರಡು ದಿನ ಮುಗಿದಿದ್ದು ಇನ್ನು ಒಂದು ದಿನ ಮಾತ್ರ ಲಭ್ಯವಿದೆ.ಆ.24 ರಂದು ಭಾನುವಾರ ರಾತ್ರಿ 8 ಗಂಟೆಯ ತನಕ ಪ್ರದರ್ಶನ ಮತ್ತು

ಸುಳ್ಯದ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ ‘ಕರಿಮಣಿ ಖರೀದಿ ಹಬ್ಬ’ :ಹಬ್ಬದ ಪ್ರಯುಕ್ತ ಎಲ್ಲಾ ಕರಿಮಣಿ ಆಭರಣಗಳಿಗೆ ವಿಶೇಷ ದರ ಕಡಿತ ಮಾರಾಟ

ಸುಳ್ಯ:ಸುಳ್ಯದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೂಂತೋಡು ಎಂಪೋರಿಯಂ ಬಿಲ್ಡಿಂಗ್‌ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಖರೀದಿ ಹಬ್ಬ’ ಗ್ರಾಹಕರ ಮನಮೆಚ್ಚಿದ ಚಿನ್ನಾಭರಣ ಮಳಿಗೆಯಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಹೆಚ್ಚಿನ ಗ್ರಾಹಕರ ಅಪೇಕ್ಷೆಯ ಮೇರೆಗೆ ‘ಕರಿಮಣಿ ಖರೀದಿ’ ಹಬ್ಬವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ.ಸುಳ್ಯ ಸೇರಿದಂತೆ ವಿವಿಧ ತಾಲೂಕಿನ ಗ್ರಾಹಕರುಜ್ಯುವೆಲ್ಸ್‌ಗೆ ಭೇಟಿ ನೀಡಿ ಕರಿಮಣಿಯನ್ನು ಖರೀದಿಸಿ

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ : ಅಕ್ಟೋಬರ್ 7 ರವರೆಗೆ ಅವಕಾಶ

ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬ‌ರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ

ಸುಳ್ಯ :ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ: ವಿಶ್ವ ಅಂಗದಾನ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದಲ್ಲಿ ದಿನಾಂಕ 13-08-2025ರಂದು ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ವಿಶ್ವ ಅಂಗಧಾನ ದಿನಾಚರಣೆ ಪ್ರಯುಕ್ತ ಮಾನವ ಶರೀರದ ಅಂಗಾಂಗ ಮಾದರಿಯ ವಸ್ತು ಪ್ರದರ್ಶನ, ಬೀದಿ ನಾಟಕ ಹಾಗೂ ಅಂಗಾಂಗ ದಾನದ ನೈಜ ಘಟನೆಯನ್ನಾದರಿಸಿದ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಶಲ್ಯ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಹರ್ಷವರ್ಧನ ಕೆ., ವಹಿಸಿ ಅಂಗಾಂಗದಾನಿಗಳ ಸಂಖ್ಯೆ

ಸುಳ್ಯ:ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ: ಶಾಲಾ ಮಕ್ಕಳ ಶಿಸ್ತು ಕಂಡು ಅಚ್ಚರಿ

ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್ ವೇಗಸ್ ರವರ ನೇತೃತ್ವದಲ್ಲಿ ಮಕ್ಕಳು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಶಾಲಾ ನಾಯಕ ಆಕಾಶ್ ನೇತೃತ್ವದಲ್ಲಿ ಬ್ಯಾಂಡ್ ಮೂಲಕ ಸ್ವಾಗತಿಸಿ ವೇದಿಕೆಗೆ ಕರೆತರಳಾಯಿತು. ಸ್ವಾಗತ ನೃತ್ಯದೊಂದಿಗೆ ಸ್ವಾಗತ

ಸುಳ್ಯ: ಅಂಗಾಂಗ ದಾನದ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕ ಪ್ರದರ್ಶನ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ ಐ.ಕ್ಯೂ.ಏ.ಸಿ ವಿಭಾಗ ಹಾಗೂ ಎನ್. ಎಂ.ಸಿ. ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ