ಉಳ್ಳಾಲ ಕ್ಷೇತ್ರದಲ್ಲಿ ಭಾರೀ ಅಭಿವೃದ್ಧಿಯಾಗಿದೆ ಎಂದು ಒಂದು ಕಡೆ ಡಂಗುರ ಸಾರುತ್ತಿದ್ದರೆ,ಮತ್ತೊಂದು ಕಡೆ ಒಳರಸ್ತೆಗಳ ಅವ್ಯವಸ್ಥೆ, ಚರಂಡಿಗಳ ದುರಾವಸ್ಥೆ, ಆರೋಗ್ಯ ಕ್ಷೇತ್ರಗಳ ಸಮಸ್ಯೆಗಳು, ಆಡಳಿತಾತ್ಮಕ ಸಂಕಷ್ಟಗಳು,ಸಾಮಾಜಿಕ ಅನಾಚಾರಗಳನ್ನು ಕ್ಷೇತ್ರದ ಜನತೆ ನಿರಂತರವಾಗಿ ಅನುಭವಿಸುತ್ತಿದ್ದಾರೆ. ಒಳರಸ್ತೆಗಳಲ್ಲಿ ಚೆಂಬುಗುಡ್ಡ ದಾರಂದಬಾಗಿಲು ಪಂಡಿತ್ ಹೌಸ್
ತುಳುನಾಡಿನ ಪರಶುರಾಮನಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಘೋರ ಅಪಚಾರ, ಅವಮಾನ ಮಾಡಿದ್ದಾರೆ ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಮದಗ್ನಿ ಆರಾಧಕರು ಪರಶುರಾಮನ ಅರಾಧನೆ ಮಾಡುತ್ತಾರೆ. ಪರಶುರಾಮನ ಕೀರ್ತಿ, ಪ್ರಭಾವದಿಂದಾಗಿ ಅವರು ದೇವರು ಎನ್ನುವ ನಂಬಿಕೆ ಇದೆ. ತನ್ನ ಪರಾಕ್ರಮದಿಂದ ಸಮುದ್ರವನ್ನು ಹಿಂದೆ ಸರಿಸಿ ಭೂಮಿ
ಮಂಗಳೂರಿನ ದೇವಸ್ಥಾನದಲ್ಲಿ ಸಂತೆ ವ್ಯಾಪಾರಕ್ಕೆ ಜಿಲ್ಲಾಡಳಿತ ಸೂಚನೆಯಂತೆ ಎರಡನೇ ಬಾರಿ ಹರಾಜು ನಡೆಸಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದನ್ನು ಹಿಂದೂ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ಶರಣ್ ಪಂಪ್ವೆಲ್, ಇವತ್ತು ಎಲ್ಲಾ ಅಂಗಡಿಗಳಿಗೆ
ಸಾಣೂರು ಗ್ರಾಮದ ಇಂದಿರಾನಗರ ಹಲ್ಲೆಕಿ ಪರಿಸರದಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ರಾತ್ರಿ 9 ಗಂಟೆಗೆ ಬೈಕಿ ನಲ್ಲಿ ದಾರಿಯಲ್ಲಿ ಹೋಗುತಿದ್ದ ಮೆಸ್ಕಾಂ ಇಲಾಖೆಯ ದೇವಣ್ಣ ರಾವ್ ಮತ್ತು ಸಾಣೂರು ಪಂಚಾಯತ್ ಸದಸ್ಯ ಪ್ರಕಾಶ್ ರಾವ್ ಇಬ್ಬರು ಚಿರತೆ ಘರ್ಜಿಸುವ ಸದ್ದನು ಕೇಳಿ ವೀಕ್ಷಿಸಿದಾಗ ಚಿರತೆ ಉರುಳಿಗೆ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಕಾರ್ಕಳ ನಗರದ ಸಾಮಾಜಿಕ ಕಾರ್ಯಕರ್ತ ಪುರಸಭೆಯ ಮಾಜಿ ಸದಸ್ಯರಾದ ಪ್ರಕಾಶ್ ರಾವ್ ಅವರಿಗೆ ವಿಷಯವನ್ನು
ಕಾರ್ಕಳ : ಪರಶುರಾಮ ನಕಲಿ ಮೂರ್ತಿ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಯನ್ನು ಗುಜುರಿಗೆ ಹಾಕಿ ಅವ್ಯವಹಾರ ವೆಸಗಿದ್ದಾರೆ. ಅದರ ಮೂಲಕ ಬಿಜೆಪಿ ಸರಕಾರದ ಕರ್ಮಕಾಂಡಗಳು ಹೊರಗೆ ಬರುತ್ತಿವೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿಯ ಮೈದಾನದಲ್ಲಿ ಶಾಸಕ ಸುನೀಲ್ ಕುಮಾರ್ ವಿರುದ್ಧ ನಡೆದ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಕ್ಕರೆ ಕಾರ್ಖಾನೆ ಹಗರಣ ದಲ್ಲಿ 15 ಕೋಟಿ, ನಕಲಿ
ಉಳ್ಳಾಲ: ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಆರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ನದಿಯ ಹೊಸಸೇತುವೆಯಲ್ಲಿ ಸಂಭವಿಸಿದೆ. ಅಕಾಲಿಕವಾಗಿ ಸುರಿದ ಮಳೆಯಿಂದ ವಾಹನಗಳು ಒಂದರ ಹಿಂದೆಯಂತೆ ಅಪ್ಪಳಿಸಿರುವುದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿ ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿದೆ. ಇದೇ ವೇಳೆ ಭಾರೀ ಮಳೆ ಆರಂಭವಾಗಿತ್ತು. ನಿಯಂತ್ರಣ ಕಳೆದುಕೊಂಡ ಆಲ್ಟೋ ಕಾರು ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದೆ.
ಮಂಗಳೂರು: ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯುಟ್ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂದರ್ಭ ಮನೆಯಲ್ಲಿ
108 ವರ್ಷ ಇತಿಹಾಸದ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಮಟಪಾಡಿಯ 9 ನೇ ನೂತನ ಹವಾನಿಯಂತ್ರಿತ ಶಾಖೆ ಮತ್ತು ನವರತ್ನ ಮಿನಿ ಸಭಾಂಗಣದ ಉದ್ಘಾಟನೆ ಜರುಗಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ನೂತನÀ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಸಹಕಾರಿ ಸಂಸ್ಥೆಗಳು ಸರಕಾರದ ಯಾವೂದೇ ಸೌಲಭ್ಯವನ್ನು ಬಯಸದೆ ಜನರಿಂದ ಜನರಿಗಾಗಿ ಎನ್ನುವ ದ್ಯೇಯದಲ್ಲಿ ಜನರ ವಿಸ್ವಾಸಗಳಿಸಿ ಇಂದು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸರಿ
ಮೂಡುಬಿದಿರೆ: ವಕೀಲ, ಪತ್ರಕರ್ತ, ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ ಕೋಟ್ಯಾನ್ (30ವ) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಸಚ್ಚರಿಪೇಟೆ ಪೆರೂರು ನಿವಾಸಿ ಆನಂದ- ವನಜಾ ದಂಪತಿಯ ಪುತ್ರ ವೇಣುಗೋಪಾಲ್ ಅವರು ಕಳೆದ 11 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜತೆಗೆ ವಕೀಲ ವೃತ್ತಿಯನ್ನು ಮಾಡುತ್ತಿದ್ದರು. ಮೂರು ಬಾರಿ ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಅವರು ಮೂಡುಬಿದಿರೆ
ಮಂಗಳೂರಿನ ಜ್ಯೋತಿ ಸರ್ಕಲ್ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡಲಾಗುತ್ತಿದೆ. ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ ಉದ್ಘಾಟಿಸಿ, ನಂತರ ದರೋಹ ಎಂಬ ಹೊಸ ಆಭರಣವನ್ನು ಬಿಡುಗಡೆಗೊಳಿಸಿದರು. ಈ ವಿಶೇಷ ರಿಯಾಯಿತಿಯು ಅ.15 ರಿಂದ ನ.12ರ ವರೆಗೆ ನಡೆಯಲಿದ್ದು, 25% ನಷ್ಟು ಚಿನ್ನದ ಮೇಕಿಂಗ್ ದರದಲ್ಲಿ ರಿಯಾಯಿತಿ




























