ಸಾಗರಮಾಲಾ ಯೋಜನೆಯಡಿ ಹೊಸಬೆಟ್ಟುವಿನಲ್ಲಿ ಜಟ್ಟಿ ನಿರ್ಮಾಣಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲಿನ ನಿರ್ವಸಿತರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು. ಅಧಿಕಾರಿಗಳು ಗ್ರಾಮಸ್ಥರ ಅಭಿಪ್ರಾಯವನ್ನು ಕೇಳದೆ, ನಮ್ಮ ನಿರ್ಧಾರಕ್ಕೆ ವಿರುದ್ಧವಾಗಿ ಕಾಮಗಾರಿ ಸಂಬಂಧ
ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಂಟರ ಯಾನೆ ನಾಡವರ ಮಾತ್ರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್
ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು. ದಾನಿ ಕೃಷ್ಣ ಶೆಟ್ಟಿ ಶ್ರೀದ್ವಾರ ಅವರು ನಿರ್ಮಿಸಿದ ಹೆದ್ದಾರಿ ಬದಿಯ ರಾಜಗೋಪುರದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಚಿತ್ರಾಪುರ
ಸುರತ್ಕಲ್: “ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ತ್ಯಾಜ್ಯ ರಾಶಿ ಬಿದ್ದು ಸಾರ್ವಜನಿಕರು ಓಡಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ನಾವು ನಾಗರಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ತಂದು 1,100,00 ರೂ. ಖರ್ಚು ಮಾಡಿ ಫ್ಲೈ ಓವರ್ ಕೆಳಗಡೆ ಸುಂದರಗೊಳಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದ್ದು, ಫೆಬ್ರವರಿ 9ರಂದು ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದುನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಹೇಳಿದರು.
ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ ಅವರಿಂದ ಹಿಡಿದು ತಳಮಟ್ಟದ ನಾಯಕರವರೆಗೆ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ”
ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ
ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು
ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು , ಯೋಗೀಶ್ ಕಾಂಚನ್ , ಚಿತ್ರದ ನಾಯಕ , ನಾಯಕಿ , ಮುಂತಾದವರು ಪಾಲ್ಗೊಂಡಿದ್ದರು.
ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.ಈ ವೇಳೆ ಮಾತಾಡಿದ ಶಾಸಕರು, “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್” ಯೋಜನೆಯಡಿಯಲ್ಲಿ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮುಂಭಾಗ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ
ಮತಾಂಧ ಕ್ರಿಮಿನಲ್ ಗಳಿಂದ ಕೊಲೆಗೀಡಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ನಡೆಸುವ ಪ್ರಯತ್ನದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿತು. ಯಾರ ತಂಟೆತಕರಾರಿಗೂ ಹೋಗದ, ತನ್ನ ಪಾಡಿಗೆ ಬದುಕು ನಡೆಸುತ್ತಿದ್ದ ಜಲೀಲ್ ಹತ್ಯೆ ಮತಾಂಧ ಶಕ್ತಿಗಳಿಂದ ಕುರುಡು