ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಭಾರೀ ನಾಟಕೀಯ ತಿರುವು ಪಡೆದು ಹರೀಶ್ ಇಂಜಾಡಿ ಅವಿರೋಧವಾಗಿ
ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಸುಳ್ಯ:ಸುಳ್ಳು ಮಾಹಿತಿಗಳು, ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನ ನೂತನ
ನೂತನ ವಿಂಡ್ಸರ್ ಇವಿ ಪ್ರೋ ಕಾರನ್ನು ಗಣ್ಯರು ಮಾರುಕಟ್ಟೆಗೆ ಲೋಕಾರ್ಪಣೆ ಮಾಡಿದರು. ಈ ಹೊಸ ’ವಿಂಡ್ಸರ್ ಇವಿ ಪ್ರೊ’ ನಲ್ಲಿ, ಗ್ರಾಹಕರು ಬಿಗ್ ಬ್ಯಾಟರಿ ಮತ್ತು ಲಾಂಗ್ ರೇಂಜ್ ಅನ್ನು ಪಡೆಯುತ್ತಾರೆ. ಈ ಹೊಸ ಇವಿ ಬ್ಯಾಟರಿಯು ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 449 ಕಿ.ಮೀ ವರೆಗೆ ಪ್ರಯಾಣಿಸಬಹುದು. ಒಉ ಈ ಹೊಸ ಕಾರನ್ನು ಹಲವು ವಿಶಿಷ್ಟ, ಅಪ್ಡೇಟ್ಡ್ ಫೀಚರ್ಸ್ಗಳೊಂದಿಗೆ ಬಿಡುಗಡೆ ಮಾಡಿದೆ. ಸಾಮಾನ್ಯ ವಿಂಡ್ಸರ್ಗೆ ಹೋಲಿಸಿದರೆ ಇದು ಹಲವು ಹೊಸ, ಸುಧಾರಿತ
ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್ಗಳು ಕೇಳಿಬರುತ್ತಿವೆ. ನಸುಕಿನ ಜಾವ 3:50 ರಿಂದ 4:45 ರ ನಡುವೆ ಕೇಳಿದ ಸ್ಫೋಟಗಳಿಂದ ಜಮ್ಮು ನಗರದ ಕೆಲವು ಭಾಗಗಳಲ್ಲಿ ಕತ್ತಲೆಯಾಗಿದ್ದು, ಆಕಾಶದಲ್ಲಿ ಯುದ್ಧಸಾಮಗ್ರಿಗಳು ಕಂಡುಬಂದವು.
ಕೊಕ್ಕಡ: ಪಟ್ಟೂರು ಬಳಿಯ ಪುಂಡಿಕಾಯಿ ತಿರುವಿನಲ್ಲಿ ಗುರುವಾರದಂದು ಜೀಪು ಮತ್ತು ಗೂಡ್ಸ್ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಂಟಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಮತ್ತು ಜೀಪು ಎರಡೂ ಭಾಗಶಃ ಹಾನಿಗೊಳಗಾಗಿವೆ. ಘಟನೆಯಲ್ಲಿ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಸುಂದರಿ, ಗಿರಿಜಾ ಮತ್ತು ಲಲಿತ ಎಂಬ ಮಹಿಳೆಯರು ಹಾಗೂ ರಿಕ್ಷಾ ಚಾಲಕ ಸಿದ್ದಿಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಕೊಕ್ಕಡ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಮೇ 1, 2025 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅತುತ್ತಮ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆಡಳಿತಾಧಿಕಾರಿಯಾಗಿರುವ ಡಾ. ಭಟ್ ಅವರು ಮೂಳೆಚಿಕಿತ್ಸೆ, ಕೈ ಶಸ್ತ್ರಚಿಕಿತ್ಸೆ, ಸಂಶೋಧನೆ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಈ ನೇಮಕಾತಿ ಬಗ್ಗೆ ಮಾತನಾಡಿದ, ಮಾಹೆಯ ಉಪಕುಲಪತಿ ಲೆಫ್ಟಿನೆಂಟ್
ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ರಿಟರ್ನಿಂಗ್ ಅಧಿಕಾರಿಯಾದ ರಾಜು ಬಿ. ಇವರು ಚುನಾವಣೆ ಪ್ರಕ್ರಿಯೆ ನಡೆಸಿರುತ್ತಾರೆ. ಶ್ರೀ. ರವಿರಾಜ ಹೆಗ್ಡೆ ಕೊಡವೂರು ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹಾಗೂ ಶ್ರೀ ಉದಯ್ ಎಸ್. ಕೋಟ್ಯಾನ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಶ್ರೀ ರವಿರಾಜ ಹೆಗ್ಡೆಯವರು 2009-2014, 2014-2019 ಹಾಗೂ 2019-2022 ಅವಧಿಯಲ್ಲಿ ದ.ಕ. ಹಾಲು
ಬೈಂದೂರು: ಕಾಶ್ಮೀರದ ಪಹಲ್ಲಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಲನಚಿತ್ರ ನಟ ಧ್ರುವ ಸರ್ಜಾ ಅವರು ಕುಟುಂಬ ಸಮೇತ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಧ್ರುವ ಸರ್ಜಾ ಅವರನ್ನು ಗೌರವಿಸಲಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮತ್ತಿತರರು ಉಪಸ್ಥಿರಿದ್ದರು.




























