Home Posts tagged V4News (Page 208)

ದೈವಾರಾಧನೆ ಪ್ರದರ್ಶನದ ವಸ್ತುವಲ್ಲ : ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಗರಂ

ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ದೈವಾರಾಧನೆ ಪ್ರದರ್ಶನದ

ಉಳ್ಳಾಲ: ಭಾರೀ ಮಳೆಗೆ ತಲಪಾಡಿಯ ಖಾಸಗಿ ಕಾಲೇಜಿನ ಬೃಹತ್ ಮೇಲ್ಛಾವಣಿ ಕುಸಿತ

ಉಳ್ಳಾಲ: ಭಾರೀ ಮಳೆಗೆ ತಲಪಾಡಿ ಖಾಸಗಿ ಶಿಕ್ಷಣ ಸಂಸ್ಥೆಯ ಬೃಹತ್ ಮೇಲ್ಛಾವಣಿ ಕುಸಿದುಬಿದ್ದು, ಹಲವು ವಾಹನಗಳು ಜಖಂ ಆಗಿವೆ. ರಜೆಯಿದ್ದ ಹಿನ್ನೆಲೆ ವಿದ್ಯಾರ್ಥಿಗಳಿಲ್ಲದೆ ಯಾವುದೇ ದುರಂತ ಸಂಭವಿಸಿಲ್ಲ. ದೇವಿನಗರದ ಖಾಸಗಿ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ

ಮಣಿಪುರ ಗಲಭೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿಕೆ

ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು. ಪುತ್ತೂರು ಪ್ರೆಸ್‍ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ

ಪುತ್ತೂರಿನ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ನಿಷೇಧ

ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಮೊದಲ ಬಾರಿಗೆ ಈ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾದ ಹಿನ್ನಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಶೇಧಿಸಲಾಗಿದ್ದು, ಆ ಭಾಗದ

ಮಂಗಳೂರು : ಮಳೆಯ ಅಬ್ಬರಕ್ಕೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ

ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ

ಪಡುಬಿದ್ರಿ ವಿಷ್ಣು ಮೂರ್ತಿ ದೇವಳದ ಹೊಳೆದಂಡೆ ಕುಸಿತ : ಅವೈಜ್ಞಾನಿಕ ಕಾಮಗಾರಿ 33ಲಕ್ಷ ರೂಪಾಯಿ ಕಾಮಗಾರಿ ನೀರುಪಾಲು

ಸಣ್ಣ ನೀರಾವರಿ ಇಲಾಖೆಯ 33ಲಕ್ಷ ರೂಪಾಯಿ ವೆಚ್ಚದ ಹೊಳೆದಂಡೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾದ ಫಲವಾಗಿ ಕುಸಿದಿದ್ದು, ಜನರ ತೆರಿಗೆಯ ಹಣ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ನೀರು ಪಾಲಾಗಿದೆ. ಪಡುಬಿದ್ರಿ ಗ್ರಾ.ಪಂ. ವ್ಯಾಪ್ತಿಯ ಪಾದೆಬೆಟ್ಟು ವಿಷ್ಣುಮೂರ್ತಿ ದೇವಳದ ಬಳಿಯಲ್ಲಿ ಹರಿಯುತ್ತಿರುವ ಕಾಮಿನಿ ಹೊಳೆಗೆ ದಂಡೆ ನಿರ್ಮಾಣ ನಡೆಸುವ ಜನ ಬೇಡಿಕೆ ಇಂದು ನಿನ್ನೆಯದಲ್ಲ. ಕಳೆದ ಸುಮಾರು ಆರು ತಿಂಗಳ ಹಿಂದೆ ಈ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆ ಗ್ರಾಮದಲ್ಲಿ

ಪಡುಬಿದ್ರಿಯ ದೇವಳದ ಅಂಗಣಕ್ಕೆ ನುಗ್ಗಿದ ನೀರು

ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿದು ಹೋಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಪಡುಬಿದ್ರಿಯ ಕೆಳಗಿನ ಪೇಟೆ ರಸ್ತೆ ಕೆರೆಯ ರೂಪತಾಳಿದೆ. ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ಗ್ರಾಮ ದೇಗುಲದ ಅಂಗಣದ ಒಳಗೂ ಕೆಸರು ನೀರು ನುಗ್ಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ಬಂಟರ ಭವನದ ಬಳಿ ತೀರ ಸಪೂರವಾದ ಪೈಪ್ ಹಾಕಿದ ಪರಿಣಾಮ ಹಾಗೂ ಪಕ್ಕದ

ಯುವವಾಹಿನಿ ಪುತ್ತೂರು ಘಟಕ : ಜುಲೈ 9ರಂದು ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇವರ ಆಶ್ರಯದಲ್ಲಿ ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮವು ಜುಲೈ 9ರಂದು ಪುತ್ತೂರು ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜುಲೈ 9ರ ಭಾನುವಾರದಂದು ಬೆಳಿಗ್ಗೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ಅವರು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ : ಜನ ಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ

ಹೆಜಮಾಡಿಯಲ್ಲಿ ಕ್ಯಾಂಟೀನ್‍ನ ಕೆಲಸಗಾರನಿಗೆ ಐವರ ತಂಡದಿಂದ ಥಳಿತ

ಬಿಲ್ ವಿಚಾರದಲ್ಲಿ ಹೆಜಮಾಡಿ ಟೋಲ್ ಬಳಿಯ ಹೈವೇ ಕ್ಯಾಂಟೀನ್‍ನಲ್ಲಿ ಕಾರ್ಮಿಕರೊರ್ವರಿಗೆ ಹಿಗ್ಗಾಮುಗ್ಗ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಥಳಿಸಿದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳೆದ ಮೂರು ವರ್ಷಗಳಿಂದ ಇದೇ ಕ್ಯಾಂಟೀನ್ ನಲ್ಲಿ ದುಡಿಯುತ್ತಿದ್ದ ಎರ್ಮಾಳು ನಿವಾಸಿ ಸಂತೋಷ್ ಕುಮಾರ್ ಎಂಬವರೇ ಹಲ್ಲೆಗೊಳಗಾದವರು. ತಡರಾತ್ರಿ ಐವರ ತಂಡವೊಂದು ಬಿಯಾರ್ ಬಾಟಲಿ ಕೈಯಲ್ಲಿ ಹಿಡಿದುಕೊಂಡು ಬಂದು ಉಪಹಾರ ಸೇವಿಸಿದ ಬಳಿಕ ಬಿಲ್ ವಿಚಾರದಲ್ಲಿ ತಗಾದೆ ತೆಗೆದು