Home Posts tagged V4News (Page 397)

ಬೈಂದೂರಿನ ವಿಹಿಂಪ ಮತ್ತು ಭಜರಂಗದಳದಿಂದ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ

ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದರು. ಸಭಾಕಾರ್ಯಕ್ರಮದಲ್ಲಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ

ಸುಳ್ಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮ ಕೆವಿಜಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ನಂತರ ವಿವಿಧ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಕಳ : ಕೊಳಚೆ ನೀರಿನ ದುರ್ವಾಸನೆಯಿಂದ ಸ್ಥಳೀಯ ಜನತೆಗೆ ಸಂಕಷ್ಟ

ಕಾರ್ಕಳ ಪುರಸಭೆ ವ್ಯಾಪ್ತಿಯ ಗಾಂಧಿ ಮೈದಾನದ ಮುಖ್ಯ ರಸ್ತೆಯಲ್ಲಿ ಸುಮಾರು 20 ದಿನಗಳಿಂದ ಒಳ ಚರಂಡಿಯ ನೀರು ಹರಿಯುತ್ತದೆ. ಈ ನೀರು ದುರ್ವಾಸನಿಂದ ಕೂಡಿದ ಪರಿಣಾಮ ಸ್ಥಳೀಯ ವಸತಿ ಸಂಕೀರ್ಣದಲ್ಲಿ ವಾಸಿಸುವ ಜನತೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ಅದಲ್ಲದೆ ಪಕ್ಕದಲ್ಲಿ ಕ್ರೈಸ್ ಕಿಂಗ್ ಚರ್ಚ್ ಹಾಗೂ ಕಾನ್ವೆಂಟ್ ಮತ್ತು ಸಾವಿರಾರು ಮಕ್ಕಳು ಓದುತ್ತಿರುವ ಶಾಲೆಯೂ ಇದೆ. ಎಲ್ಲರೂ ಈ ತ್ಯಾಜ್ಯ ನೀರಿನ ದುರ್ವಾಸನೆಯನ್ನು ಸಹಿಸಿಕೊಂಡು ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ.

ದ.ಕ. ಜಿಲ್ಲೆಯ ಬಿಜೆಪಿ ಶಾಸಕರಿಂದ ಪ್ರತಿಭಟನೆ

ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು

ಕಟಪಾಡಿ: ಕಾರು ಡಿಕ್ಕಿ ದಂಪತಿಗೆ ಗಾಯ

ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಗಾಯಗೊಂಡ ಘಟನೆ ಕಟಪಾಡಿ ಬಳಿ ನಡೆದಿದೆ. ತೆಂಕ ಎರ್ಮಾಳು ನಿವಾಸಿಗಳಾದ ದೀರಜ್ ಹಾಗೂ ಅವರ ಪತ್ನಿ ಪವಿತ್ರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರನ್ನು ಅದರ ಚಾಲಕ ಅತೀ ವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಪರಿಣಾಮ ಕಟಪಾಡಿ ಪೇಟೆ ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವನ್ನು ಏರಿ ನಂತರ ದ್ವಿಚಕ್ರ ವಾಹನಕ್ಕೆ

ಮೂಡುಬಿದಿರೆ : ಕನ್ನಡ ಭಾಷಾ ಬೋಧಕರಿಗೆ ಕಾರ್ಯಾಗಾರ

ಶಿಕ್ಷಕರಿಗೆ ಕನ್ನಡ ಸಾಹಿತ್ಯ ಚರಿತ್ರೆ, ಭಾರತದ ಎಲ್ಲ ಮತಧರ್ಮಗಳು, ಸಾಹಿತ್ಯ, ಸಂಗೀತಾದಿ ಸಾಂಸ್ಕೃತಿಕ ಪರಿಚಯ ಒಂದಿಷ್ಟು ಇರಬೇಕಾಗಿದೆ; ಶರೀರ ಭಾಷೆಯನ್ನೂ ಬೋಧನೆಯ ಮಾಧ್ಯಮವಾಗಿ ಬಳಸುವ, ನೋಟ್ಸ್ ಕೊಡದೆ ಸ್ವಂತಿಕೆ ಬೆಳೆಸುವ, ಪಾಠ ಬಿಟ್ಟು ಅನ್ಯ ಲೇಖನಗಳ ಕಾಪಿ ಬರೆಸುವ, ಉಚ್ಚಾರ ಹೇಳಿಕೊಡುವ, ಪಾಠವನ್ನು ವಿಷಯದ ದೃಷ್ಟಿಗಿಂತಲೂ ಭಾಷೆಯ ದೃಷ್ಟಿಯಿಂದ ನೋಡುವ , ಕಲಿಸುವ ಸಾಮರ್ಥ್ಯವನ್ನು ಹೊಂದಿರಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಉದಯ ಬಾರ್ಕೂರು ನಿಧನ

ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ‌ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಬ್ಧಾರಿಗಳನ್ನು ನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ

ಮಿಲಾಗ್ರಿಸ್ ಪ.ಪೂ. ಕಾಲೇಜು : ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು. ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ ಮತ ಪಂಥಗಳ ಬೇಧ ಭಾವವನ್ನು ಮರೆತು ಸಮಾಜ ಸೇವೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇ.

ಕಲ್ಲಬೆಟ್ಟುವಿನಲ್ಲಿ ಶಾಲಾ ಔಷಧಿ ವನದ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ ಸಹಯೋಗದಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ‘ಶಾಲಾ ಔಷಧಿ ವನ’ವನ್ನು ಸಸ್ಯಗಳ ನಾಟಿ ಮೂಲಕ ಉದ್ಘಾಟಿಸಲಾಯಿತು. ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಹಾಗೂ ಸುರೇಶ್ ಕೋಟ್ಯಾನ್ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ದ್ರವ್ಯಗುಣ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಸುಬ್ರಹ್ಮಣ್ಯ

ತಲಪಾಡಿ ಗ್ರಾ.ಪಂ ಬಿಜೆಪಿ ಸದಸ್ಯರ ಬೆಂಬಲ, ಎಸ್‌ಡಿಪಿಐ ಸದಸ್ಯರಿಗೆ ಅಧ್ಯಕ್ಷ ಸ್ಥಾನ

ಉಳ್ಳಾಲ: ತಲಪಾಡಿ ಗ್ರಾ.ಪಂ ಎರಡನೇ ಅವಧಿಗೆ ಎಸ್‌ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್‌ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರೀಕ್ಷಿತ ಅಭ್ಯರ್ಥಿಯಾಗಿದ್ದ ಸತ್ಯರಾಜ್‌ ಪರಾಭವಗೊಂಡಿದ್ದಾರೆ. ಗ್ರಾಮದ ಆಡಳಿತದಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ