Home Posts tagged #v4news karnataka (Page 259)

ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ

ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲೆ ಪುನರಾರಂಭಿಸಿ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ

ಬಂಟ್ವಾಳ: ರಾಜ್ಯದ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೋವಿಡ್ ಕಾರಣಕ್ಕಾಗಿ ಸ್ಥಗಿತಗೊಂಡಿರುವ ಶಾಲೆಯನ್ನು ಪುನಾರಂಭಿಸಬೇಕು ಎಂದು ಆಗ್ರಹಿಸಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಸೋಮವಾರ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಪ್ರಕಾಶ್ ಅಂಚನ್ ಕೆಲ

ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತೇನೆ : ಮಂಜುನಾಥ ಪೂಜಾರಿ

ಕಾರ್ಕಳ: ಒಬ್ಬ ತುಳುವನಾಗಿ ತುಳುನಾಡಿನ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ವಿಶೇಷ ಗೌರವವನ್ನು ಹೊಂದಿರುವ ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತಿರುವುದಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾರ್ಕಳಕ್ಕೆ ಬರಮಾಡಿಕೊಳ್ಳಲು ಆಹ್ವಾನಿಸುವ ಜತೆಗೆ,

ಸ್ಟ್ಯಾನ್ ಸ್ವಾಮಿಗೆ ನ್ಯಾಯ ಒದಗಿಸುವಂತೆ ವಿನೋದ್ ವಾಲ್ಟರ್ ಪಿಂಟೊ ಒತ್ತಾಯ

ಮೂಡುಬಿದಿರೆ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಸೇರಿ ಕಾನೂನು ಹೋರಾಟ ನಡೆಸುತ್ತಿರುವಾಗಲೇ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟ ಧರ್ಮಗುರು, ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರಿಗೆ ಇನ್ನಾದರು ಸರ್ಕಾರ ನ್ಯಾಯ ಒದಗಿಸಬೇಕೆಂದು ವಿನೋದ್ ವಾಲ್ಟರ್ ಪಿಂಟೊ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರ ಆರೋಪವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಾದ್ಯವಾಗಿಲ್ಲ. ತೀವ್ರ

ಮೂಡುಬಿದಿರೆಯಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ

ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಒಂಟಿಕಟ್ಟೆಯ ಕಡಲ ಕೆರೆ ನಿಸರ್ಗಧಾಮದ ಸಾಲುಮರ ತಿಮ್ಮಕ್ಕ ಸಸ್ಯೋದ್ಯಾನವನ ಆವರಣದಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನವನ್ನು ಶುಕ್ರವಾರ ಸಾಯಂಕಾಲ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪರಿಸರವನ್ನು ನಾವು ಸಂರಕ್ಷಿಸಿದಲ್ಲಿ

ಬಂಟ್ವಾಳದ ಕಲ್ಲಗುಡ್ಡೆಯಲ್ಲಿ ಮನೆ ಮೇಲೆ ಆವರಣಗೋಡೆ ಕುಸಿತ: ಮನೆಮಂದಿ ಪವಾಡ ಸದೃಶ ಪಾರು

ಬಂಟ್ವಾಳ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ ಪಾರಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು 5 ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ. ಸೋಮನಾಥ ಕುಲಾಲ್ ಎಂಬವರಿಗೆ ಸೇರಿದ ಈ ಮನೆಯನ್ನು ನವೀನ್ ಎಂಬವರಿಗೆ ವಾಸ್ತವ್ಯಕ್ಕಾಗಿ ಬಾಡಿಗೆಗೆ ನೀಡಲಾಗಿತ್ತು. ಅವರು ಪತ್ನಿ ಪವಿತ್ರ ಹಾಗೂ ಮಗಳೊಂದಿಗೆ ಈ ಮನೆಯಲ್ಲಿ

ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್:ರೋಗಿಯನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಅಡ್ಡಿ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿದ ಹಿನ್ನಲೆಯಲ್ಲಿ ತುರ್ತಾಗಿ ಹೋಗುವ ಆಂಬ್ಯುಲೆನ್ಸ್‌ಗೆ ಅಡ್ಡಿಯಾದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಒಂದು ಕಡೆ ಕೋವಿಡ್ ಲಸಿಕೆ ನೀಡಿಕೆ ಮತ್ತೊಂದು ಕಡೆ ಉತ್ತಮ ಸೇವೆ ಸಿಗುವ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಿದು, ಆಸ್ಪತ್ರೆಗೆ ಬರುವವರು ಆಸ್ಪತ್ರೆಯ ವಠಾರದ ದಾರಿಯಲ್ಲೆ ಅಡ್ಡಾದಿಡ್ಡಿ ವಾಹನ

ಹೆಂಡತಿಯನ್ನು ಬಿಟ್ಟು ನಾದಿನಿಯೊಂದಿಗೆ ಗಂಡ ಪರಾರಿ..!! ಬೆಳ್ತಂಗಡಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು.!

ಮದುವೆಯಾಗಿ ಒಂದು ವರ್ಷವಾಗುವ ಮೊದಲೇ ಹೆಂಡತಿಯನ್ನು ತೊರೆದು ನಾದಿನಿಯೊಂದಿಗೆ ಓಡಿ ಹೋದ ಘಟನೆ ಬೆಳ್ತಂಗಡಿ ತಾಲೋಕಿನ ಕನ್ಯಾನದ ಕೈಕಂಬ ಎಂಬಲ್ಲಿ ನಡೆದಿದ್ದು ಸದ್ಯ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಕನ್ಯಾನದ ಮಹಮ್ಮದ್ ಎಂಬುವವರ ಪುತ್ರಿ ಸೌಧಳನ್ನು ಒಂಭಂತು ತಿಂಗಳ ಹಿಂದೆ ಪುಸ್ತಾಫಾ ಎಂಬುವವನು ಮದುವೆಯಾಗಿದ್ದ. ನಾದಿನಿ ರೈಹಾನಾಳೊಂದಿಗೆ ಮುಸ್ತಾಫಾ ಸಲುಗೆಯಿಂದ ಇದ್ದ. ಈ ನಡುವೆ ಸೌಧಳೊಂದಿಗೆ ಜಗಳವಾಡಿ ಮಾತು ಬಿಟ್ಟಿದ್ದ

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ : ಡೊಂಗರಕೇರಿ ಕಟ್ಟೆಯ ಬಳಿ ಪುರಾತನ ಬಾವಿ ಪತ್ತೆ

ಮಂಗಳೂರು ನಗರದಾದ್ಯಂತ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದ್ದು ನಗರದ ಡೊಂಗರಕೇರಿ ಕಟ್ಟೆಯ ಬಳಿ ಕಾಮಗಾರಿಯನ್ನು ನಡೆಸುತ್ತಿರುವ ಸಂದರ್ಭ ಪುರಾತನ ಬಾವಿಯೊಂದು ಪತ್ತೆಯಾಗಿದೆ. ನಗರದ ಅಲ್ಲಿಲ್ಲಿ ಕಾಮಗಾರಿ ವೇಳೆ ಬಾವಿ ಪತ್ತೆಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ನಗರದ ಡೊಂಗರಕೇರಿ ಕಟ್ಟೆಯ ಬಳಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ರಸ್ತೆ ಫುಟ್‍ಬಾತ್ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ವೇಳೆ ಪುರಾತನ ಬಾವಿ ಪತ್ತೆಯಾಗಿದ್ದು, ತಕ್ಷಣ ಮಹಾನಗರ ಪಾಲಿಕೆ

ಮರವೂರು ಸೇತುವೆ ಕುಸಿತದಿಂದ ಕಂಗೆಟ್ಟ ಸ್ಥಳೀಯರು : ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಸೇತುವೆಯೆಂದರೆ ಕೇವಲ ಎರಡು ಊರಿನ ಸಂಪರ್ಕದ ಕೊಂಡಿ ಮಾತ್ರವಲ್ಲ ಎರಡು ಊರಿನ ಜನರ ಸಂಬಂಧದ ಕೊಂಡಿ. ಮರವೂರು ಸೇತುವೆ ಕುಸಿತದಿಂದ ಎರಡು ಊರಿನ ಸಂಪರ್ಕ ಕಳೆದುಕೊಂಡು 3 ವಾರಗಳು ಕಳೆದಿವೆ. ಆದರೆ ಇದರ ದುರಸ್ತಿ ಕಾರ್ಯ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿದೆ ಈ ಬಗ್ಗೆ ಸ್ಪೆಷಲ್ ರಿಪೋರ್ಟ್. ಮರವೂರು ಸೇತುವೆ ಕುಸಿತವಾಗಿ ಸುಮಾರು 3 ವಾರಗಳು ಕಳೆದಿವೆ. ಸಂಪೂರ್ಣ ಎರಡು ಕಡೆಯ ಸಂಪರ್ಕ ಕಳೆದುಕೊಂಡಿದೆ. ಕಾರಣಗಳ ಕುರಿತು