Home Posts tagged #sullia

ಕಡಬ : ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲು ಸುಳ್ಯ ಬ್ಲಾಕ್‍ನಿಂದ ಶಿಫಾರಸ್ಸು ಮಾಡಿಲ್ಲ, ಮಮತಾ ಗಟ್ಟಿ

ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್‍ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು ಕೆ.ಪಿ.ಸಿ.ಸಿ ಉಸ್ತುವಾರಿ ಮಮತಾ ಗಟ್ಟಿ ಸ್ಪಷ್ಟಪಡಿಸಿದರು. ಅವರು ಕಡಬ ಅನುಗ್ರಹ ಸಭಾಭವನದಲ್ಲಿ ಪಕ್ಷದ

ಸುಳ್ಯ : ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

ಸುಳ್ಯ: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯದ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ. ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಸುವ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಇಂದು ಕೆಲ ನಿರ್ವಹಿಸುವ ವೇಳೆ ಒಮ್ಮೆಲೇ

ಸುಳ್ಯ: ಅಡಿಕೆ ಎಲೆಚುಕ್ಕಿ ರೋಗಕ್ಕೆ ಶಾಶ್ವತ ಪರಿಹಾರ: ಸಚಿವ ಮುನಿರತ್ನ

ಸುಳ್ಯ: ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿ, ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಗ ಬಾಧಿಕ ನಾಲ್ಕು ಕೃಷಿಕರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ರೈತರ ಅಹವಾಲು ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ

ಕಾಂಗ್ರೆಸ್‌ನಿಂದ ಕೀಳುಮಟ್ಟದ ರಾಜಕೀಯ: ಸಚಿವ ಎಸ್ ಅಂಗಾರ ತಿರುಗೇಟು

ಸುಳ್ಯ:ಪ್ರಾಕೃತಿಕ ವಿಕೋಪದಲ್ಲಿ ನಷ್ಟ ಆದವರಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 76.84 ಲಕ್ಷ ರೂ ಪರಿಹಾರ ಬಿಡುಗಡೆಯಾಗಿದೆ. ಪ್ರಾಕೃತಿಕ ವಿಕೋಪದ ಹೆಸರಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಕೃತಿಕ ವಿಕೋಪಕ್ಕೆ ಪರಿಹಾರ ನೀಡಲಾಗಿಲ್ಲ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆ ಸತ್ಯಕ್ಕೆ

ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ

ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಜು.7ರ ಗುರುವಾರ ಭೇಟಿ

ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ

ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ

ಸರಸ್ವತಿ ಕಾಮತ್ ಮೇಲೆ ಹಲ್ಲೆ ಪ್ರಕರಣ: ಹರೀಶ್ ಕಂಜಿಪಿಲಿ ಸೇರಿದಂತೆ 14 ಮಂದಿಗೆ ಜೈಲು ಶಿಕ್ಷೆಯ ತೀರ್ಪು

ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ಶ್ರೀಮತಿ ಸರಸ್ವತಿ ಕಾಮತ್ ಅವರ ಮೇಲೆ ಚುನಾವಣೆಯ ಸಂದರ್ಭದಲ್ಲಿ ಹಲ್ಲೆ ನಡೆಸಿದ ಕೇಸಿಗೆ ಒಳಗಾಗಿದ್ದ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿಗೆ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆಯ ತೀರ್ಪು ನೀಡಿದೆ. 2013 ರ ಚುನಾವಣೆ ಸಂದರ್ಭ ಮರ್ಕಂಜದ ಕುದ್ಕುಳಿ ಎಂಬಲ್ಲಿ ಘಟನೆ ನಡೆದಿತ್ತು.ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ತನ್ನ ವಾಹನವನ್ನು ಅಡ್ಡಗಟ್ಟಿ,

ಕೇರಳ ಗಡಿಭಾಗದಿಂದ ಬರುವವರ ಮೇಲೆ ನಿಗಾ ಇರಿಸಿ: ಮಂಡೆಕೋಲಿನಲ್ಲಿ ಸಚಿವ ಎಸ್ ಅಂಗಾರ

ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್‌ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ.  ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇತರ ತಾಲೂಕುಗಳೊಂದಿಗೆ ಸುಳ್ಯವನ್ನು ಹೋಲಿಸಿದರೆ, ಸುಳ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗಿದ್ದು ಇದಕ್ಕೆ ಇಲ್ಲಿನ ಜನರು ನೆರೆಯ ಕಾಸರಗೋಡು

ಸುಳ್ಯದ ಕಲ್ಚರ್ಪೆಯಿಂದ ಮಳೆ ನೀರಿನೊಂದಿಗೆ ತೋಡಿನಲ್ಲಿ ಹರಿದುಬಂದ ತ್ಯಾಜ್ಯ: ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯಿಂದ ಶ್ರಮದಾನ

ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು. ಈ ಬಗ್ಗೆ ಅಲ್ಲಿಯ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರು. ಈ ಬಗ್ಗೆ ನಗರ ಪಂಚಾಯತ್‌ಗೆ ದೂರು ನೀಡಿದ್ದರೂ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯವರು ತೋಡಿನಲ್ಲಿ

ಮಂಡೆಕೋಲು ಗ್ರಾಮದ ಅಂಬ್ರೋಟಿ-ಉದ್ದಂತಡ್ಕ ಕಾಂಕ್ರಿಟೀಕರಣಗೊಂಡ ರಸ್ತೆ ಉದ್ಘಾಟನೆ

ಸುಳ್ಯ :ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ 15ನೇ ಹಣಕಾಸು ಯೋಜನೆಯಡಿಯಲ್ಲಿ ಪ್ರಪ್ರಥಮ ಬಾರಿಗೆ 5 ಲಕ್ಷ ರೂಪಾಯಿ ಮಂಜೂರಾದ ಅನುದಾನದಲ್ಲಿ ಅಂಬ್ರೋಟಿ-ಉದ್ದಂತಡ್ಕ ರಸ್ತೆ ಕಾಂಕ್ರಿಟೀಕರಣಗೊಂಡು ಸಾರ್ವಜನಿಕ ಸಂಚಾರಕ್ಕೆ ಇಂದು ಅನುವು ಮಾಡಿಕೊಡಲಾಗಿದೆ. ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಸಿಕೊಂಡ ಮಂಡೆಕೋಲು ಗ್ರಾಮ ಪಂಚಾಯತ್‌ನ ಆಡಳಿತ ಮಂಡಳಿಯವರು ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ರಸ್ತೆ ಅಭಿವೃದ್ಧಿ, ಕುಡಿಯುವ ನೀರಿಗೆ