Home Posts tagged V4News (Page 347)

🛑ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ, ಬಡವರ ಕನಸಿನ ಯೋಜನೆಗೆ ಪುತ್ತೂರಿನಲ್ಲಿ ಚಾಲನೆ

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ

ಮಂಗಳೂರು: ಹಿಂದೂಗಳ ಅಂಗಡಿಗೆ ಕೇಸರಿ ಧ್ವಜ ಕಟ್ಟಿದ ವಿಚಾರ: ಬೀದಿ ಬದಿ ವ್ಯಾಪಾರಸ್ಥರ ಸಮನ್ವಯ ಸಮಿತಿಯಿಂದ ಸಚಿವ ದಿನೇಶ್ ಗುಂಡೂರಾವ್‍ಗೆ ದೂರು

ದೇವಸ್ಥಾನದಲ್ಲಿ ದಸರಾ ಉತ್ಸವದ ಸಂದರ್ಭ ವ್ಯಾಪಾರಕ್ಕೆ ಸಂಬಂಧಿಸಿ ಸೌಹಾರ್ದ ಕದಡಲು ಯತ್ನಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸೌಹಾರ್ದ ಕದಡದಂತೆ ಕ್ರಮ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿ ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‍ರಿಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ಸರ್ಕ್ಯೂಟ್ ಹೌಸ್

“ಮಂಗಳೂರು ದಸರಾ ವೈಭವ” ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ “ಮಂಗಳೂರು ದಸರಾ ವೈಭವ” ಶೀರ್ಷಿಕೆಯಡಿ ಆಯೋಜಿಸಲಾದ ರಾಜ್ಯ ಮಟ್ಟದ ಪೊಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಸಾಂಸ್ಕ್ರತಿಕ ವೇದಿಕೆಯಲ್ಲಿ ಮಂಗಳವಾರ ನೆರವೇರಿತು. ಶ್ರೀ ಕ್ಷೇತ್ರದ ಕೋಶಾಧಿಕಾರಿ

ಮಂಗಳೂರು: ಅ.21ರಂದು ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದಿಂದ ಪಿಲಿಪರ್ಬ-2023

ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ತುಳು ನಾಡಿನ ಸಂಪ್ರದಾಯುಕ ಕಲೆ ಹುಲಿವೇಷ ಸ್ಪರ್ಧಾ ಕೂಡ ಕುಡ್ಲದ ಪಿಲಿಪರ್ಬ-2023 ಕಾರ್ಯಕ್ರಮ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಮತ್ತು ತನ್ನ ನೇತೃತ್ವದಲ್ಲಿ ಕಳೆದ ವರ್ಷ ಯಶಸ್ವಿಯಾಗಿ ಕುಡ್ಲದ ಪಿಲಿಪರ್ಬ ಆಯೋಜಿಸಿದ್ದು, ಅದರ ಮುಂದುವರಿದ

ಮೂಡುಬಿದಿರೆ: ರಾಜ್ಯದ ಕಾಂಗ್ರೆಸ್ ಸರಕಾರದ 80% ಕಮೀಷನ್ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಮೂಡುಬಿದಿರೆ: ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ 80% ಕಮೀಷನ್ ದಂಧೆ ಸಹಿತ ಭ್ರಷ್ಟಾಚಾರವನ್ನು ವಿರೋಧಿಸಿ ಮೂಡುಬಿದಿರೆ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಸರಕಾರವನ್ನು 40% ಸರಕಾರವೆಂದು ದೂಷಿಸುತ್ತಾ, ಜನರಿಗೆ ವಿವಿಧ ರೀತಿಯ ಗ್ಯಾರಂಟಿಗಳ ಸುಳ್ಳು ಭರವಸೆಯನ್ನು ನೀಡುತ್ತಾ ಅಧಿಕಾರಕ್ಕೆ ಬಂದಿರುವ

ಬಂಟ್ವಾಳ|| ಪಾಳುಬಿದ್ದಿರುವ ಹಳೆಯ ತಾಲೂಕು ಕಚೇರಿ: ನಿರ್ವಹಣೆಯಿಲ್ಲದ ಕಟ್ಟಡದ ಸುತ್ತಮುತ್ತ ಪೊದೆಗಳ ರಾಶಿ

ಬಂಟ್ವಾಳ: ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಬಳಿ ತಾಲೂಕು ಕಚೇರಿ ಎನ್ನುವ ಕಟ್ಟಡವೊಂದಿದೆ. ಯಾರಾದರೂ ಸಾರ್ವಜನಿಕರು ಇದೇ ತಾಲೂಕು ಕಚೇರಿ ಎಂದು ಈ ಕಟ್ಟಡದ ಸುತ್ತ ಸುತ್ತುತ್ತಿದ್ದರೆ ದಿನವಿಡಿ ಸುತ್ತುತಲೇ ಇರಬೇಕಾಗುತ್ತದೆ. ತಾಲೂಕು ಕಚೇರಿ ಇಲ್ಲಿಂದ ಸ್ಥಳಾಂತರಗೊಂಡರೂ ಹಳೆ ಕಟ್ಟಡ ಇನ್ನೂ ಅದೇ ಹೆಸರಿನಲ್ಲಿ ಉಳಿದಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದೆ. ಬಿ.ಸಿ.ರೋಡಿನಲ್ಲಿದ್ದ ಹಳೇ ತಾಲೂಕು ಕಚೇರಿಯನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಮಿನಿವಿಧಾನ

ನೆಲ್ಯಾಡಿ: ಅವಾಚ್ಯ ಪದ ಬಳಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ನೆಲ್ಯಾಡಿ: ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ

ನೆಲ್ಯಾಡಿ: ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ನೆಲ್ಯಾಡಿ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ,

ನೆಲ್ಯಾಡಿ :ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿ

ನೆಲ್ಯಾಡಿ : ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಲ್ಲಿ ನಿವಾಸಿಗಳಾದ ಜಮೀಲಾ, ಮರಿಯಮ್ಮ, ಪಾರ್ವತಿ, ಸುರೇಶ್ ಪೂಜಾರಿ, ಮೂಸೆ ಕುಂಞಿ, ಜೋಹರ, ಹಮೀದ್ ಎಂಬುವರ ಮನೆಗೆ ಭಾಗಶಃ ಹಾನಿಯಾಗಿದ್ದು, ಮನೆಯ ಹೆಂಚು ಮತ್ತು ಶೀಟುಗಳು ಹಾರಿಹೋಗಿವೆ. ಈ ಸಂದರ್ಭ ಕೆಲವು ಮನೆಗಳಲ್ಲಿ ಹಿರಿಯರು ಮತ್ತು ಪುಟ್ಟ ಮಗು ಮನೆಯೊಳಗಿದ್ದು ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ಪಿಲಿತ ರಾಪಟ

ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 24ರಂದು ಪಿಲಿತ ರಾಪಟವನ್ನು ಹಮ್ಮಿಕೊಂಡಿದ್ದಾರೆ. ಯುವ ಸಂಗಮ ಕುದ್ರೋಳಿ ಮತ್ತು ಶಿವ ಫ್ರೆಂಡ್ಸ್ ಬರ್ಕೆ ಪಿಲಿತ ರಾಪಟ ನಡೆಯಲಿದೆ. ಮಂಗಳೂರಿನ ಬಿಜೈ ಕಾಪಿಕಾಡ್‍ನ ಕೊಟ್ಟಾರ 2ನೇ ಅಡ್ಡರಸ್ತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.