Home Posts tagged ullala

ಉಳ್ಳಾಲ: ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ – ಸಾಮೂಹಿಕ ಅತ್ಯಾಚಾರ ಯತ್ನ ಶಂಕೆ – ಪೊಲೀಸರಿಂದ ತನಿಖೆ

ಉಳ್ಳಾಲ: ಯುವತಿಯೋರ್ವಳು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ಪತ್ತೆಯಾಗಿದ್ದು, ಮೈಪೂರ್ತಿ ಗಾಯದ ಗುರುತು ಪತ್ತೆ ಆಗಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ಮೇಲೆ ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.ತಡರಾತ್ರಿ ವೇಳೆ ಹೊರರಾಜ್ಯದ ಯುವತಿ ನಶೆಯಿಂದ ಸ್ಥಳೀಯ ಮನೆಬಾಗಿಲು ಬಡಿದಿದ್ದಾಳೆ. ನೀರು ಕೇಳುತ್ತಿದ್ದಂತೆ

ಉಳ್ಳಾಲ : ಮರ ಉರುಳಿ ಮನೆ ಛಾವಣಿಗೆ ಅಪಾರ ಹಾನಿ

ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್‌ ತೇವುಲ ಎಂಬವರಿಗೆ ಸೇರಿದ ಮನೆಗೆ ಹಾನಿಯುಂಟಾಗಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಯಿಂದ ಆವಾಂತರ ಉಂಟಾಗಿದೆ. ಮನೆಯೊಳಗೆ ಮನೆಮಂದಿಯಿದ್ದರೂ ಯಾವುದೇ ಜೀವಹಾನಿಯಿಲ್ಲದೇ ಪಾರಾಗಿದ್ದಾರೆ. ಮರ ನೇರವಾಗಿ ಛಾವಣಿ

ಅಸೈಗೋಳಿ: ರಿಕ್ಷಾ ಚಾಲಕ ಆತ್ಮಹತ್ಯೆ

ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರು ಕೆಲವು ತಿಂಗಳಷ್ಟೇ ಹೊಸ ರಿಕ್ಷಾ ಖರೀದಿಸಿದ್ದರು.ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ನಾಟೆಕಲ್ :ಬಸ್-ಕಾರು ಅಪಘಾತ , ನಾಲ್ವರಿಗೆ ಗಾಯ

ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ, ಅರಾಫತ್ ಇನೋಳಿ ಎಂಬವರ ಕಾಲಿನ ಮೂಳೆಗಳು ಮುರಿತಕ್ಕೊಳಗಾಗಿದೆ. ಉಳಿದಂತೆ ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಎನ್ .ಎಸ್ ಟ್ರಾವೆಲ್ಸ್ ಬಸ್ಸು ವಿರುದ್ಧ

ಉಳ್ಳಾಲ : ಕರಂಬಾರು ಶಾಲೆಯಲ್ಲಿ ಆಟಿಡೊಂಜಿ ದಿನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಉದ್ಘಾಟನೆ ನೆರವೇರಿಸಿ ಮಾತನಾಡಿ, “ಹಿಂದಿನ ಕಾಲದಲ್ಲಿ ಆಟಿ ತಿಂಗಳು ತುಳುವರ ಕಷ್ಟದ ದಿನಗಳಾಗಿತ್ತು.

ಮಂಗಳೂರು ಕಮ್ಯುನಿಟಿ ಸೆಂಟರ್ ಶುಭಾರಂಭ

ಉಳ್ಳಾಲ : ನಮ್ಮ ನಾಡ ಒಕ್ಕೂಟ ಇದರ ಆಶ್ರಯದಲ್ಲಿ ಮಂಗಳೂರು ಕಮ್ಯುನಿಟಿ ಸೆಂಟರ್ ತೊಕ್ಕೊಟ್ಟುವಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಆರಂಭಗೊಂಡಿತು. ವಿಧಾನ ಸಭಾ ಸ್ವೀಕರ್ ಯು ಟಿ ಖಾದರ್ ಫರೀದ್ ಮಂಗಳೂರು ಕಮ್ಯುನಿಟಿ ಸೆಂಟರ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಜನರಿಗೆ ಮೂಲಭೂತ ಸೌಕರ್ಯ ಗಳನ್ನು ಪಡೆಯಲು ಇಂತಹ ಸೇವೆ ಅವಶ್ಯಕತೆ ಇದೆ.ಶಿಕ್ಷಣ, ಉದ್ಯೋಗ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಅಗತ್ಯ ಇರುತ್ತದೆ.ಇದನ್ನು ನಮ್ಮ ನಾಡ ಒಕ್ಕೂಟ ಉಚಿತ ವಾಗಿ

ಉಳ್ಳಾಲ: ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ – ಹಣ್ಣು ಹಂಪಲು ಅಂಗಡಿಗಳು ಭಸ್ಮ

ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್, ಇಂಡಿಯನ್, ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್

ಮಾಲ್ ಗೆ ತೆರಳಿದ ಎರಡು ಮಕ್ಕಳ ತಾಯಿ ನಾಪತ್ತೆ

ಉಳ್ಳಾಲ : ನಗರದ ಸಿಟಿ ಸೆಂಟರ್ ಮಾಲ್ ಗೆಂದು ತೆರಳಿದ್ದ ಚೆಂಬುಗುಡ್ಡೆ ನಿವಾಸಿ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.ಚೆಂಬುಗುಡ್ಡೆ ಕೆರೆಬೈಲ್ ಗುಡ್ಡೆ ನಿವಾಸಿ ಸಫಾನ (27) ನಾಪತ್ತೆ ಯಾದವರು.ಎ.28 ರಂದು ತಾಯಿ ಜೊತೆಗೆ ಸಿಟಿಸೆಂಟರ್ ಗೆಂದು ತೆರಳಿರುವ ಸಫಾನ, ಬಳಿಕ ಮನೆಯತ್ತ ಬಾರದೇ ನಾಪತ್ತೆಯಾಗಿದ್ದಾಳೆ. ವಿವಾಹಿತೆಯಾಗಿರುವ ಸಫಾನ ಇಬ್ಬರು ಮಕ್ಕಳ ತಾಯಿಯಾಗಿದ್ದಾಳೆ. ಈಕೆಯನ್ನು

ಉಳ್ಳಾಲ : ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ  ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲ ಮೊಗವೀರಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬವರನ್ನು 2016ಎಪ್ರಿಲ್ 12 ರಂದು ಆರೋಪಿಗಳು ಬೆಳಗ್ಗಿನ ಜಾವ  ಉಳ್ಳಾಲ ಕೋಟೆಪುರ ಬರಕಾ ಓವರ್ ಸೀಸ್ ಫ್ಯಾಕ್ಟರಿಯ ಬಳಿ ಮರದ ಕಟ್ಟಿಗೆಗಳಿಂದ

ಉಳ್ಳಾಲದ ಮೊಗವೀರ ಬಾಲಕಿಯ ಮಹತ್ತರ ಸಾಧನೆ

ಉಳ್ಳಾಲ: 2024ರ ಮೇ, ತಿಂಗಳಲ್ಲಿ ಅಮರಿಕಾದ ನ್ಯೂಯಾರ್ಕ್‌ನಲ್ಲಿ ಜರಗುವ ವರ್ಲ್ಡ್ ಸೈನ್ಸ್ ಸ್ಕಾಲರ್ ಕಾರ್ಯಕ್ರಮಕ್ಕೆ ಉಳ್ಳಾಲದ ಮೊಗವೀರ ಸಮಾಜದ ಬಾಲಕಿ ಸಿಂಧೂರಳಿಗೆ ಆಹ್ವಾನ ಬಂದಿದ್ದು, ಮುಂದಿನ ತಿಂಗಳು ತಾಯಿ ಮಗಳು ಇಬ್ಬರು ಭಾಗಿಯಾಗಲಿದ್ದಾರೆ ಎಂದು ಬಾಲಕಿಯ ತಾಯಿ ಶಿಬಾನಿ ರಾಜಾ ಹೇಳಿದರು. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ಪ್ರೆಸ್‌ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ನ್ಯೂಯಾರ್ಕ್‌ನಲ್ಲಿ ನಡೆಯುವ ವರ್ಲ್ಡ್ ಸೈನ್ಸ್ ಸ್ಕಾಲರ್