Home Posts tagged #v4news (Page 8)

2022ನೇ ಸಾಲಿನ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಸಮಾಜ ಸೇವಾ ಪ್ರಶಸ್ತಿ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ 2022 ಪುರುಷ ಮತ್ತು ಮಹಿಳಾ ಈ ಎರಡು ವಿಭಾಗಗಳಲ್ಲಿ ಪ್ರಕಟವಾಗಿವೆ.ಸಾರ್ವಜನಿಕ ಕ್ಷೇತ್ರದಲ್ಲಿ ವಿಶೇಷ ಸೇವೆಗೈಯುವ ಕೊಂಕಣಿ ಭಾಷಿಕರನ್ನು ಗುರುತಿಸಿ ಗೌರವಿಸುವ ಈ ಪುರಸ್ಕಾರವನ್ನು 2014ರಲ್ಲಿ ವಿಶ್ವ ಕೊಂಕಣಿ ಕೇಂದ್ರದ

ಗೋಸಂತತಿ ಹೆಚ್ಚಿಸಲು ಯೋಜನೆ ಜಾರಿಗೊಳಿಸಬೇಕಿದೆ : ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿಕೆ

ಉಳ್ಳಾಲ: ಗೋಸಂತತಿ ಕಡಿಮೆಯಿದೆ. ಅದನ್ನು ಹೆಚ್ಚು ಮಾಡುವ ಕೆಲಸ ಆಗಬೇಕಿದೆ. ಗೋವುಗಳನ್ನು ಸಾಕುವವರಿಗೆ ಅದರ ಕಷ್ಟಗಳು ಗೊತ್ತಿದೆ ಹೊರತು ಭಾಷಣ ಮಾಡುವವರಿಗೆ ಕಷ್ಟದ ಬಗ್ಗೆ ಗೊತ್ತಿಲ್ಲ. ಗೋಸಾಕುವವರಿಗೆ ಶೇ.90 ಕ್ಕಿಂತ ಹೆಚ್ಚಿನ ಸಬ್ಸಿಡಿಯನ್ನು ಸರಕಾರ ನೀಡಿ ಗೋವುಗಳನ್ನು ಸಾಕಲು ಪ್ರೋತ್ಸಾಹಿಸಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ದ.ಕ ಜಿಲ್ಲಾ ಪಂಚಾಯತ್ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಳ್ಳಾಲ ತಾಲೂಕು ಇದರ 2021-22 ನೇ ಸಾಲಿನ

ಬೆಳ್ತಂಗಡಿ : ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ ಕೆಳ ಭಾಗ ಕಳೆದ ಒಂದು ವಾರದಿಂದ ಕುಸಿಯುತ್ತಿರುವ ಬಗ್ಗೆ ಪಟ್ಟಣ ಪಂಚಾಯತ್ ಗೆ ಮೌಖಿಕ ಮಾಹಿತಿ ನೀಡಲಾಗಿತ್ತು. ಆದರೆ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ. ನಿರಂತರ ಒತ್ತಡದಿಂದ ಇಂದು

ಭಾರತೀಯ ಸನಾತನ ಪರಂಪರೆ ಅಮೂಲ್ಯವಾದದ್ದು : ಅಮೃತ ವೈಭವದಲ್ಲಿ ಸಂಪೂಜ್ಯ ಸ್ವಾಮೀ ಪೂರ್ಣಾಮೃತಾನಂದ ಪುರಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ “ಅಮೃತ ವೈಭವ” ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.ಅಮೃತಪುರಿಯಿಂದ ಆಗಮಿಸಿದ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ, ಟ್ರಸ್ಟೀ ಹಾಗೂ ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರಿಂದ,ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣರವರ ದಿವ್ಯ ಉಪಸ್ಥಿತಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೈಭವ ಪೂರ್ಣವಾಗಿ

ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಯಾಮಗಳಲ್ಲಿ ಒಂದಾದ ಸ್ಟೂಡೆಂಟ್ಸ್ ಫಾರ್ ಡೆವೆಲಪ್ ಮೆಂಟ್ (SFD) ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ ಮಂಗಳೂರಿನ ತಣ್ಣಿರ್ ಬಾವಿ ಬೀಚ್ ನಲ್ಲಿ 01/01/2023 ಆದಿತ್ಯವಾರ ದಂದು ನಡೆಯಿತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು .ಕಾರ್ಯಕ್ರಮದಲ್ಲಿ SFD ಮಂಗಳೂರು ವಿಭಾಗ ಸಂಚಾಲಕರಾದ ನಿಶಾನ್ ಆಳ್ವ ಕಾವೂರು, ಎಬಿವಿಪಿ ಮಂಗಳೂರು ತಾಲೂಕು

ಜಲೀಲ್ ಹತ್ಯೆ ಖಂಡಿಸಿ ಕರ್ನಾಟಕ ಮುಸ್ಲಿಂ ಜಮಾಅತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮನವಿ : ನಾಳೆ ಧರಣಿ

ಕರಾವಳಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು ಹತ್ಯೆ ಮಾಡಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡರು ಮನವಿ ಸಲ್ಲಿಸಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳನ್ನ ಮಟ್ಟ ಹಾಕಬೇಕು. ಜೊತೆಗೆ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು

ಮೂಡುಬಿದರೆಯಲ್ಲಿ ಎಳ್ಳಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ

ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ ದೇವಾಲಯಕ್ಕೆ ಪೂಜೆಗೈದು ನದಿಯಲ್ಲಿ ದಾನ ಬಿಟ್ಟು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಈ

ಕಡಬದಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ಶುಭಾರಂಭ

ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಮಾಲಕ ರಮೇಶ್ ಪಾದರೆ ಎಲ್ಲರ ಸಹಕಾರ ಕೋರಿದರು. ಸಂಸ್ಥೆಯ ಮಾಲಕರ ಧರ್ಮಪತ್ನಿಯಾದ ಶ್ರುತಿ ಟಿ

ನೀರಿನಲ್ಲಿ ಬಂಡಿ ಉತ್ಸವ ನೆರವೇರುವುದರೊಂದಿಗೆ ಕುಕ್ಕೆ ಜಾತ್ರೆ ಸಂಪನ್ನ

ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ : ಇಳಿದ ಕೊಪ್ಪರಿಗೆ: ಮಹಾಸಂಪ್ರೋಕ್ಷಣೆ : ಯಶಸ್ವಿಯನೀರಾಟ : ಚಿಣ್ಣರ ಸಂಭ್ರಮ ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊoಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ