Home Posts tagged V4News

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯಾನ್

​ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖ‌ರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್ ಪಾಂಡ್ಯನ್ ಅವರ ಜೀವನಗಾಥೆ ಯುವ

ಪಣಂಬೂರು: ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ

ಕನ್ಯಾನ ಸದಾಶಿವ ಶೆಟ್ಟಿ – ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ: ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ

ಮುಂಬಯಿ,- ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಸಮಾಜದ ಮುಂಚೂಣಿ ಮಹಾ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ನಡುವಿನ ಬಿನ್ನಾಭಿಪ್ರಾಯಗಳು ಇಂದು ಸುಖಾಂತ್ಯಗೊಂಡಿದ್ದು, ಸಮುದಾಯದ ಏಳಿಗೆಯ ದೃಷ್ಟಿಯಿಂದ ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ಫೆಬ್ರವರಿ 26ರಂದು ಕಾಂದಿವಲಿ ಪೂರ್ವದ ಠಾಕೂರ್ ವಿಲೇಜ್‌ನಲ್ಲಿ ‘ಸೋರಾ ಬೈ ನೈನ್’ ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಮಾಜಿ ಸಂಸದ ಗೋಪಾಲ್ ಸಿ. ಶೆಟ್ಟಿ ಸಮಕ್ಷಮದಲ್ಲಿ ನಡೆದ ಸಂಧಾನ

ಮಂಗಳೂರು: ಉದ್ಯಮಿ ಲಂಚುಲಾಲ್ ಕೆ.ಎಸ್.ಅವರಿಗೆ ವ್ಯವಹಾರ ಮತ್ತು ಮನೋರಂಜನಾ ವ್ಯಕ್ತಿತ್ವ ಪ್ರಶಸ್ತಿ ಪ್ರದಾನ

ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ ೨೦೨೬ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರಿನ ಉದ್ಯಮಿ ಲಂಚುಲಾಲ್ ಕೆ.ಎಸ್. ಅವರು ಬಿಸ್‌ನೆಸ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಭಾಗವಹಿಸಿದ್ದರು. ಉದ್ಯಮಿ ಲಂಚುಲಾಲ್ ಅವರು, ಈ ವರ್ಷದ ವ್ಯವಹಾರ ಮತ್ತು

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ: ವಿದ್ಯುತ್ ಕಂಬ ಮುರಿದು ಮೀನುಗಾರಿಕಾ ಕಾರ್ಮಿಕ ಸಾವು

ಕಾಪು:ಮಂಗಳೂರು ನಗರದ ಮೀನುಗಾರಿಕಾ ಧಕ್ಕೆಯಲ್ಲಿ ವಿದ್ಯುತ್ ಕಂಬವೊಂದು ಮುರಿದು ಮೈ ಮೇಲೆ ಬಿದ್ದ ಪರಿಣಾಮ ಮೀನುಗಾರಿಕಾ ಕಾರ್ಮಿಕ, ತಮಿಳುನಾಡು ಮೂಲದ ಮುರುಗನ್ (35) ಭಾನುವಾರದಂದುಮೃತಪಟ್ಟಿದ್ದಾರೆ. ಭಾನುವಾರ ಮುಂಜಾನೆ ಧಕ್ಕೆಯಲ್ಲಿ ಮೀನಿನ ಬಾಕ್ಸ್ ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮುರುಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ಮೂವರು

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ಉಡುಪಿ ಕಂಬಳದ ಶಂಕುಸ್ಥಾಪನೆ ಹಾಗೂ ಪೋಸ್ಟರ್ ಅನಾವರಣ

ಕಾಪು: ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಕಂಬಳ ನಡೆಯಲ್ಲಿದ್ದು ಇದರ ಪೂರ್ವಭಾವಿ ಸಭೆ ದಿನಾಂಕ 23-02-2026 ಸೋಮವಾರ ದಂದು ಶಾಂಭವಿ ಹೋಟೆಲ್ ನಲ್ಲಿ ನಡೆಯಿತು. ಸಭೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಹಾಗೂ ಪೋಸ್ಟರ್ ಅನಾವರಣ ಸಮಾರಂಭ ಇದೇ ತಿಂಗಳ 28 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕರು, ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ಅಧ್ಯಕ್ಷರಾದ

ಶೈಕ್ಷಣಿಕ ಸಾಧನೆಯಲ್ಲಿ ಸೈಂಟ್ ಅಲೋಶಿಯಸ್‌ನ ಹಳೆ ವಿದ್ಯಾರ್ಥಿ ರಶಾ ಫಾತಿಮಾ

ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಹಳೆ ವಿದ್ಯಾರ್ಥಿನಿ ರಶಾ ಫಾತಿಮಾ ಅವರು ಕಳೆದ ಡಿಸೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಸರ್ಟಿಫೈಡ್ ಅಕೌಂಟೆಂಟ್ಸ್ ಅಸೋಸಿಯೇಷನ್ ನಡೆಸಿದ ಸುಧಾರಿತ ಹಣಕಾಸು ನಿರ್ವಹಣೆಯ ವಿಷಯದಲ್ಲಿ ವಿಶ್ವದಲ್ಲಿ 10 ರ್‍ಯಾಂಕ್ ಮತ್ತು ಅಖಿಲ ಭಾರತದಲ್ಲಿ 3ನೇ ರ್‍ಯಾಂಕ್ ಗಳಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ರಶಾ ಫಾತಿಮಾ ಅವರ ಸಾಧನೆ ವಿಶ್ವವಿದ್ಯಾನಿಲಯಕ್ಕೆ ಮತ್ತು ವಾಣಿಜ್ಯ ಹಣಕಾಸು ಮತ್ತು

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ “ಮಾತೃ ವೈಭವ”: ಸುಗಮ ವಾಹನ ಸಂಚಾರ ವ್ಯವಸ್ಥೆ ,ಪಾರ್ಕಿಂಗ್ ವ್ಯವಸ್ಥೆ ಕುರಿತು ಪೂರ್ವಭಾವಿ ಸಭೆ

ಕಾಪು:ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ “ಮಾತೃ ವೈಭವ” ಕಾರ್ಯಕ್ರಮ ದಿನಾಂಕ 28-02-2026 ರಿಂದ 02-03-2026 3 ದಿನಗಳ ಕಾಲ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು ಹಾಗೂ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ

ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಮಣ್ಣು ಸಾಗಾಣಿಕೆ ಕುರಿತಂತೆ ಸಭೆ

ಕಾಪು:ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಟಿಪ್ಪರ್ ಮಣ್ಣನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಟಿಪ್ಪರ್ ಗಳನ್ನು ಆಡ್ಡಗಟ್ಟುತ್ತಿರುವುದರಿಂದ ನೈಜ ರೈತರು ಹಲವಾರು ಕಡೆ ಸಮಸ್ಯೆ ಎದುರಿಸುತ್ತಿದ್ದು ಈ ಸಂಬಂಧ ಇಂದು ದಿನಾಂಕ 23-02-2026 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಉಡುಪಿ