ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು
ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು. ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗುತು ಮನೆಯವರು, ವಿವಿಧ ಉಪಸಮಿತಿಗಳ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಮುಕ್ಕ ಶ್ರೀರಾಮ ಭಜನಾ ಮಂದಿರದಿಂದ ಆರಂಭವಾದ ರೋಡ್ ಶೋ ಮುಕ್ಕ ಮಸ್ಜಿದ್, ಮುಕ್ಕ ಸ್ಯಾಕ್ರೆಡ್ ಹಾರ್ಟ್ ಚರ್ಚ್, ಮುಕ್ಕ ಭಂಡಾರ ಮನೆಗೆ ಭೇಟಿ, ಕಾಟಿಪಳ್ಳ ಜಂಕ್ಷನ್ನಲ್ಲಿ ಸಭೆ
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.
ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು
ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ
ಸುರತ್ಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ಸಾರ್ವಜನಿಕರಿಗೆ ಅಯುಷ್ಮಾನ್ ಭಾರತ ಕಾರ್ಡ್ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯ ಕ್ರಮ ಸಮಾರಂಭ ಫೆಬ್ರವರಿ 18 ರಂದು ಆದಿತ್ಯವಾರ ಬೆಳಿಗ್ಗೆ 9-30 ಕ್ಕೆ ಬಂಟರ ಭವನ ಸುರತ್ಕಲ್ ಇಲ್ಲಿ ಆಯೋಜಿಸಲಾಗಿದೆ.ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು
ಸುರತ್ಕಲ್: ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರಿ ಅಬ್ದುಲ್ ಬಸೀರ್ ನುಡಿದರು ಅವರು ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೆಸಿಐ ಸುರತ್ಕಲ್ ಸಹಯೋಗ ದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು ಇಂದಿನ ಕಾಲಘಟ್ಟದಲ್ಲಿ ನಮ್ಮ ಆರೋಗ್ಯ ದ
ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ ಅಸಮಾಧಾನ ತೋಡಿಕೊಂಡರು. ಕುಳಾಯಿಯ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್