ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ. ಮುಂಬೈಯ ಅಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗಾಗಿ ತನ್ನಲ್ಲಿರುವ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ.
ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ನಷ್ಟ ಸಂಭವಿಸಿರುವ ಘಟನರ ರಾಣಿಪುರದಲ್ಲಿ ಸಂಭವಿಸಿದೆ.ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಫ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ ಸಂಭವಿಸಿದೆ. ಘಟನೆ ವೇಳೆ ಪೀಟರ್
ಪುತ್ತೂರು: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ವಾಹನ ಚಾಲಕ-ಮಾಲಕರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಕಷ್ಟ-ನಷ್ಟ ಹಾಗೂ ಉಚಿತ ಯೋಜನೆಗಳಿಂದ ಆಹಾರ ವಸ್ತುಗಳಿಗೆ ಮತ್ತು ಇತರ ವಸ್ತುಗಳಿಗೆ ಬೆಲೆ ಏರಿಕೆಯಿಂದ ಜನ ಸಮಾನ್ಯರಿಗೆ ಉಂಟಾಗುವ ತೊಂದರೆಯನ್ನು ವಿರೋಧಿಸಿ ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟ ಅನುರಾಗ ವಠಾರ ಇದರ ಆಶ್ರಯದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಕಾರ್ಮಿಕ ಸಂಘಗಳ
ಕಡಬ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಆಚಾರ್ಯ ಮುನಿಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿರುವುದು ಖಂಡನೀಯ. ಈ ಹೇಯ ಕೃತ್ಯ ಮಾಡಿದ ಹಂತಕರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಆಗ್ರಹಿಸಿದರು. ಅವರು ಕಡಬದ ಮುಖ್ಯ ರಸ್ತೆಯಲ್ಲಿ ಕಡಬ ಪ್ರಖಂಡ ವಿ.ಹಿಂ.ಪ, ಬಜರಂಗದಳ, ಮಾತೃಶಕ್ತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ
: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದು ನಿನ್ನೆ ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು, 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ. ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು
ಮೂಡುಬಿದಿರೆ: `ಸಿನಿಮಾವು ಕಲೆ, ತಂತ್ರಜ್ಞಾನದ ಸಮ್ಮಿಲನವಾಗಿದ್ದು, ವಿಜ್ಞಾನ, ಮನೋರಂಜನೆ ಎಲ್ಲವೂ ಇಲ್ಲಿದೆ. ಇದು ಅತ್ಯಂತ ಪ್ರಭಾವ ಬೀರುವ ಮಾಧ್ಯಮ’ ಎಂದು ಸಿನಿಮಾ ಬರಹಗಾರ ಮತ್ತು ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಿನಿಮಾ ಸಮಾಜದಲ್ಲಿ ಸಿನಿಮಾ ಮತ್ತು ಸಿನಿಮಾ ನಿರ್ಮಾಣ' ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಾನವನು ನೀರಿನಲ್ಲಿ
ಬ್ರಹ್ಮಾವರದ ಶ್ರೀ ವೇಣುಗೋಪಾಲಕೃಷ್ಣ ಯುವಕ ಸಂಘ ಮೂಡುಕೇರಿ ಬಾರ್ಕೂರು, ಸೋಮ ಕ್ಷತ್ರಿಯ ಗಾಣಿಗ ಸಮಾಜ, ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘ, ಜಿಲ್ಲಾ ಗಾಣಿಗ ಯುವ ಸಂಘಟನೆ ಉದ್ಯಾವರ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೆಸರು ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮವು ದೇವಸ್ಥಾನದ ಬಳಿಯ ಸುಜಾತ ಶೆಟ್ಟಿ ಅವರ ಗದ್ದೆಯಲ್ಲಿ ಜರುಗಿತು. ಸೋಮಕ್ಷತ್ರಿಯ ಗಾಣಿಗೆ ಸಮಾಜದ ಅಧ್ಯಕ್ಷ ಸೂರ್ಯನಾರಾಯಣಗಾಣಿಗ ಮಟಪಾಡಿ ಮತ್ತು ಗಣ್ಯರು ಗದ್ದೆಗೆ ಹಾಲು ಸಮರ್ಪಿಸಿ
ಮೂಡುಬಿದಿರೆ: ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ ವತಿಯಿಂದ ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ “ಮತ್ಸ್ಯ ಮಿಲನ” ಪಣಪಿಲ ಕೊಟ್ಟರಿಬೆಟ್ಟು ರಾಜ್ ಫಿಶ್ ಫಾರ್ಮಿಂಗ್ನಲ್ಲಿ ನಡೆಯಿತು. ಮಂಗಳೂರು ಕೆ.ವಿ.ಕೆ ಯ
ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮಸ್ಥರು, ಏರ್ಟೆಲ್ ಸಂಸ್ಥೆ ವಿರುದ್ಧ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್ಟೆಲ್ ನೆಟ್ವರ್ಕ್ ವಿರುದ್ಧ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು. ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಲಾಯಿತು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್
ಕಾಪು ಬೀಚ್ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಕಡಲು ಪ್ರಕ್ಷುಬ್ಧಗೊಂಡು, ಲೈಟ್ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು