Home Posts tagged #udupi (Page 11)

ಉಡುಪಿ: ಹಿರಿಯ ಧೀಮಂತ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಇನ್ನಿಲ್ಲ.

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ ಹೊಂದಿದ್ದಾರೆ. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯಾನ್ಸ್ ನಲ್ಲಿ ಕರೆದಯ್ತೂತ್ತಿದ್ದಾಗ

ಬ್ರಹ್ಮಾವರ|| ಅಂಬೇಡ್ಕರ್ ಭವನದಲ್ಲಿ ಭರ್ಜರಿ ಎಣ್ಣೆ ಪಾರ್ಟಿ: ವಿಡಿಯೋ ಮಾಡಿದ ಮಹಿಳೆಗೆ ಬೆದರಿಕೆ, ದೂರು ದಾಖಲು

ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವಿಚಾರ ತಿಳಿದ ಸ್ಥಳೀಯ ಮಹಿಳೆ ಸವಿತಾ ಎನ್ನುವವರು ಅಂಬೇಡ್ಕರ್ ಭವನಕ್ಕೆ ತೆರಳಿ ಮದ್ಯಪಾನ ಮಾಡುತ್ತಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿ, ವಿಡಿಯೋ

ಕುಂದಾಪುರ: ಕೊಲ್ಲೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಕರವೇಯಿಂದ ಅಭಿಯಾನ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ನೇತೃತ್ವದಲ್ಲಿ ಉಡುಪಿ ತಾಲೂಕು ಅಧ್ಯಕ್ಷ ಅ,ರಾ ಪ್ರಭಾಕರ್ ಪೂಜಾರಿ ಮುಂದಾಳತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಕೊಲ್ಲೂರಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ 70% ಕನ್ನಡ ಹಾಗೂ ಉಳಿದ ಭಾಷೆಗಳಿಗೆ ಶೇಕಡಾ 30/ ಕಡ್ಡಾಯಗೊಳಿಸುವಂತೆ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನ ಉದ್ದೇಶಿಸಿ ಮಾತನಾಡಿದ ಅ.ರಾ

ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ : ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇಂದು ಬಹಳ ಸಂತೋಷದ ದಿನ. ಈ ದಿನ ಬೇರೆ ವಿಚಾರವನ್ನು ನಾನು ಮಾತನಾಡಲ್ಲ. ಎಂಇಎಸ್ ಗಲಾಟೆ ಮತ್ತು ಮಹಾರಾಷ್ಟ್ರ ಮೀಸಲಾತಿ ಹೋರಾಟದ ಬಗ್ಗೆ ಸರ್ಕಾರ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದರವ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಅಗತ್ಯ ಕಾನೂನು ಕ್ರಮಗಳಿಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದೆ. ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರು.

ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ

ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೆÇಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ ಅಲ್ಮೇರಾದಲ್ಲಿದ್ದ ಸುಮಾರು 66,36,300 ರೂ. ಮೌಲ್ಯದ ಅಂದಾಜು 1882 ಗ್ರಾಂ ತೂಕದ ಚಿನ್ನಾಭರಣ ಹಾಗೂ

ಪಡುಬಿದ್ರಿ: ಮರವಂತೆಯ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ಬಣ್ಣ ಹಚ್ಚಿದ ಯುವಕರು..!!

ಪರರ ನೋವಿಗೆ ಸ್ಪಂದಿಸುವ ಮನಸ್ಸು ನಮ್ಮಲ್ಲಿದ್ದರೆ ಜಾತಿ ಮತ ಭೇದಕ್ಕೆ ಜಾಗವೇ ಇಲ್ಲ ಎಂಬುದನ್ನು ಪಡುಬಿದ್ರಿಯ ಯುವಕರ ತಂಡವೊಂದು ತೋರಿಸಿಕೊಟ್ಟಿದ್ದಾರೆ. ಪುಟ್ಟ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಬಣ್ಣ ಹಚ್ಚಿ ಅದರಿಂದ ಸಂಗ್ರಹಗೊಂಡ ಹಣನ್ನು ಆ ಮಗುವಿನ ಕುಟುಂಬಕ್ಕೆ ಹಸ್ತಾಂತರ ಮಾಡುವ ಮೂಲಕ ಸಾಭೀತು ಪಡಿಸಿದ್ದಾರೆ. ಮರವಂತೆಯ ಬಡ ಕುಟುಂಬದ ಶಂಕರ ಪೂಜಾರಿ ಎಂಬವರ ಏಳರ ಹರೆಯದ ಪುಟ್ಟ ಬಾಲೆ ವೈಷ್ಣವಿಗೆ ಕಾಲು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ವೈದ್ಯರಲ್ಲಿ

ಉಡುಪಿ: ಬಯ್ ಹುಲ್ಲಿನ ಬೇಲ್, 50 ವರುಷದ ಹಿಂದಿನ ನೆನಪು

ನಾವು ಸಣ್ಣವರಿದ್ದಾಗ ಮನೆಯವರೆಲ್ಲ ಕೃಷಿ ಕಾರ್ಮಿಕರೆ. ಈಗ ಬೇಸಾಯ ಬಲ್ಲವರು ಕಡಿಮೆ. ಹೊಸ ತಲೆಮಾರು ಗದ್ದೆಗೆ ಇಳಿಯುವುದಿಲ್ಲ. ಆದರೆ ಕೃಷಿಗೆ ಯಂತ್ರಗಳ ಬಾಡಿಗೆ ನೆರವು ಧಾರಾಳ ಸಿಗುತ್ತದೆ. ಎಪ್ಪತ್ತರ ದಶಕದಲ್ಲಿ ಕೆಲವು ಇಂಗ್ಲಿಷ್ ಚಿತ್ರಗಳಲ್ಲಿ ಬೆಳೆಯ ಹುಲ್ಲಿನ ಕಟ್ಟು ಕಂಡಾಗ ಎಷ್ಟು ಅಚ್ಚುಕಟ್ಟು ಎಂದುಕೊಂಡದ್ದಿದೆ. ಈ ಒಣ ಹುಲ್ಲಿನ ಕಟ್ಟನ್ನು ಇಂಗ್ಲಿಷಿನಲ್ಲಿ ಬೇಲ್ ಎನ್ನುತ್ತಾರೆ. ಕಟಾವು ಮಾಡಿ ಈ ಕಟ್ಟು ಕಟ್ಟುವ ಯಂತ್ರವನ್ನು ಬೇಲರ್ ಎನ್ನುವರು. ಪೇರೂರು

ಉಡುಪಿ: ಕೇರಳದಲ್ಲಿ ಬಾಂಬ್ ಸ್ಫೋಟ ವಿಚಾರ: ಕರಾವಳಿ ಗಡಿ ಭಾಗದಲ್ಲಿ ತೀವ್ರ ನಿಗಾ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಕೇರಳ ರಾಜ್ಯದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇವೆ. ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆ ತೀವ್ರ ನಿಗಾ ಇರಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳು ನಡೆಯಲು ಬಿಡಲ್ಲ. ಯಾವುದೇ ವ್ಯಕ್ತಿ ಅಥವಾ

ಕುಂದಾಪುರ: ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಕುಂದಾಪುರದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ

ಉಡುಪಿ: ಉದ್ಯಾವರ ಸಾರ್ವಜನಿಕ ಶಾರದಾ ಸಮಿತಿಯಿಂದ ವೈಭವದ ಶೋಭಾಯಾತ್ರೆ

ಉಡುಪಿಯ ಉದ್ಯಾವರ ಸಾರ್ವಜನಿಕ ಶಾರದಾ ಸಮಿತಿಯ ಶಾರಾದ ವಿಸರ್ಜನಾ ವೈಭವದ ಮೆರವಣಿಗೆಯು ನಡೆಯಿತು.ವಿಸರ್ಜನಾ ಮೆರವಣಿಗೆಯಲ್ಲಿ ಹತ್ತಾರು ಟ್ಯಾಬ್ಲೋಗಳು, ಚಂಡೆ ವಾದ್ಯ ಮೇಳಗಳು ಭಾಗವಹಿಸಿದ್ದವು. ಉದ್ಯಾವರ, ಮೇಲ್ಪೇಟೆ ಮಾರ್ಗವಾಗಿ ಪಿತ್ರೋಡಿ ವರೆಗೆ ವೈಭವ ಮೆರವಣಿಗೆಯಲ್ಲಿ ಸಾಗಿ ಬಂದ ಶಾರದೆಯನ್ನು ಕಂಡು ಜನ ಭಕ್ತಿ ಪರವಶರಾದರು.ಇನ್ನೂ ವಿಶೇಷವಾಗಿ ಮೆರವಣಿಗೆಯಲ್ಲಿ ಚಂಡೆ ಹಾಗೂ ವಾಯಿಲಿನ್ ಫ್ಯೂಶನ್ ಸಂಗೀತದ ನಾದಕ್ಕೆ ಜನ ಮೈಮರೆತರು.