Home Posts tagged #udupi

ಉಡುಪಿ ಚಿಕ್ಕಮಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ : ಕಾರ್ಕಳದಲ್ಲಿ ಸಿದ್ಧತೆ

ಕಾರ್ಕಳ: ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಕಳದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು, 1000 ಚುನಾವಣಾ ಅಧಿಕಾರಿಗಳು ನಿಯುಕ್ತಿಗೊಂಡಿದ್ದಾರೆ. 587 ಸಹಾಯಕರಿದ್ದು 57 ಬಸ್‌ಗಳು 21 ಸೆಕ್ಟರ್ ಅಧಿಕಾರಿಗಳಿದ್ದು ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಸಿದ್ಧತೆಗಳು ನಡೆದು ಪೂರ್ಣಗೊಂಡಿದೆ ಎಂದು

ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್, ಸೂಕಿ ಖಾಲ ಚಾನಾ, ಆಲೂ ತಮಾಟರಿ ಕರಿ, ಪನೀರ್ ಕೋಫ್ತಾ, ರಾಜ್ಮಾ ಕರಿ, ಸಿಂಗಾರ ಪುರಿ, ರೈಸ್ ಕೀರ್,

ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೋಪಾಲ ಪೂಜಾರಿ ಅವರ ಮಾತಿಗೆ ತಿರುಗೇಟು

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ

ಉಡುಪಿ: ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ

ರಾಜಕೀಯ ಬಿಟ್ಟು ಸಮುದಾಯದ ಗೆಲುವಿಗೆ ಆದ್ಯತೆ : ಸತ್ಯಜಿತ್ ಸುರತ್ಕಲ್

ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ

ಬೈಂದೂರು :ಲೋಕಸಭಾ ಚುನಾವಣಾ ಕಾರ್ಯಗಾರ

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ ಇಂದು ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಗಾರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ರವರು ಮಹಿಳಾ ಕಾರ್ಯಕರ್ತರು ಹೇಗೆ ಚುನಾವಣೆಯಲ್ಲಿ ತಮ್ಮ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಯಗಾರ ನೆರವೇರಿಸಿದರು. ವೇದಿಕೆಯಲ್ಲಿ ಕರ್ನಾಟಕದ ಆರು ಲೋಕಸಭಾ ಕ್ಷೇತ್ರದ