Home Posts tagged #v4news karnataka (Page 264)

ಮಂಜೇಶ್ವರ: ಕಾವಲುಗಾರನ ತೆಲೆಗೆ ಹೊಡೆದು ಗೋಣಿಯಲ್ಲಿ ಕಟ್ಟಿ ಹಾಕಿ ದರೋಡೆ

ಕಾವಲುಗಾರನ ತಲೆಗೆ ಹೊಡೆದು ಗೋಣಿಯೊಯೊಳಗೆ ಕಟ್ಟಿ ಹಾಕಿ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ರಾಜಧಾನಿ ಜ್ಯುವೆಲ್ಲರಿಯ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಭಾರಿ ಮೌಲ್ಯದ ಬೆಳ್ಳಿ ಆಭರಣ ಹಾಗೂ ಲಕ್ಷಾಂತರ ರೂ. ನಗದನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಎರಡು ಗಂಟೆಯ ಸುಮಾರಿಗೆ ಎರಡು ಕಾರಿನಲ್ಲಿ ಆಗಮಿಸಿದ ಎಂಟು ಮಂದಿಯ ತಂಡ ಈ

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್. ಯಡಿಯೂರಪ್ಪ

ಕೊನೆಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು ಬೀಳುಗಳನ್ನು ಹೇಳುವಾಗ ಭಾವುಕರಾದರು. ಇಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. 75 ವರ್ಷದ ಬಳಿಕ ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ

ಕಾರಿನ ಟಯರ್ ಬದಲಿಸಿ ಮಾನವೀಯತೆ ಮೆರೆದ ಸಂಚಾರಿ ಠಾಣಾ ಪೊಲೀಸರು

ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್ ಸ್ಥಳದಲ್ಲಿದ್ದು, ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ

ಕುಳಾಯಿ ಸರ ಕಳ್ಳತನ ಪ್ರಕರಣ : ಆರೋಪಿಯ ಬಂಧನ

ಸುರತ್ಕಲ್‌ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಪೀಠ ಕ್ರಿಯೇಷನ್‌ನವರ ’ವಿವಾಸ್ವತ’ ಕನ್ನಡ ಕಿರುಚಿತ್ರ ಬಿಡುಗಡೆ

ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್‌ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪೀಠ ಕ್ರಿಯೇಶನ್‌ನವರು ವಿವಾಸ್ವತ ಎಂಬ ಕಿರುಚಿತ್ರವನ್ನು ಹೊರತಂದಿದೆ. ಸಮಾಜಕ್ಕೆ ಕನ್ನಡಿ ಹಿಡಿದು ಸಮಾಜವನ್ನು ತಿದ್ದುವ ಕೆಲಸ ಇವರ ಕಿರುಚಿತ್ರ

ಇಸ್ರೇಲ್ ಪತ್ತೇದಾರಿ ಸಾಫ್ಟ್‌ವೇರ್ ಪೆಗಾಸಸ್ ವಿಚಾರ : ಮಂಜೇಶ್ವರದಲ್ಲಿ ಎಐವೈ ಎಫ್‌ನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ದೂರವಾಣಿ ವಿವರಗಳನ್ನು ಸೋರಿಕೆ ಮಾಡಿರುವುದು ಅತ್ಯಂತ ಗಂಭೀರವಾಗಿದೆ.ಇರ ವಿರುದ್ಧ ಎ ಐ ವೈ ಎಫ್ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್ ಪೆಗಾಸಸ್ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸೇವೆ ಸಲ್ಲಿಸುತ್ತದೆ. ಆದ್ದರಿಂದ ಕೇಂದ್ರ ಸಚಿವರು ಸೇರಿದಂತೆ

ವರುಣನ ಆರ್ಭಟ ಜಮೀನಿಗೆ ನುಗ್ಗಿದ ನೀರು : ಶುಂಠಿ ಬೆಳೆ ನೀರುಪಾಲು

ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ

ಆರೋಗ್ಯದಿಂದ ಎಲ್ಲರೂ ಎಚ್ಚರದಿಂದ ಇರಿ : ನಾಗಮಂಗಲ ಶಾಸಕ ಸುರೇಶಗೌಡ ಹೇಳಿಕೆ

ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ

ಸುರತ್ಕಲ್ ನಲ್ಲಿ ಅಲೆಮಾರಿ ಭಿಕ್ಷುಕ ಮಂದಿಯ ದಾಂಧಲೆ ಮುಕ್ತಗೊಳಿಸಲು ಮನವಿ

 ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ

ಒಲಿಂಪಿಕ್ಸ್‌ನಲ್ಲಿ ಭಾರತ ಶುಭಾರಂಭ : ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ

ಒಲಿಂಪಿಕ್ಸ್‌ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ