ರಾಜ್ ಬಿ. ಶೆಟ್ಟಿ, ಚೈತ್ರಾ ಆಚಾರ್ ನಟನೆಯ ಟೋಬಿ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಗೊಂಡಿದೆ. ರಾಜ್ಯದೆಲ್ಲೆಡೆ ಟೋಬಿ ಸಿನಿಮಾ ನೋಡಿ ಪ್ರೇಕ್ಷಕರು ಭೇಷ್ ಎನ್ನುತ್ತಿದ್ದಾರೆ. ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ `ಟೋಬಿ' ಚಿತ್ರದ ಫಸ್ಟ್ ಲುಕ್ ನಲ್ಲಿ ಡಿಫರೆಂಟಾಗಿ ಕಾಣಿಸಿಕೊಂಡಿದ್ದರು. ಅದಾಗಲೇ
ಬಂಟ್ವಾಳ: ಕಲ್ಲಡ್ಕದಲ್ಲಿ ಸಂಪೂರ್ಣ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಯಿಂದ ರೋಸಿಹೋದ ವರ್ತಕರು ಹಾಗೂ ಸಾರ್ವಜನಿಕರು ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಇಸ್ರೊದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಹೊರಬಂದ ರೋವರ್ ತನ್ನ ಕಾರ್ಯ ಆರಂಭಿಸಿದೆ. ವಿಕ್ರಮ್ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಚಂದಿರನ ಅಂಗಳದ ಮೇಲೆ ಚಂದ್ರಯಾನ-3 ಯೋಜನೆಯ ಪ್ರಗ್ಯಾನ್ ರೋವರ್ ಉರುಳುತ್ತಿರುವ ಚಿತ್ರವನ್ನು ಭಾರತೀಯ
ಮಂಗಳೂರು: ಕೋವಿಡ್ ಸಂದರ್ಭ ಹತ್ತು ಸಾವಿರಕ್ಕೂ ಅಧಿಕ ಅರ್ಹ ಕುಟುಂಬಗಳಿಗೆ ಅಕ್ಕಿ ವಿತರಣೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಹಿತ ಹಲವು ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸುತ್ತಿರುವ ಡಾ. ಅಬ್ದುಲ್ ಶಕೀಲ್ ಅವರು ಭಾರತೀಯ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್, ಸ್ವಾಮಿ ವಿವೇಕಾನಂದ ಕಲ್ಚರಲ್ ಸೆಂಟರ್ ಕೊಲಂಬೊ ಮತ್ತು ಹೈ ಕಮಿಷನ್ ಆಫ್ ಇಂಡಿಯಾ ಕೊಲಂಬೊ ಕೊಡಮಾಡುವ ಏಷ್ಯಾ ಅಚೀವರ್ಸ್
ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಆ.27 ರಂದು ಭಾನುವಾರ ಸಂಜೆ 3.00 ಗಂಟೆಗೆ ತೊಕ್ಕೊಟ್ಟು ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ನೆರವೇರಲಿದೆ ಎಂದು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್.ಕೊಣಾಜೆ ಹೇಳಿದ್ದಾರೆ. ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್
ಉಳ್ಳಾಲ: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ ನಿರ್ವಾಹಕನ್ನು ತರಾಟೆಗೆ ತೆಗೆದುಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ. ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಐ ಹಳ್ಳೂರ ಎಂಬವರು ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ
ಮಂಗಳೂರು ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ವರವರಿಗೆ ಸನ್ಮಾನಿಸಲಾಯಿತು. ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಮಾತನಾಡಿ, ಯು.ಟಿ ಖಾದರ್ ರವರು ಸರ್ವ ಧರ್ಮಿಯರಿಗೆ ಪ್ರೀತಿಪಾತ್ರರಾಗಿದ್ದು. ಸರ್ವರ ಮನ ಗೆಲುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ಗೌರವಾಧ್ಯಕ್ಷ ಹಾಜಿ ಎನ್.ಎಸ್ ಕರೀಂ, ಉಪಾಧ್ಯಕ್ಷ ಶಬರೀಶ್ ಶೆಟ್ಟಿ, ಕೋಶಾಧಿಕಾರಿ
ಮಂಗಳೂರು : ಮಿಲಾಗ್ರೆಸ್ ಪಿಯು ಕಾಲೇಜು, ಹಂಪನಕಟ್ಟೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್ಗಳು ಮತ್ತು ಸಂಘಗಳನ್ನು ಆಗಸ್ಟ್ 21 ರಂದು ಉದ್ಘಾಟಿಸಲಾಯಿತು. ಎಲ್ಲಾ ಕ್ಲಬ್ ಸದಸ್ಯರು, ಕೋ-ಆರ್ಡಿನೇಟರ್ಗಳು ಮತ್ತು ಇತರ ವಿದ್ಯಾರ್ಥಿಗಳು ಪಿಯು ಕಾಲೇಜು ಸಭಾಂಗಣದಲ್ಲಿ ಜಮಾಯಿಸಿದರು. ಮುಖ್ಯ ಅತಿಥಿ ಶ್ರೀ ಸಚೇತ್ ಸುವರ್ಣ ಇತಿಹಾಸ ಉಪನ್ಯಾಸಕರು, ಸರ್ಕಾರಿ ಪಿಯು ಕಾಲೇಜು, ಕಾವೂರು, ಪ್ರಾಂಶುಪಾಲ ಶ್ರೀ ಮೆಲ್ವಿನ್ ವಾಸ್,ಶ್ರೀ ಕಿರಣ್ ಡಿ ಸೋಜಾ ಇಂಗ್ಲಿಷ್
ಮಂಗಳೂರು: ಸೆ.17ರಂದು ಪುಣೆ ಕುಲಾಲ ಸುಧಾರಕ ಸಂಘದ 45ನೇ ವಾರ್ಷಿಕ ಮಹಾಸಭೆ- ಸಾಂಸ್ಕ್ರತಿಕ ಕಾರ್ಯಕ್ರಮ ಮಂಗಳೂರು: ಪುಣೆ ಕುಲಾಲ ಸುಧಾರಕ ಸಂಘದ 45ನೇ ವಾರ್ಷಿಕ ಮಹಾಸಭೆಯು ಸೆ.17ರಂದು ಬೆಳಿಗ್ಗೆ 10ಗಂಟೆಗೆ ಪುಣೆಯ ಡಾ.ಶ್ಯಾಮ್ರಾವ್ ಕಲ್ಮಾಡಿ ಕನ್ನಡ ಹೈಸ್ಕೂಲ್ನಲ್ಲಿ ನಡೆಯಲಿದೆ. ಬೆಳಿಗ್ಗೆ ಸಾಂಸ್ಕ್ರತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಲೆಕ್ಕಪತ್ರ ಮಂಡನೆ, ಗೌರವಾರ್ಪಣೆ, ಮಧ್ಯಾಹ್ನ ಭೋಜನ, ನಂತರ ನೆಲ್ಯಾಡಿ ವನಶ್ರೀ ಕಲಾವಿದರಿಂದ ಕುಸಾಲ್ದ
ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ನ ಮಾಜಿ ನಿರ್ದೇಶಕ ರೆ. ರೆವ್. ಬ್ಯಾಪ್ಟಿಸ್ಟ್ ಮೆನೆಜಸ್ ಅವರು ಬುಧವಾರ ನಿಧನರಾದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ, ಅಗ್ರಾರ್ನ ಮೋಸ್ಟ್ ಹೋಲಿ ರಿಡೀಮರ್ ಚರ್ಚ್ನಲ್ಲಿ ಸಹಾಯಕ ಪ್ಯಾರಿಷ್ ಪಾದ್ರಿಯಾಗಿ, ಮಂಗಳೂರಿನ ಸೇಂಟ್ ಆಂಟೋನಿ ಚಾರಿಟೇಬಲ್ ಸಂಸ್ಥೆಗಳಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಬ್ಯಾಪ್ಟಿಸ್ಟ್ ಮೆನೆಜಸ್ ಅವರು ೧೯೭೭ರಲ್ಲಿ ರೋಮ್ನಲ್ಲಿ ನೈತಿಕ ಥಿಯಾಲಜಿ ಮತ್ತು 1982ರಲ್ಲಿ




























