ಶಿಶಿಲ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಮಿಯ್ಯಾರು ರಕ್ಷಿತಾರಣ್ಯದ ಹೇವಾಜೆಯಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡುತ್ತಿದ್ದಾಗ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿಶಿಲ ಗ್ರಾಮದ ದೇವಸ ನಿವಾಸಿ ಸೇಸಪ್ಪ ಗೌಡರ ಮಗ ಧರ್ಣಪ್ಪ ಗೌಡ(46) ಎಂಬವರನ್ನು ಬಂಧಿಸಿದ್ದು.
ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಇಚ್ಲಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಅರ್ಥೋಡಾಕ್ಸ್ ಸೀರಿಯನ್ ಚರ್ಚ್ನಲ್ಲಿ ನಾಗರಿಕರಿಗೆ ಕಾಡಾನೆಗಳು ತೋಟಕ್ಕೆ ಬರದಂತೆ ತಡೆಗಟ್ಟುವ ಹಾಗೂ ಬಂದರೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ನೀಡಲಾಯಿತು. ಅಂತಾರಾಷ್ಟ್ರೀಯ ಮಟ್ಟದ ತಜ್ಞರಾದ ಡಾ.ರುದ್ರಾಧಿತ್ಯ ವಿಕ್ರಂ ಷಾ ರವರು ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಇಚಿಲಂಪಾಡಿ ಚರ್ಚಿನ ಧರ್ಮಗುರುಗಳು, ಗ್ರಾಮ ಪಂಚಾಯತ್ ಸದಸ್ಯರಾದ ಡೈಸಿ
ವಿಟ್ಲ: ನಗರೋತ್ಥಾನ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಬೆಂಬಲಿತ 12 ಮಂದಿ ಸದಸ್ಯರನ್ನು ಕಡೆಗಣಿಸಲಾಗಿದೆ. ಶಾಸಕರು ಅನುದಾನವನ್ನು ಎಲ್ಲರಿಗೂ ಸಮನಾಗಿ ಹಂಚಬೇಕು ಎಂದು ಆಗ್ರಹಿಸಿ ಸೆ.7ರಂದು ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಧರಣಿಯನ್ನು ನಡೆಸುವ ಮೂಲಕ ನ್ಯಾಯವನ್ನು ಯಾಚಿಸಲಿದ್ದೇವೆ. ಸ್ಥಳಕ್ಕೆ ಯೋಜನಾ ನಿರ್ದೇಶಕರು ಹಾಗೂ ಆಡಳಿತಾಧಿಕಾರಿಗಳು ಆಗಮಿಸಿ ಮನವಿಯನ್ನು ಸ್ವೀಕಾರ ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಅರುಣ್ ಎಂ. ವಿಟ್ಲ
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದರು. ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು. ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿದ್ದು ನಂತರ ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್
ಬಂಟ್ವಾಳ: ಹಿರಿಯ ರಂಗಕರ್ಮಿ, ನಟ, ನಿರ್ದೇಶಕ, ತರಬೇತುದಾರ, ಸಂಘಟಕ, ಕಾರ್ಯಕ್ರಮ ನಿರೂಪಕ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾದರು.ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಮತ್ತು ಕಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಮಂಜುವಿಟ್ಲ ಅವರು ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕರಾಗಿ, ರಂಗಕಲಾವಿದರಾಗಿ, ರಂಗ ನಿರ್ದೇಶಕರಾಗಿ, ವಿಮರ್ಷಕರಾಗಿ,
ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮತ್ತು ವಕೀಲರ ಭವನದ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಎಂ. ಶ್ಯಾಮ್ ಪ್ರಸಾದ್ ಅವರು ಬಂಟ್ವಾಳ ನ್ಯಾಯಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಅತೀ ಶೀಘ್ರದಲ್ಲಿ ವಕೀಲರ ಭವನದ ಜೊತೆಗೆ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ಪ್ರಾರಂಭ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು. ವಕೀಲರ ಸಂಘ ಬಂಟ್ವಾಳದ ವತಿಯಿಂದ ಗೌರವಾನ್ವಿತ ನ್ಯಾಯಾಧೀಶರುಗಳನ್ನು
ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ಹುಲಿ ವೇಷ ತಂಡ ಸಿದ್ಧವಾಗಿದೆ. ಈ ಬಾರಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದಲ್ಲಿ ಹೆಣ್ಣು ಮಕ್ಕಳ ತಂಡದ ಹುಲಿವೇಷ ಕುಣಿತ ವಿಶೇಷ ಗಮನ ಸೆಳೆಯಲಿದೆ. ಈ ಮೂಲಕ ಸಾಂಪ್ರದಾಯಿಕ ಕಲೆಯಾದ ಹುಲಿ ವೇಷ ಕುಣಿತವನ್ನು ಉಳಿಸಿ ಬೆಳೆಸುವಲ್ಲಿ ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ತಂಡ ಮುಂದಡಿಯಿಟ್ಟಿದೆ. ಈ ಕುರಿತು ದರ್ಪಣ ಸಂಸ್ಥೆಯ ನೃತ್ಯ ನಿರ್ದೇಶಕಿ ರಮ್ಯಾ ಅವರು ಮಾತನಾಡಿ ನಮ್ಮ ದರ್ಪಣ ಸಂಸ್ಥೆಯಲ್ಲಿ ಸುಮಾರು ಏಳು ವರ್ಷಗಳಿಂದ ಮಹಿಳೆಯರು ಹಾಗೂ
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿಯ 8 ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಪ್ಲಾಸ್ಟಿಕ್ ನಿಕ್ಷೇಪ ಕೇಂದ್ರ ಉಪಯೋಗ ಶೂನ್ಯವಾಗಿ ಸುಮಾರು 2 ವರ್ಷ ಕಳೆದರೂ ಯಾರೂ ಇತ್ತ ಕಡೆ ಗಮನ ಹರಿಸುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ. ಮಾಲಿನ್ಯ ನಿಕ್ಷೇಪ ಕೇಂದ್ರದಲ್ಲಿ ಶೇಖರಿಸಿಡಬೇಕಾದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ನಿಕ್ಷೇಪ ಕೇಂದ್ರದ ಹೊರಗಡೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಾಕುತ್ತಿರುವುದು ಸ್ಥಳೀಯರಲ್ಲಿ ಆತಂಕವನ್ನು ಹೆಚ್ಚಿಸಿದೆ. ನಿಕ್ಷೇಪ ಕೇಂದ್ರದ ಹೊರಗಡೆ
ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ ನಂತೂರು ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು. ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ. ಶೀನ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ರಾಷ್ಟ್ರಪತಿ ಯಾಗಿದ್ದ ಡಾ.
ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.ತಲಪಾಡಿ ಗ್ರಾಮದ ನಾರ್ಲ,ಪಡೀಲ್ ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ.ಫೈಝಲ್ ಇಂದು ಬೆಳಿಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ.ಮನೆಯಲ್ಲಿ ಫೈಸಲ್




























