Home Posts tagged V4News (Page 33)

ಮಂಗಳೂರು: ಮೀನುಗಾರಿಕಾ ಬಂದರು ಆಧುನೀಕರಣಕ್ಕೆ ಶಂಕುಸ್ಥಾಪನೆ

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೀನುಗಾರರ ಬೇಡಿಕೆ ಏನು ಎಂದು ಕೇಳಿ ಯೋಜನೆ ರೂಪಿಸಿದರೆ ಮಾತ್ರ ಅವರ ಕಷ್ಟಗಳು ನಿವಾರಣೆಯಾಗಲು ಸಾಧ್ಯ. ಸಮುದ್ರ ತಟದಲ್ಲಿರುವ 16 ರಾಜ್ಯಗಳಲ್ಲಿ ಮೀನುಗಾರಿಕೆ ನಡೆಯುತ್ತಿದೆ, ಹಾಗಾಗಿ ಆಯಾ ರಾಜ್ಯದ ಆವಶ್ಯಕತೆಗೆ ಪೂರಕವಾಗಿ ಸಹಾಯ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ರಾಜ್ಯ

ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ

ಕಾಪು: ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿ, ಉಡುಪಿ ಜಿಲ್ಲೆ ದಶಮಾನೋತ್ಸವ ಸಂಭ್ರಮಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಸಂಗಮ ಡಿ.10ರಂದು ನಡೆಯಲಿದೆ. ಕಟಪಾಡಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ವಿಶ್ವ ಬ್ರಾಹ್ಮಣ ಸಂಘಟನೆಯ ದಶಮಾನೋತ್ಸವ ಸಂಭ್ರಮ ಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹದಲ್ಲಿ ವಿಶ್ವಕರ್ಮ ಸಮಾಜದ 12 ಜೋಡಿಗಳು ಹಸೆಮನೆ ಏರಲಿದ್ದಾರೆ.ಕಳೆದ 3 ಬಾರಿ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಗೊನ್ಝಾಗ ಶಾಲೆಯ ಯುವರಾಜ್ ಗೆ ಚಿನ್ನದ ಪದಕ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ ಯುವರಾಜ್ ಸಿ ಬಿ ಎಸ್ ಇ ಪರವಾಗಿ ರಾಷ್ಟ್ರಮಟ್ಟದ ಈ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ ಮೊದಲ ಅಲೋಶಿಯಸ್

ಹಾಡುಗಳ ಮೂಲಕ ತುಳು ಅಭಿರುಚಿ ಮೂಡಿಸಲು ಸಾಧ್ಯ: ಭಾಸ್ಕರ್ ತೊಕ್ಕೊಟ್ಟು

ಮಂಗಳೂರು : ತುಳು ಭಾಷಾ ಕಲಿಕೆ ಮತ್ತು ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿ ಕೊಂಡಿರುವ “ಡೆನ್ನ ಡೆನ್ನಾನ-ಪದ ಪನ್ಕನ” ಅಭಿಯಾನವು ಮಹತ್ವಪೂರ್ಣವಾಗಿದೆಯೆಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ದೇಹಧಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಅಭಿಪ್ರಾಯಪಟ್ಟರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆಯ ಜಂಟಿ ಆಶ್ರಯದಲ್ಲಿ ಬಬ್ಬುಕಟ್ಟೆ ಶಾಲೆಯಲ್ಲಿ ಗುರುವಾರದಂದು

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ಶೆಟ್ಟಿ ಆಯ್ಕೆ

ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್‌ ಕುಮಾರ್‌ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ಪ್ರಸನ್ನ ಮಾರ್ತ ಮತ್ತು ಬಿಜೆಪಿ ಮುಖಂಡರು ಭಾಗಿ. ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್‌ ಕುಮಾರ್‌ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್‌ನ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ

ಹಾಸನದಲ್ಲಿ ಡಿ.6 ರಂದು ಮುಖ್ಯಮಂತ್ರಿಗಳಿಂದ ತಾಲೂಕಿನ 3272 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಮುಖ್ಯಮಂತ್ರಿ ,ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿವಿಧ ಇಲಾಖೆ ಸಚಿವರು ಭಾಗಿಆಲೂರು :ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶ ಡಿ.6 ರಂದು ಹಾಸನ ನಗರದಲ್ಲಿ ಜರುಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂಉಪಮುಖ್ಯಮಂತ್ರಿಯ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಇಲಾಖೆ ಸಚಿವರುಭಾಗವಹಿಸಲಿದ್ದಾರೆ ಎಂದು ತಹಸೀಲ್ದಾರ್ ಹೆಚ್. ಮಲ್ಲಿಕಾರ್ಜುನ್ ತಿಳಿಸಿದರು ತಾಲೋಕು ಕಚೇರಿಯಲ್ಲಿ

ಕಾರ್ಮಿಕರು ದೇಶದ ಬೆನ್ನೆಲುಬು – ಶಾಸಕ ಸಿಮೆಂಟ್ ಮಂಜು

ಆಲೂರು: ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು  ಶಾಸಕ ಸಿಮೆಂಟ್ ಮಂಜು ಹೇಳಿದರು. ಗುರುವಾರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ   ಬ್ರಿಡ್ಜ್ ಕೋರ್ಸ್ ತರಬೇತಿ  ಹಾಗೂ  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದರು.ದುಶ್ಚಟಕ್ಕೆ ಬಲಿಯಾದ ವ್ಯಕ್ತಿಯ ಆರೋಗ್ಯ ಹಾಳಾಗುವುದಲ್ಲದೆ, ಅವರ ಕುಟುಂಬ ಮತ್ತು

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ನಿಂದ 83 ನೇ ಸೇವಾ ಯೋಜನೆ ಹಸ್ತಾಂತರ

ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾನ ಪರಿಸರದ ಆನಂದ ಮುಗೇರ ಎಂಬವರ ಆರೋಗ್ಯದ ಸಮಸ್ಯೆಗೆ ಸ್ಪಂದಿಸಿರುವ ಸಾಯಿ ಮಾನಾ೯ಡ್ ಸೇವಾ ಟ್ರಸ್ಟ್ ಅಮನಬೆಟ್ಟು ಚಿಕಿತ್ಸೆಗಾಗಿ 83ನೇ ಸೇವಾ ಯೋಜನೆಯ ನವೆಂಬರ್ ತಿಂಗಳ ಎರಡನೇ ಯೋಜನೆಯ ರೂ. 10,000ದ ಚೆಕ್ಕನ್ನು ಡಿಸೆಂಬರ್ 1ರಂದು ಹಸ್ತಾಂತರಿಸಿದೆ. 43ವರ್ಷ ಪ್ರಾಯ ದ ಆನಂದ ಮುಗೇರ ಅವರು ಬಾಯಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇದುವರೆಗೆ ಸುಮಾರು ಹಣವನ್ನು ಖರ್ಚು ಮಾಡಲಾಗಿದೆ. ಈಗ ಮಂಗಳೂರು ನಲ್ಲಿ ಚಿಕಿತ್ಸೆ

ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಹಲ್ಲೆ ಆರೋಪ ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಬಂಧನ -ಸೇವೆಯಿಂದ ಅಮಾನತು

ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ