Home Posts tagged #v4news karnataka (Page 271)

ಅದಮಾರು ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ಕಾಪು ತಾಲೂಕಿನ ಅದಮಾರು ಮಠದ ಆಧೀನ ಅದಮಾರು ಪೂರ್ಣ ಪ್ರಜ್ಞಾ ವಿದ್ಯಾಸಂಸ್ಥೆ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವಾಗಿದ್ದು, ಇಲ್ಲಿ ಸುತ್ತಲ ಎಂಟು ಶಾಲೆಗಳಿಂದ 235ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಜರಾಗಿದ್ದಾರೆ. ಪಡುಬಿದ್ರಿ ಲಯನ್ಸ್ ಆಂಗ್ಲ ಮಾದ್ಯಮ, ಸಾಗರ್ ವಿದ್ಯಾ ಮಂದಿರ್ ಆಂಗ್ಲ ಮಾದ್ಯಮ, ಗಣಪತಿ ಪ್ರೌಢಶಾಲೆ ಪಡುಬಿದ್ರಿ, ಎರ್ಮಾಳ್ ತೆಂಕ

“ಯಾರಿಗೂ ಹೇಳ್ಬೇಡಿ” – ಸಚಿವ ಸ್ಥಾನ ಹೋದ್ರು ಪರವಾಗಿಲ್ಲ: ಸಚಿವ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ನಳಿನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ. ಯಾರೋ ಹುಚ್ಚರು ಆಡಿಯೋವನ್ನು ಸೃಷ್ಟಿ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಆಡಿಯೋ ನನ್ನದಲ್ಲ ಎಂದು

ದ.ಕ ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ನಲ್ಲಿ ಬಾಕಿಯಾದ ಮಹಿಳೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಲಿಫ್ಟ್ ನಲ್ಲಿಮಹಿಳೆ ಜಾಂ ಆಗಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಇಂದು ಮುಂಜಾನೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್‍ನೇ ಸ್ಥಗಿತಗೊಂಡಿತು. ತಕ್ಷಣವೇ ಸ್ಥಳಾಕ್ಕಾಗಮಿಸಿದ ಪಾಂಡೇಶ್ವರ ಆಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಹ್ರೈಡೋಲಿಕ್ ಸಪರೇಟರ್ ಡಿವೈಸ್ ಅಳವಡಿಸಿ ಲಿಫ್ಟ್ ತೆಗೆದು ವೀಣಾರನ್ನು ರಕ್ಷಣೆ ಮಾಡಲಾಗಿದೆ.    

ವೈರಲ್ ಆಗ್ತಿರೋ ವಿಡಿಯೋ ನನ್ನದಲ್ಲ: ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ- ನಳಿನ್ ಕುಮಾರ್ ಕಟೀಲ್

ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮುಖ್ಯಮಂತ್ರಿಗಳಿಗೆ ಈ ಪತ್ರ ಬರೆಯುತ್ತೇನೆ ಹಾಗೂ ತನಿಖೆಗೆ ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆಡಿಯೋ ವೈರಲ್ ಕುರಿತಾಗಿ ಮಂಗಳೂರಲ್ಲಿ ಮಾತನಾಡಿದ್ರು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವದ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ.ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಅವರೇ ನಮ್ಮ ಸರ್ವ ಸಮ್ಮತದ

ಇಂದಿನಿಂದ ರಾಜ್ಯದಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ

ಕೇರಳ ರಾಜ್ಯದ 441 ವಿದ್ಯಾರ್ಥಿಗಳು ಸೇರಿದಂತೆ ದ.ಕ.ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಕೋವಿಡ್ ಸೋಂಕಿನ ಎರಡನೇ ಅಲೆಯ ಭೀತಿಯ ನಡುವೆಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕೇರಳ ರಾಜ್ಯದ ಗಡಿ ಭಾಗದಿಂದ ಮಂಗಳೂರು ಸೇರಿದಂತೆ ಜಿಲ್ಲೆಯೊಳಗೆ ಇಂದಿನಿಂದ ಷರತ್ತು ಬದ್ಧವಾಗಿ ಬಸ್ ಸಂಚಾರ ಆರಂಭಗೊಂಡಿದೆ. ಅಲ್ಲದೇ, ರೈಲು ಸಂಚಾರದ ವ್ಯವಸ್ಥೆಯೂ ಇದ್ದು, ವಿದ್ಯಾರ್ಥಿಗಳಿಗೆ ದ.ಕ.ಜಿಲ್ಲೆಯೊಳಗಿನ ಪರೀಕ್ಷಾ ಕೇಂದ್ರಗಳಿಗೆ

ಮೂರನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪ

ಮಂಗಳೂರು: ದೇಶದಾದ್ಯಂತ ಇಲ್ಲಿಯ ತನಕ 2 ಲಸಿಕೆ ಪಡೆದವರು ಕೇವಲ 7.78 ಕೋಟಿ ಜನ ಹಾಗೂ ಮೊದಲ ಲಸಿಕೆ ಪಡೆದವರು 14 ಕೋಟಿ (ಶೇ.10) ಜನರು ಮಾತ್ರ ಇಲ್ಲಿಯ ತನಕ ಕೇವಲ ಶೇ.15 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದು, ಈಗಾಗಲೇ 3ನೇ ಕೋವಿಡ್ ಅಲೆ ಪ್ರರಂಭವಾಗಿದ್ದು, ಲಸಿಕೆ ಪ್ರಾರಂಭವಾಗಿ 7 ತಿಂಗಳು ಕಳೆದರೂ ಸರ್ಕಾರ 3ನೇ ಅಲೆ ತಡೆಯಲು ಮುಂಜಾಗೃತ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್‍ಸಿ ಹರೀಶ್ […]

ಯುವ ಜನತೆಯ ಮನಗೆದ್ದ ನಟಿ ಸುಶ್ಮಿತಾ ರಾಮ್‍ಕಳ

ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ. ಅಂತವರಲ್ಲಿ “ಸುಶ್ಮಿತಾ ರಾಮ್‍ಕಳ” ಒಬ್ಬರು. ರಾಮಕೃಷ್ಣ. ಪಿ ಹಾಗೂ ಕಲಾವತಿಯವರ ಪ್ರೀತಿಯ

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ: ಅಣ್ಣಾಮಲೈ ವಿವಾದಿತ ಹೇಳಿಕೆ

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. “ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ. ಮುಂದಿನ ಆರು ತಿಂಗಳಲ್ಲಿ ನಾವು ಮಾಧ್ಯಮದ ಮೇಲೆ ನಿಯಂತ್ರಣ ಮತ್ತು ಅವುಗಳನ್ನು ನಮ್ಮ ಅಡಿಯಲ್ಲಿ

ಕುಲಶೇಖರದ ಕೊಂಗೂರಿನಲ್ಲಿ ಗುಡ್ಡ ಕುಸಿತ: ರೈಲ್ವೇ ಹಳಿಯ ಮೇಲೆ ಬಿದ್ದ ಮಣ್ಣು: ರೈಲು ಸಂಚಾರ ಸ್ಥಗಿತ

ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ  ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿದು, ನಿರ್ಮಾಣಗೊಂಡಿದ್ದ ತಡೆಗೋಡೆ ಕಾಮಗಾರಿ ಕುಸಿದು ಬಿದ್ದಿದೆ.

ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು.ಈ ಕುರಿತು ಹೇಳಿಕೆ ನೀಡಿರುವ ಪದವಿ