Home Posts tagged #surathkal (Page 4)

ಮಂಗಳೂರು ಉತ್ತರ ಬಿಜೆಪಿ ವತಿಯಿಂದ ರೋಡ್ ಶೋ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿ ಅವರು ಬೆಂಬಲಿಗರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜೊತೆ ಮಂಗಳವಾರ ಸಂಜೆ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಜಂಕ್ಷನ್ ವರೆಗೆ ರೋಡ್ ಶೋ ನಡೆಸಿದರು.ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಪ್ರಾಸ್ತಾವಿಕ ಮಾತನ್ನಾಡಿದ ಉತ್ತರ ಮಂಡಲ ಅಧ್ಯಕ್ಷ ತಿಲಕ್

ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರ ಪ್ರಗತಿ ಪಥ ಕೈಪಿಡಿ ಬಿಡುಗಡೆ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ” : -ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ

ಅವ್ಯವಸ್ಥೆಯ ಆಗರದಲ್ಲಿ ಸುರತ್ಕಲ್ ಮೀನು ಮಾರುಕಟ್ಟೆ, ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ

ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ ಮೀನುಗಾರಿಗೆ ತಾತ್ಕಾಲಿಕ ಮಾರುಕಟ್ಟೆಯ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ವರ್ಷ ನಾಲ್ಕು ಕಳೆದರೂ,

ಸುರತ್ಕಲ್‍ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ

ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ವಿದ್ಯುತ್ ಚಿತಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “”ಮಂಗಳೂರಿನಲ್ಲಿ ವಿದ್ಯುತ್ ಚಿತಾಗಾರವಿದ್ದು ಅಲ್ಲಿ ಹೆಣಗಳನ್ನು ಸುಡಲು ಕಾಯಬೇಕಾಗುತ್ತದೆ.

“ಭಾರತದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳೇ..!” : ಶಾಸಕ ಡಾ.ಭರತ್ ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಕಾವೂರಿನ ಸಹಕಾರಿ ಸೌಧ ಮುಂಭಾಗದಲ್ಲಿ ಜರುಗಿತು. ಪ್ರಾಸ್ತಾವಿಕ ಮಾತನ್ನಾಡಿದ ಸುಮಂಗಲ ರಾವ್ ಅವರು, “ಶಾಸಕ ಭರತ್ ಶೆಟ್ಟಿ ಅವರ ಅವಧಿಯಲ್ಲಿ ಕುಂಜತ್ತಬೈಲ್ ದಕ್ಷಿಣ ವಾರ್ಡ್ ಸಂಪೂರ್ಣ

ಚೇಳ್ಯಾರು ಮತ್ತು ಮುಂಚೂರಿನಲ್ಲಿ ಅಕ್ರಮ ಮರಳು ದಾಸ್ತಾನು ವಶಕ್ಕೆ ಪಡೆದ ಸುರತ್ಕಲ್ ಪೊಲೀಸರು

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳಾಯರು ಮತ್ತು ಮುಂಚೂರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 250-300 ಲೋಡ್ ಮರಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಬಳಿ ರಸ್ತೆ ಬದಿಯ ಕಾಂಪೌಂಡ್ ಒಳಭಾಗದಲ್ಲಿ ಸಿಸಿ ಕ್ಯಾಮಾರ ಕಣ್ಗಾವಲಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 150-200 ಲೋಡ್ ಮರಳು ಹಾಗೂ ಮುಂಚೂರು ರಸ್ತೆಯ ಬದಿಯ ಕಾಂಪೌಂಡ್‍ನ ಒಳಭಾಗದಲ್ಲಿ ರಸ್ತೆಯಲ್ಲಿ ಸಂಚರಿಸುವವರಿಗೆ ಕಾಣದಿರಲು ಮರ

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಮಹಿಳಾ ದಿನಾಚರಣೆ

ಸುರತ್ಕಲ್ : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಎ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ

ಹೊಸಬೆಟ್ಟು ಜಟ್ಟಿ ನಿರ್ಮಾಣಕ್ಕೆ ವಿರೋಧವಿಲ್ಲ,ನಿರ್ವಸಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು : ಗ್ರಾಮಸ್ಥರಿಂದ ಆಗ್ರಹ

ಸಾಗರಮಾಲಾ ಯೋಜನೆಯಡಿ ಹೊಸಬೆಟ್ಟುವಿನಲ್ಲಿ ಜಟ್ಟಿ ನಿರ್ಮಾಣಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲಿನ ನಿರ್ವಸಿತರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು. ಅಧಿಕಾರಿಗಳು ಗ್ರಾಮಸ್ಥರ ಅಭಿಪ್ರಾಯವನ್ನು ಕೇಳದೆ, ನಮ್ಮ ನಿರ್ಧಾರಕ್ಕೆ ವಿರುದ್ಧವಾಗಿ ಕಾಮಗಾರಿ ಸಂಬಂಧ ಸರ್ವೆಗೆ ಮುಂದಾಗಿರುವುದು ಖಂಡನೀಯ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಜಟ್ಟಿ

ಕುಡ್ಲ ಕಬಡ್ಡಿ-2023″ ಉದ್ಘಾಟನಾ ಸಮಾರಂಭ

ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಂಟರ ಯಾನೆ ನಾಡವರ ಮಾತ್ರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್