ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು
ಬೈಂದೂರು:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅಕ್ಟೋಬರ್ 03 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಗ್ರಾಮ ದೇವತೆಯಾದ ಶ್ರೀ ಉಪ್ಪುಂದ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ಬೆಳಿಗ್ಗೆ ದೇವಸ್ಥಾನದ ವತಿಯಿಂದ ದುರ್ಗಾಹೋಮ ಹಾಗೂ ಭಕ್ತರು ಸೇವಾ ರೂಪದಲ್ಲಿ ಶ್ರೀ
ಭಾರತದ ಚಂದ್ರಯಾನ-೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ISRO ಎಂಬ ರಚನಾ ವಿನ್ಯಾಸವನ್ನು ರಚಿಸಿ ಅಭಿನಂದನೆ ಸಲ್ಲಿಸಲಾಯಿತು. ಕಳೆದ ಬಾರಿ ಇದೇ ಸಂಸ್ಥೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ೭೫ ಎಂಬ ರಚನಾ ವಿನ್ಯಾಸವನ್ನು ರಚಿಸಿ ರಾಜ್ಯಾದ್ಯಂತ ಗಮನಸೆಳೆದಿದ್ದರು.
ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ತಾರಾಪತಿ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಅಂದಾಜು 5 ನಾಟಿಕಲ್ ಮೈಲುಗಳ ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಬಲೆಗಳ ನಡುವೆ ಸಿಲುಕಿದ್ದ ಓರ್ವ
ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ ಲಕ್ಷ 6 ಹಸ್ತಾಂತರಿಸಲಾಗುತ್ತಿದೆ.
ಬೈಂದೂರು ತಾಲ್ಲೂಕಿನ ಉಪ್ಪುಂದ ಮಡಿಕಲ್ನ ಕರ್ಕಿಕಳಿ ಎಂಬಲ್ಲಿ ಸಂಜೆ ದೋಣಿ ದುರಂತ ಸಂಭವಿಸಿದ್ದು, ಒಬ್ಬರು ಮೃತಪಟ್ಟು ಒಬ್ಬರು ನಾಪತ್ರೆಯಾಗಿದ್ದಾರೆ. ನಾಗೇಶ್ (30)ಮೃತಪಟ್ಟಿದ್ದು, ಸತೀಶ್ ಖಾರ್ವಿ(34) ನಾಪತ್ತೆಯಾಗಿರುವ ಮೀನುಗಾರ. ಸಚಿನ್ ಖಾರ್ವಿ ಮಾಲೀಕತ್ವದ ಮಾಸ್ತಿ ಮರ್ಲು ಚಿಕ್ಕು ಪ್ರಸಾದ ಹೆಸರಿನ ನಾಡದೋಣಿಯಲ್ಲಿ ಬೆಳಿಗ್ಗೆ ಭಟ್ಕಳ ಬಂದರಿನಿಂದ ಮೀನುಗಾರಿಕೆಗೆ ತೆರಳಿ ಮೀನುಗಾರಿಕೆ ಮುಗಿಸಿಕೊಂಡು ಉಪ್ಪುಂದ ಮಡಿಕಲ್ನ ಕರ್ಕಿಕಳಿ ಬಳಿ
ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ ೬ ಸೆಮಿಸ್ಟರ್ಗಳ ಅಂಕಪಟ್ಟಿಗಳನ್ನು
ಮುಕ್ತ ಸಮಾಜದಲ್ಲಿ ದುಡಿದು ತಿನ್ನುವ ಹಂಬಲವಿದ್ದರೆ, ಕಾಯಕಕ್ಕೇನು ಕೊರತೆ ಇಲ್ಲಾ ಎನ್ನುವುದನ್ನು ನಮ್ಮ ಕರಾವಳಿಯ ಯುವ ಸಮುದಾಯ ಸಾಬೀತು ಪಡಿಸಿದೆ. ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಪ್ರಮುಖ ಕಸುಬು ಎಂದರೆ ತಪ್ಪಾಗಲಾರದೇನು, ಅದರಿಂದಲೇ ಎಸ್ಟೋ ಜನ ಯಶಸ್ಸು ಕಂಡವರಿದ್ದಾರೆ. ಅಂತೆಯೇ ಇದೀಗ ಹೊಸ ಪ್ರಯೋಗವೆಂಬಂತೆ ಪಂಜರು ಕೃಷಿಯನ್ನು ಆರಂಭಿಸಿ, ಅದರಿಂದ ಯಶಸ್ಸು ಗಳಿಸಿದ ಯುವ ಸಮೂಹ ಸಮಾಜಕ್ಕೇ ಹೊಸ ಉದ್ಯಮದ ಭರವಸೆ ನೀಡಿದೆ. ಬೈಂದೂರು ತಾಲೂಕಿನ ಉಪ್ಪುಂದ ಉಪ್ಪುಂದ
ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಸಾರ್ವಜನಿಕ ಸೇವೆಯಲ್ಲಿ ಸಂಘವು ವರ್ಷದಲ್ಲಿ ಎಲ್ಲ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ವರದಿ ವರ್ಷದಲ್ಲಿ ಸಂಘವು ರು.4.69ಕೋಟಿ ಲಾಭಗಳಿಸಿದ್ದು ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಿ, ತಾಲೂಕು ವ್ಯಾಪ್ತಿಗೆ
ಶ್ರಮ್ ಚಾರಿಟೇಬಲ್ ಟ್ರಸ್ಟ್ ರಿ ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ದೇವರಿಗೆ ವಿಶೇಷ ಬಾಳೆದಿಂಡಿನ ಗೋಪುರ ನಿರ್ಮಿಸಿ ವಿವಿಧ ಜಾತಿಯ ಹೂಗಳಿಂದ ಜಾತಿಯ ಅಲಂಕರಿಸಲಾಗಿತ್ತು.ಮಣೆಯ ಮೇಲೆ ಹೊಸ ಬಟ್ಟೆಯನ್ನು ಹಾಕಿ ಅದರ ಮೇಲೆ ಅಕ್ಕಿ ಹರಡಿ ಕಳಶ ಇಟ್ಟು ಅದಕ್ಕೆ ಕುಂಕುಮ, ಅರಿಸಿಣ ಹಚ್ಚಲಾಗಿತ್ತು, ಕಳಸದ ಮೇಲೆ ತೆಂಗಿನಕಾಯಿ ಇಟ್ಟು