Home Posts tagged V4News (Page 356)

ಅಮೇರಿಕಾದಲ್ಲಿ ಕೋಟದ ಕುವರಿ ಅದಿತ್ರಿ ಪೈಯಿಂದ ಕಾಂತಾರ ಸಿನಿಮಾ ಹಾಡು

ಉಡುಪಿ ಜಿಲ್ಲೆ ಕೋಟ ಮೂಲದ 10 ವರ್ಷದ ಕುವರಿ ಅದಿತ್ರಿ ಪೈ ಅಮೇರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಕಾಂತಾರ ಸಿನಿಮಾ ಹಾಡು ಹಾಡಿ ಜನಮೆಚ್ಚುಗೆ ಪಡೆದಿದ್ದಾಳೆ. ಅಮೇರಿಕಾದ ಒಹಾಯೋ ರಾಜ್ಯದ ಲೈಮಾದಲ್ಲಿ ಮಲ್ಟಿ ಕಲ್ಚರಲ್ ಎಕ್ಸ್ ಪೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂತಾರಾ ಸಿನಿಮಾದ ವರಾಹ ರೂಪಂ ಹಾಡಿನ ಟ್ಯಾಕ್‍ಗೆ ಶಾಸ್ತ್ರೀಯ ರಾಗದ ಕನ್ನಡ ಗೀತೆಯೊಂದನ್ನು

ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ

ಒಂದು ಕ್ಷಣ ಪುಟ್ಟ ಮಕ್ಕಳ ಜತೆ ಮಕ್ಕಳಾಗಿ ಹೋದ್ರು ಪೊಲೀಸ್  ಕಮಿಷನರ್

ಪೊಲೀಸ್ ಠಾಣೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆಯುವ ಮಕ್ಕಳಿಗೆ ಲವಲವಿಕೆಯಿಂದ ಕೂಡಿದ ವಾತಾವರಣವನ್ನು ಕಲ್ಪಿಸುವುದು   ಪೊಲೀಸ್   ಅಂದಾಗ ಮಕ್ಕಳ ಮನಸಿನಲ್ಲಿ ಮೂಡುವ ಭಾವನೆಗಳು  ಬೇರೆ ಬೇರೆಯ ಪ್ರಶ್ನೆಗಳು ಮೂಡಿಬರುವುದು  ಬಹಳಷ್ಟಿದೆ.  ಇಲ್ಲಿ  ಪೊಲೀಸ್ರು ಅಂದಾಗ ಭಯ ಪಡುವ ದೃಷ್ಟಿಕೋನ ದೂರ ಅಗಬೇಕಿದೆ. ಈ ನಿಟ್ಟಿನಲ್ಲಿ ಮಕ್ಕಳ ಜತೆ ಒಂದೊತ್ತು ಕಾಲ ಕಳೆದು  ಮಕ್ಕಳ ಜತೆ  ಮಕ್ಕಳಾಗಿ   ಹೋದ್ರು

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಸಿಜಿ ಭೇಟಿ

ದಿನಾಂಕ: 05-10-2023ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಡಾ|| ಅಕ್ಷಯ್ ಕುಮಾರ್ ಎಂ. ಹಾಕೆ , ಐಪಿಎಸ್ ಮಾನ್ಯ ಉಪ ಮಹಾ ಸಮಾದೇಷ್ಟರು, ಗೃಹರಕ್ಷಕದಳ ಹಾಗೂ ಉಪ ನಿರ್ದೇಶಕರು, ಪೌರರಕ್ಷಣೆ, ಕರ್ನಾಟಕ ರಾಜ್ಯ ಬೆಂಗಳೂರು ಇವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು ಪರಿಶೀಲಿಸಿದರು. ಕಾಲ ಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ಇತರೆ ಇಲಾಖೆಯಲ್ಲಿ ಕೆಲಸ ಮಾಡುವ

ಸುಳ್ಯ :ಕೆವಿಜಿ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾಪ್ರಸಾದ್ ಗೆ ಜೀವಾವಧಿ ಶಿಕ್ಷೆ

ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ

ಅಸೈಗೋಳಿ ಅಭಯ ಆಶ್ರಮದ ವಾಸಿಗಳಿಗೆ ಅನ್ನದಾನ

ಕೋಟೆಕಾರು ಅಯ್ಯಪ್ಪ ಮಂದಿರದ ಗರುಸ್ವಾಮಿ ದಿವಂಗತ ಪ್ರಭಾಕರನ್ ಅವರ ಸ್ಮರಣಾರ್ಥ ವಿಷನ್ ಕುಡ್ಲದ ವತಿಯಿಂದ ಅಸೈಗೋಳಿಯಲ್ಲಿರುವ ಅಭಯಾಶ್ರಮದ ವಾಸಿಗಳಿಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿಷನ್ ಕುಡ್ಲದ ಅಧ್ಯಕ್ಷರಾದ ಜಿತೇಂದ್ರ, ಕಾರ್ಯದರ್ಶಿ ಸಂತೋಷ್ ಕುಮಾರ್, ಖಜಾಂಜಿ ರಾಮಚಂದ್ರ, ಉದಯ ಕುಮಾರ್, ಪ್ರಸನ್ನ, ಪ್ರವೀಣ್ ಮಯ್ಯ, ಪ್ರದೀಪ್, ಲೈನಲ್, ಅಭಯಾಶ್ರಮದ ಕಾರ್ಯದರ್ಶಿ ರವಿ ಕುಮಾರ್ ರೈ ಅವರು ಉಪಸ್ಥಿತರಿದ್ದರು.

ಮಂಗಳೂರು : ಅಕ್ಟೋಬರ್ 15ರಿಂದ 25ರ ವರೆಗೆ ನಡೆಯಲಿರುವ – ಮಂಗಳೂರು ದಸರಾ-2023

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ-2023 ನವರಾತ್ರಿ ಮಹೋತ್ಸವವು ಅಕ್ಟೋಬರ್ 15ರಿಂದ 25 ರ ವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್. ಎಸ್ ಸಾಯಿರಾಂ ಹೇಳಿದರು. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ದಸರಾ ಮಹೋತ್ಸವದ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಸದಸ್ಯರಾದ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರತಿಷ್ಠಾಪಿಸಿದ ಕುದ್ರೋಳಿ ಕ್ಷೇತ್ರದಲ್ಲಿ

ಮೂಡುಬಿದಿರೆ: ಜನವಸತಿ ಪ್ರದೇಶದಲ್ಲಿ ಹರಿಯುತ್ತಿರುವ ಕೊಳಚೆ ನೀರು, ಧರಣಿ ಕುಳಿತು ಪುರಸಭೆಗೆ ದಿಕ್ಕಾರ ಕೂಗಿದ ರಾಜೇಶ್ ಕಡಲಕೆರೆ

ಕಡಲ ಕೆರೆ ಕೈಗಾರಿಕಾ ಪ್ರದೇಶದಿಂದ ಸಾರ್ವಜನಿಕ ರಸ್ತೆ ಸಾರ್ವಜನಿಕ ಜನ ವಸತಿ ಪ್ರದೇಶಕ್ಕೆ ಕೊಳಚೆ ನೀರು ಬರುತ್ತಿದ್ದು ಸುಮಾರು ಮೂರು ವರ್ಷಗಳಿಂದ ಸತತ ದೂರು ನೀಡಿದ್ದರೂ ಪುರಸಭೆಯು ಕ್ರಮಕೈಗೊಂಡಿಲ್ಲವೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ರಾಜೇಶ್ ಕಡಲಕೆರೆ ಅವರು ಪುರಸಭಾ ಕಛೇರಿಯ ಮುಂಭಾಗ ಧರಣಿ ಕುಳಿತು ಪುರಸಭೆಗೆ ಧಿಕ್ಕಾರವನ್ನು ಕೂಗಿದರು. ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಗಳಿಂದ ಹೊರ ಬಿಡುತ್ತಿರುವ ಕೊಳಚೆ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಹರಿದು

ಮಂಗಳೂರು: ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲು ವಿಳಂಬ ಧೋರಣೆ, ಬೀದಿ ಬದಿ ವ್ಯಾಪಾರಿಗಳಿಂದ ಮನಪಾ ಕಚೇರಿಗೆ ಮುತ್ತಿಗೆ

ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಮುತ್ತಿಗೆ ಹಾಕಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಂದ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. 3 ವರ್ಷಗಳಿಂದ ನಮ್ಮ ಪ್ರಮಾಣ ಪತ್ರವಾಗಲೀ, ಗುರುತಿನ ಚೀಟಿಯನ್ನಾಗಲೀ ನವೀಕರಿಸಿ ನೀಡಿಲ್ಲ ಎಂದು ವ್ಯಾಪಾರಿಗಳು ಆರೋಪಿಸಿದರು. ಬೀದಿ ಬದಿವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮಾತನಾಡಿ, ಮಹಾ