ಬೈಂದೂರು ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ಇದ್ದ ಕಾರಣದಿಂದ ಪ್ರಾಣಹಾನಿ ಸಂಭವಿಸಿಲ್ಲ. ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ದಿಗೆ ಸರಕಾರ ಹಲವು ಯೋಜನೆಗಳನ್ನು ನೀಡುವ ಭರವಸೆ ನೀಡಿದರೂ ಕೂಡ ಅಧಿಕಾರಿಗಳ ನಿರ್ಲಕ್ಷತನದಿಂದ ಇಂತಹ ಘಟನೆಗಳು
ಐದರ ಹರೆಯದ ಬಾಲೆಯನ್ನು ಬಿಸ್ಕೆಟ್ ಆಸೆ ತೋರಿಸಿ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ ಕೃತ್ಯ ಪಡುಬಿದ್ರಿ ಕಾಮಗಾರಿ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಕೃತ ಮನಸ್ಸಿನ ಕಾಮುಖ ಆರೋಪಿ ಕಲ್ಕತ್ತ ವೆಸ್ಟ್ ಬೆಂಗಾಲ್ ಮುರ್ಶಿದಾಬಾದ್ ನಿವಾಸಿ ಮಾಫಿಜುಲ್ ಶೇಖ್ಈತ ಪಡುಬಿದ್ರಿ ಅಂಚೆ ಕಛೇರಿ ಪಕ್ಕದ ನಿರ್ಮಾಣ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕನಾಗಿ
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ.
ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಶ್ವಾನ ದಳ, ಮಸೂರ ದರ್ಶಕದಿಂದ ತಪಾಸಣೆ ನಡೆಸಲರಾಂಭಿಸಿದ್ದಾರೆ. ಈಗಾಗಲೇ ಉಡುಪಿ ಕೃಷ್ಣ ಮಠ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಆಟಿ ಮಾರಿಪೂಜೆ ಸಂಭ್ರಮದಲ್ಲಿರುವ ಕಾಪುವಿನ
ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ಸು ನಿಲ್ದಾಣದ ಎದುರು ಒಳಚರಂಡಿಯ ಮಲಿನ ನೀರು ಸೋರಿಕೆಯಾಗಿ ಉಂಟಾಗುವ ಅವಾಂತರಗಳು ಹೇಳತಿರದು. ಇಲ್ಲಿಯ ಕೊಳಚೆ ನೀರು ಸೋರಿಕೆ ಹೊರಚಿಮ್ಮಿ ರಸ್ತೆ ಮೇಲೆ ಹರಿಯುತ್ತಿರುವುದಲ್ಲದೆ ಪರಿಸರ ಮಾಲಿನ್ಯಗೊಂಡು ಸುತ್ತಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತಿದೆ. ಬಂಡಿಮಠ ಬಸ್ ನಿಲ್ದಾಣ ಮುಂಭಾಗ ಹೆದ್ದಾರಿಯಲ್ಲಿ ಎರಡು ಕಡೆ ಚರಂಡಿಯಿಂದ ನೀರು ಸೋರಿಕೆಯಾಗುತ್ತದೆ. ಹೆದ್ದಾರಿಯಲ್ಲಿ ಸಹಸ್ರಾರು ವಾಹನಗಳು ನಿತ್ಯ ಓಡಾಟ ನಡೆಸುತ್ತವೆ.
ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ
ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷಮಿಸದು ಎಂದು ಅಖಿಲ ಭಾರತ ವಿಚಾರವಾದಿ ಸಂಘದ ರಾಷ್ಟ್ರ ಅಧ್ಯಕ್ಷರಾದ ಪ್ರೊಫೆಸರ್ ನರೇಂದ್ರ ನಾಯಕ್ ರವರು ಮಣಿಪುರದಲ್ಲಿ ನಡೆಯುತ್ತಿರುವ ಆದಿವಾಸಿಗಳ ಮೇಲಿನ ಹಿಂಸಾಚಾರದ ಘಟನೆಗಳನ್ನು ಖಂಡಿಸಿ ಆದಿವಾಸಿ
ದಿನಾಂಕ 17.12.2000 ರಂದು ರಾತ್ರಿ ಸಮಯ 8:45 ಗಂಟೆಗೆ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ , ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಅಕ್ರ 130/2000 ಕಲಂ: 392 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹುಸೇನ್ @ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರುಗಳಿದ್ದು ಹುಸೇನ್ @ ಮೊಹಮ್ಮದ್ ಹುಸೇನ್
ಇಡೀ ರಾಜ್ಯವನ್ನೇ ಬಿಚ್ಚಿಬಿಳಿಸಿದ್ದ ಕೆ ಜೆ ಹಳ್ಳಿ ಡಿಜೆ ಹಳ್ಳಿಯಲ್ಲಿ ನಡೆದ ವಿದ್ವಾಂಸಕ ಕೃತ್ಯ ದಲ್ಲಿ ಭಾಗಿಯಾದ ಆರೋಪಿಗಳ ಮೊಕದ್ದಮ್ಮೆ ವಾಪಾಸ್ ಪಡೆಯಲು ಶಾಸಕ ತನ್ವೀರ್ ಸೇಠ್ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆದಿದ್ದು ಒಂದು ವೇಳೆ ಕೇಸ್ ಹಿಂಪಡೆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕ ಚಟುವಟಿಕೆಗೆ ಮತ್ತು ವಿದ್ವಾಂಸಕ ಕೃತ್ಯಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಗಂಭೀರ
ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ವಾಮಂಜೂರು ತಿರುವೈಲ್ ಕೆಲರಾಯಿ ಎರಡನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿದ್ದು, ಸ್ಥಳೀಯ ನಿವಾಸಿಗಳಿಗೆ ಮನೆಗಳು ಕುಸಿಯುವ ಆತಂಕ ಎದುರಾಗಿದೆ. ವಾಮಂಜೂರು ತಿರುವೈಲ್ ಕೆಲರಾಯಿ ಈ ಹಿಂದೆ ಮಳೆಗಾಲದಲ್ಲಿ ಗುಡ್ಡ ಕುಸಿತವುಂಟಾಗಿತ್ತು. ಇದೀಗ ಮತ್ತೆ ಕುಸಿತಗೊಂಡು ಸ್ಥಳೀಯರಿಗೆ ಮನೆಗಳೇ ನಾಶವಾಗಬಹುದಾದ ಆತಂಕ ಶುರುವಾಗಿದೆ. ಗುಡ್ಡದ ಮೇಲಿರುವ ಎರಡು ಮನೆಗಳು ಅಪಾಯದ ಅಂಚಿನಲ್ಲಿ ಜೀವನ ಸಾಗಿಸುವ ದುಸ್ಥಿತಿ ಎದುರಾಗಿವೆ. ಈ ಬಗ್ಗೆ




























