Home Posts tagged #v4news karnataka (Page 260)

ಕೋಟಿ ಗಟ್ಟಲೆ ವೆಚ್ಚದಲ್ಲಿ ನಿರ್ಮಾಣಗೊಂಡು 3ವರ್ಷ ಕಳೆದರೂ, ಆರಂಭವಾಗಿಲ್ಲ ಉರ್ವ ಮಾರುಕಟ್ಟೆ

ಅದು ಬರೋಬರಿ 13.5 ರೂ ಕೋಟಿ ವೆಚ್ಚದಲ್ಲಿ ನಡೆದ ಮಾರ್ಕೇಟ್….. ಉದ್ಘಾಟನೆಗೊಂಡು 3 ವರ್ಷ ಕಳೆದರೂ , ವ್ಯಾಪಾರಕ್ಕಾಗಿ ಗ್ರಾಹಕರಿಗೆ ಬಿಟ್ಟುಕೊಟ್ಟಿಲ್ಲ…. ಬೀಕೋ ಎನ್ನುತ್ತಿರುವ ಕಟ್ಟಡ… ಹಾಗಾದ್ರೆ ಅದು ಯಾವ ಮಾರುಕಟ್ಟೆ ಅಂತೀರಾ ಇಲ್ಲಿದೆ ಸ್ಟೋರಿ… 2019ರ ಜೂನ್ 28ರಂದು ಮಂಗಳೂರಿನ ಉರ್ವನಲ್ಲಿ ನಿರ್ಮಾಣಗೊಂಡ

ಕಾಡಬೆಟ್ಟು-ಪಿಲಿಂಗಾಲು ಸಂಪರ್ಕ ರಸ್ತೆ ಕೆಸರುಮಯ ಸಂಚಾರಕ್ಕೆ ತೊಡಕು

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಬೆಟ್ಟು-ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಸಂಪರ್ಕಿಸುವ ಮಣ್ಣಿನ ರಸ್ತೆ ಪ್ರಥಮ ಮಳೆಗೆ ಸಂಪೂರ್ಣ ಹದಗೆಟ್ಟು ಕೆಸರುಗದ್ದೆಯಾಗಿ ಪರಿವರ್ತನೆಯಾಗಿದೆ.ಈಗಾಗಲೇ ಕಿರಿದಾಗಿರುವ ಈ ರಸ್ತೆಯು ಬೇಸಿಗೆಯಲ್ಲಿ ಧೂಳು ತುಂಬಿಕೊಂಡರೆ ಮಳೆಗಾಲದಲ್ಲಿ ಕೆಸರುಮಯಗೊಂಡು ಪಾದಚಾರಿಗಳಿಗೆ ನಡೆದಾಡಲು ಕೂಡ ಅಸಾಧ್ಯವಾಗಿದೆ. ಇದೇ ಪರಿಸರದಲ್ಲಿ ಕಾರಣಿಕ ಪ್ರಸಿದ್ಧ ಗಾಯತ್ರಿ ದೇವಿ ದೇವಸ್ಥಾನವೂ ಇದೆ. ವಗ್ಗ

ಜನರಿಗೆ ಆತಂಕ ಮೂಡಿಸುವ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ: ಕುಂದಾಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 

ಕುಂದಾಪುರ: ಕೆಆರ್‌ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ ಆಧಾರದಲ್ಲಿಯೇ ಕಾಮಗಾರಿಗಳು ನಡೆಯುತ್ತದೆ. ಸುಮ್ಮನೆ ಜನರಿಗೆ ಆತಂಕ ಮೂಡಿಸುವುದು ಹಾಗೂ ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಎಲ್ಲರೂ ನಿಲ್ಲಿಸುವುದು ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು

ಪಚ್ಚನಾಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ, ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,

ತೈಲ ಬಾಂಡ್ ಬಗ್ಗೆ ಸುಳ್ಳು ಪ್ರಚಾರದಿಂದ ಸಮಾಜಕ್ಕೆ ತಪ್ಪು ಸಂದೇಶ: ಕಾವು ಹೇಮನಾಥ ಶೆಟ್ಟಿ 

ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ನಡೆದ `ಪೆಟ್ರೋಲ್ ಬೆಲೆ ಏರಿಕೆ-ಆಯಿಲ್

ಪುಂಜಾಲಕಟ್ಟೆ ಹೆದ್ದಾರಿ ಅಗಲಿಕರಣ ವಿಚಾರ: ಸಿಗದ ಪರಿಹಾರ, ಪ್ರತಿಭಟನೆಯ ಎಚ್ಚರಿಕೆ

ಬಂಟ್ವಾಳ ಪುಂಜಾಲಕಟ್ಟೆ ಹೆದ್ದಾರಿ ಅಗಲಗೊಳ್ಳುವ ಕಾರ್ಯದ ಸಂದರ್ಭ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೂ ಪರಿಹಾರ ಬಾರದೇ ಇರುವ ಹಿನ್ನೆಲೆಯಲ್ಲಿ ಜುಲೈ ೨೦ರೊಳಗೆ ಈ ಕುರಿತು ಯಾವುದೇ ಪರಿಹಾರ ಬರದಿದ್ದರೆ ತಮ್ಮ ಜಮೀನಿಗೆ ಬೇಲಿ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಭೂಮಿ ಕಳೆದುಕೊಂಡವರು ನಾವೂರಿನಲ್ಲಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರ ಪರವಾಗಿ ಮಾತನಾಡಿದ ಸಿಪ್ರಿಯನ್ ಸಿಕ್ವೇರಾ ಮತ್ತು ಸದಾನಂದ ನಾವೂರು, ಬಂಟ್ವಾಳ ಪುರಸಭಾ

ಕೋವಿಡ್ ನಿಯಮ ಪಾಲಿಸಿಕೊಂಡು ದೇವರ ದರ್ಶನ ಪಡೆದ ಭಕ್ತಾದಿಗಳು

ಇಂದಿನಿಂದ ರಾಜ್ಯದಾದ್ಯಂತ ಬಹುತೇಕ ಲಾಕ್‌ಡೌನ್ ಸಡಿಲಿಕೆಯಾಗಿದೆ. ಎರಡು ತಿಂಗಳುಗಳಿಂದ ಭಕ್ತಾದಿಗಳಿಗೆ ಮುಚಿದ್ದ ದೇವಸ್ಥಾನಗಳು ತೆರೆದಿದ್ದು. ಕರಾವಳಿಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದಿ ಬಂದಿದ್ದು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಸಮಾರು ಎರಡು ತಿಂಗಳುಗಳ ಕಾಲ ಲಾಕ್‌ಡೌನ್‌ನಿಂದಾಗಿದೆ ಭಕ್ತಾದಿಗಳಿಗೆ ಮುಚ್ಚಿದ್ದ ದೇವಸ್ಥಾನಗಳು ಇಂದು ತರೆದಿವೆ. ಸರ್ಕಾರದ ಆದೇಶದಂತೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ಯಾವುದೇ ಸೇವೆಗಳಿಗೆ

ಮೂಡುಬಿದರೆಯಲ್ಲಿ ಎರಡು ತಿಂಗಳ ಬಳಿಕ ಬಸ್ ಸಂಚಾರ

ಎರಡು ತಿಂಗಳ ಲಾಕ್ ಡೌನ್ ಮುಗಿದು ಮೂಡುಬಿದಿರೆಯಲ್ಲಿ ಸೋಮವಾರದಂದು ಶೇ ೫೦ರಷ್ಟು ಖಾಸಗಿ ಬಸ್ಸುಗಳು ರಸ್ತೆಗಿಳಿದು ಓಡಾಟ ಆರಂಭಿಸಿದವು.ಖಾಸಗಿ ಬಸ್ಸುಗಳು ರಸ್ತೆಗಿಳಿದುದರಿಂದ ಜನರು ತಾವು ಹೋಗಬೇಕಾದ ಸ್ಥಳಗಳಿಗೆ ಬೆಳಗಿನಿಂದಲೇ ಬಸ್ಸುಗಳನ್ನು ಆಶ್ರಯಿಸಿದರು. ಲಾಕ್ ಡೌನ್ ಸಂದರ್ಭದಲ್ಲಿ ಖಾಸಗಿ ಬಸ್ಸು ತಂಗುದಾಣದ ಆವರಣದಲ್ಲಿ ಇತರ ವಾಹನಗಳು ಬಂದು ನಿಲ್ಲುತ್ತಿದ್ದವು. ಅದರಂತೆ ಸೋಮವಾರವು ಕೂಡಾ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಬಸ್ಸು ನಿಲ್ದಾಣದ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಕೋವಿಡ್ ಲಸಿಕೆ ಶಿಬಿರ

ಮಂಗಳೂರು: ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಶಿಬಿರ ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ ಸಂದರ್ಭ ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ

ಕೆಎಟಿ ತೀರ್ಪು ಹಿನ್ನೆಲೆ: ಮುಂಬಡ್ತಿ ಶಿಕ್ಷಕರ ಹಿತ ಕಾಪಾಡಲು ಆಗ್ರಹ: ಸಚಿವರು, ಶಾಸಕರಿಗೆ ಶಿಕ್ಷಕರ ಸಂಘದಿಂದ ಮನವಿ

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಂಘ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉಸ್ತುವಾರಿ