ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್ ಎಂಬ 5 ಭಕ್ತಿ ಗೀತೆಗಳ ಲೋಕಾರ್ಪಣೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಗೆಗೆ ತುಳು ಭಕ್ತಿ ಗೀತೆಯು ಬಿಡುಗಡೆಗೊಂಡಿತು.
ಕೂಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ವತಿಯಿಂದ ಜುಲೈ 18ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆ ಹೊಂಡ-ಗುಂಡಿಗಳಿಂದ ತುಂಬಿ ಹೋಗಿದೆ. ಇದರಿಂದ ಸ್ಥಳೀಯರ ನಾಗರಿಕೆರಿಗೆ, ವ್ಯಾಪಾರಸ್ತರಿಗೆ, ವಾಹನ ಚಾಲಕರಿಗೆ ಅಂಬ್ಯುಲೆನ್ಸ್,
ಮೂಡುಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ವಿದ್ಯಾಗಿರಿಯಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಹಲಸು ಮತ್ತು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ `ಸಮೃದ್ಧಿ’ಯು ಸಮಾಪನಗೊಂಡಿತ್ತು. ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ
ಹೋಟೆಲ್ ಡಿಂಕಿ ಡೈನ್ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳಲ್ಲಿ ಬರುವ ಅಮಾವಾಸ್ಯೆಯಂದು ಕರಾವಳಿ ಭಾಗದಲ್ಲಿ ಆಟಿ ಕಷಾಯ ಸೇವನೆ ಡಿಂಕಿ ಡೈನ್ ಹೋಟೆಲ್ ಮಾಲಕರಾದ ಸ್ವರ್ಣ ಸುಂದರ್, ಕಿರಣ್ ಜೋಗಿ, ಮಾಜಿ ಮೇಯರ್ ಹರಿನಾಥ್ ಜೋಗಿ ಪತಂಜಲಿ ಡಾ. ಜ್ಞಾನೇಶ್ ನಾಯಕ್, ಅಶೋಕ್, ಲಕ್ಷ್ಮಣ್ ಕುಮಾರ್ ಮಲ್ಲೂರು, ಪ್ರದೀಪ್
ಬಂಟ್ವಾಳ: ನರಹರಿ ಸದಾಶಿವ ದೇವಾಲಯದಲ್ಲಿ ಇಂದು ಆಟಿ ಅಮವಾಸ್ಯೆ, ತೀರ್ಥ ಸ್ನಾನ ನಡೆಯಿತು. ಪ್ರತಿ ವರ್ಷವೂ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆ ದಿನದಂದು ಇಲ್ಲಿನ ತೀರ್ಥ ಸ್ನಾನ ನಡೆಯುತ್ತದೆ. ತೀರ್ಥ ಬಾವಿಯಲ್ಲಿ ತೀರ್ಥ ಸ್ನಾನ ಮಾಡಿದರೆ ಸಕಲ ಇಷ್ಟಾರ್ಥಗಳು ನೆರವೇರುವುದು ಎಂಬ ಪ್ರತೀತಿ ಇದೆ. ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಶವ ಸಂಸ್ಕಾರಕ್ಕೆ ಸಮಸ್ಯೆ ಆಗುತಿದೆ. ತಕ್ಷಣ ಸ್ಮಶಾನದ ಜಾಗ ನಿಗದಿಗೊಳಿಸುವಂತೆ ಆಗ್ರಹಿಸಿ ಮೃತ ದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ. ಕಳೆದ ಹಲವಾರು ವರ್ಷಗಳಿಂದ ಸ್ಮಶಾನವಿಲ್ಲದೆ ಶವ ಸಂಸ್ಕಾರಕ್ಕಾಗಿ ಗ್ರಾಮಸ್ಥರು ಅಲೆದಾಡುವ ಸ್ಥಿತಿ ಇದ್ದರೂ ಯಾರೂ ಕೂಡ ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ ಸ್ಮಶಾನ ನಿಗದಿಗೊಳಿಸದೇ ಮೃತ ದೇಹದ ಅಂತಿಮ ಸಂಸ್ಕಾರ ಮಾಡುವುದಿಲ್ಲ
ಮಹಿಳೆಯರು ಯಾವಾಗಲೂ ಪುರುಷರಿಗಿಂತ ಕೆಳಗಿನವರು ಎಂಬ ಭಾವನೆಯನ್ನು ಹೋಗಲಾಡಿಸ ಬೇಕು ಮಾನವ ಹಕ್ಕು ಮತ್ತು ವ್ಯಯಕ್ತಿಕ ಹಕ್ಕುಗಳನ್ನು ಒದಗಿಸಬೇಕು ತಮ್ಮ ಜೀವನವನ್ನು ಸ್ವತಂತ್ರವಾಗಿ ಯಾವುದೇ ಭಯವಿಲ್ಲದೆ ಬದುಕುವಂತಾಗಲಿ ಎಂಬ ಉದ್ದೇಶವಿದೆ. ಜೀವನಕ್ಕೆ ಅವಶ್ಯಕವಾದ ಅವಕಾಶಗಳನ್ನು ಪಡೆದು ಕೊಳ್ಳಲು ಮಹಿಳೆಯರು ಯಾವುದೇ ಭಯವಿಲ್ಲದೆ ತಮ್ಮ ಹಕ್ಕು ಚಲಾಯಿಸಬೇಕು ಎಂದು ಉಡುಪಿ ರೋಟರಿ ಅಧ್ಯಕ್ಷೆ ದೀಪಾ ಭಂಡಾರಿ ಹೇಳಿದರು. ಅವರು ಪಡುಬಿದ್ರಿ ಸಹಕಾರಿ ಸಂಗಮದಲ್ಲಿ ನಡೆದ
ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದಿದೆ. ಮೃತರನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್, ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ ಮಿಯ್ಯಾರು (49) ಎಂದು ಗುರುತಿಸಲಾಗಿದೆ. ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ
ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ ಕ ಜಿಲ್ಲಾ ಕ ಸಾ ಪ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕ ಸಾ ಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ , ಸ್ಯಾಂಡ್ಸ್ ಪಿಟ್ ಬೆಂಗ್ರೆ ಇಲ್ಲಿನ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ
ಮೂಡುಬಿದಿರೆ: ಶಿರ್ತಾಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಶಿರ್ತಾಡಿಯ ಪೇಟೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಜೀವಿನಿ ಕಟ್ಟಡಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿತು. ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರು ಶಿಲಾನ್ಯಾಸಗೈದು ಮಾತನಾಡಿ ಸಂಜೀವಿನಿ ಸ್ವಸಹಾಯ ಗುಂಪುಗಳಿಗೆ ಸುಮಾರು ರೂ. 26ಲಕ್ಷ ಅನುದಾನವನ್ನು ಉದ್ಯೋಗ, ಸ್ವ ಉದ್ಯೋಗಕ್ಕಾಗಿ ನೀಡಲಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿಯ ಕಾರ್ಯಕ್ರಮಗಳು




























