Home Posts tagged V4News (Page 410)

ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವ್ಯಂಗವಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಆಡಳಿತದಲ್ಲಿರುವ ಸಂದರ್ಭದಲ್ಲೇ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಅವರು, ಮೈಥೇಯಿ-ಕುಕಿ-ನಾಗಾ ಸಮುದಾಯದಲ್ಲಿ ಎಷ್ಟು ಸಂಖ್ಯೆ ಇದೆ ಗೊತ್ತಿಲ್ಲ. ಚುನಾವಣೆ ಉದ್ದೇಶದಿಂದ ಬಿಜೆಪಿ ಸರ್ಕಾರ ಮೈಥೇಯಿ ಪರವಾಗಿ ನಿಂತಿದೆ. ಬಿಜೆಪಿ ಮನುಷ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ದೌರ್ಜನ್ಯ ನಡೆಯುತ್ತಿರುವಾಗ ಮೋದಿ ವಿಶ್ವನಾಯಕನಾಗಲು ಸಾಧ್ಯವಿಲ್ಲ ಎಂದರು. ಇನ್ನು

ಮಣಿಪುರ ಕೃತ್ಯ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ

ಮಹಿಳೆಯರನ್ನು ಮಾತೆಯರೆನ್ನುವ ಬಿಜೆಪಿ ಸರ್ಕಾರದ ಇನ್ನೊಂದು ಮುಖ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವುದರ ಮೂಲಕ ಮಣಿಪುರದಲ್ಲಿ ಬಹಿರಂಗಗೊಂಡಿದೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ಮಣಿಪುರ ರಾಜ್ಯದಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಕಾಪು ಪೇಟೆಯಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್

ಮಂಗಳೂರಿನಲ್ಲಿ ಮಣಿಪುರ ಹಿಂಸಾಚಾರ ಖಂಡಿಸಿ ಕಥೋಲಿಕ್ ಸಭಾದ ನೇತೃತ್ವದಲ್ಲಿ ಪ್ರತಿಭಟನೆ

ಮಣಿಪುರದ ಹಿಂಸಾಚಾರವನ್ನು ನಿಲ್ಲಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ನೀಡಲು ಕೇಂದ್ರ ಸರ್ಕಾರ ವಿಫಲವಾದರೆ ದೆಹಲಿ ಮತ್ತು ಮಣಿಪುರ ಚಲೋ ನಡೆಸಲಾಗುವುದು ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೊ ಎಚ್ಚರಿಕೆ ನೀಡಿದರು. ಕಥೋಲಿಕ್ ಸಭಾದ ನೇತೃತ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್‍ನ ಸಹಭಾಗಿತ್ವಲ್ಲಿ ನಗರದ ಪುರಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಅವರು

ಉಡುಪಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ” ಸಭೆ ನಡೆಸಿದರು.   ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಟ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಛೇರಿಯ ಬಳಿ ಸಮಾಗಮಗೊಂಡಿತು. ನಂತರ ಪ್ರತಿಭಟನಾ ಸಭೆ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ

ಉಳ್ಳಾಲ: ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ಇದ್ದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ  ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದೆ. ಲಾರಿಯಲ್ಲಿ ಓವರ್ ಲೋಡ್ ಇದ್ದ

ಭದ್ರಾವತಿಯ ಯುವಕನ ಪತ್ತೆಗಾಗಿ ತೀವ್ರ ಹುಡುಕಾಟ: ಡ್ರೋನ್ ಕ್ಯಾಮರಾದಿಂದ ಶೋಧ ಕಾರ್ಯ

ಬೈಂದೂರು ಸಮೀಪದ ಕೊಲ್ಲೂರಿನ ಅರಶಿನಗುಂಡಿ ಎಂಬಲ್ಲಿ ಜಲಪಾತದ ಹರಿಯುವ ನೀರಿನಲ್ಲಿ ನಾಪತ್ತೆಯಾದ ಭದ್ರಾವತಿಯ ಯುವಕನ ಪತ್ತೆಗಾಗಿ ಡ್ರೋನ್ ಕ್ಯಾಮೆರಾ ಮೂಲಕ ಶೋಧ ಕಾರ್ಯ ನಡೆಯುತ್ತಿದೆ.   ಭಾನುವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಅರಸಿನಗುಂಡಿ ಜಲಪಾತದಲ್ಲಿ ಕಾಲುಜಾರಿ ಬಿದ್ದು ನಾಪತ್ತೆಯಾಗಿರುವ ಭದ್ರಾವತಿ ತಾಲ್ಲೂಕಿನ ಸುಣ್ಣದ ಹಳ್ಳಿಯ ಕೆ.ಎಚ್.ನಗರದ ಯುವ ಉದ್ಯಮಿ ಶರತ್ ಕುಮಾರ್ ಅವರ ಪತ್ತೆ ಕಾರ್ಯ ನಿನ್ನ ಮತ್ತು ಇವತ್ತು ಡ್ರೋನ್ ಕ್ಯಾಮೆರಾದ ಮೂಲಕ ಹುಡುಕಾಟ ಬರದಿಂದ

ಪಡುಬಿದ್ರಿ: ಶಾಲಾ ಸೆಕ್ಯೂರಿಟಿ ಗಾರ್ಡ್ ಬಾವಿಗೆ ಹಾರಿ ಆತ್ಮಹತ್ಯೆ

ಎರ್ಮಾಳು ಬಡಾ ದೇವಸ್ಥಾನ ಬಳಿಯ ನಿವಾಸಿ ಅದಮಾರು ವಿದ್ಯಾಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಾಹಿಸುತ್ತಿದ್ದ ವ್ಯಕ್ತಿ ಇಂದು ಮುಂಜಾನೆ ಕುಂಜೂರಿನ ಮನೆಯೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಆತ್ಮಹತ್ಯೆ ಮಾಡಿಕೊಂಡವರು ನವೀನ್ ಬಂಗೇರ (53), ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು ಕಳೆದ ಸುಮಾರು ಮೂರು ವರ್ಷಗಳಿಂದ ಅದಮಾರು ವಿದ್ಯಾಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಾಹಿಸುತ್ತಿದ್ದು,

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4: ಸಂತ ಆಲೋಶಿಯಸ್ ಕಾಲೇಜಿನಲ್ಲಿ ಚಾಲನೆ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4 ಗೆ ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಸಂಭ್ರಮದ ಚಾಲನೆ ದೊರೆತಿದೆ.    V4 ನ್ಯೂಸ್ ಮತ್ತು ಮಂಗಳೂರಿನ ಸಂತ ಆಲೋಸಿಯಸ್ ಕಾಲೇಜಿನ ಪತ್ತಿಕೋಧ್ಯಮ, ಸಮೂಹ ಸಂವಹನ ಹಾಗೂ ದೃಶ್ಯ ಸಂವಹನ ವಿಭಾಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರದ ಸಾಧಕರಾದ ಮನೋಹರ್ ಪ್ರಸಾದ್, ಕ್ರೀಡಾಕ್ಷೇತ್ರದ ಸಾಧಕರಾದ ದಿನೇಶ್ ಕುಂದರ್, ವ್ಯಂಗಚಿತ್ರ ಸಾಧಕರಾದ

ಪುತ್ತೂರು : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸ್ರು ಪರಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ. ಮೃತದೇಹ ಯಾರದೆನ್ನುವ ಬಗ್ಗೆ