ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದ್ದಾರೆ. ಬಾಳೆಪುಣಿ ಗ್ರಾ.ಪಂ ವ್ಯಾಪ್ತಿಯ ಪುಣ್ಯಕೋಟಿನಗರ ಸಮೀಪದಲ್ಲಿ ನೂತನವಾಗಿ ಆರಂಭವಾದ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ
ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ 24ನೇ ಚಾತುರ್ಮಾಸ್ಯವು ಶ್ರೀವಜ್ರದೇಹಿ ಮಠದಲ್ಲಿ ಸಂಪನ್ನಗೊಂಡಿತು. ಪೂಜ್ಯ ಶ್ರೀಗಳು ಮೃತ್ತಿಕಾ ಪೂಜೆಯನ್ನು ನೆರವೇರಿಸಿದರು. ವ್ಯಾಸ ಪೂಜೆ ಮತ್ತು ಪಟ್ಟದ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಅನಂತರ ಭಕ್ತರು ಈ ಸತ್ಕರ್ಮದಲ್ಲಿ ಪಾಲ್ಗೊಂಡಿದ್ದರು.
ಬಸ್ ಡಿಪೋ ಸಿಬ್ಬಂದಿಗಳಿಗೆ ಬೈಯ್ಯುವ ಬರದಲ್ಲಿ ಜಾತಿ ನಿಂದನೆ ಮಾಡಿರುವ ಕೆ.ಎಸ್.ಆರ್.ಟಿ.ಸಿ ಪ್ರಭಾರಿ ವ್ಯವಸ್ಥಾಪಕ. ಜಗನ್ನಾಥ್ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸವಿತಾ ಸಮಾಜದ ವತಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸಕಲೇಶಪುರದ ಡಿಪೋ ಎದುರು ಮೂಟೆಯಲ್ಲಿ ಕೇಶ ತುಂಬಿಸಿಟ್ಟು ಸವಿತಾ ಸಮಾಜದವರು ಪ್ರತಿಭಟನೆ ನಡೆಸಿದರು. ನಮ್ಮ ಸಮುದಾಯದ ಭಾವನೆಗೆ ಧಕ್ಕೆ ತಂದಿರುವ ತಪ್ಪಿತಸ್ಥ ಅಧಿಕಾರಿಯಾದ ಡಿಪೋ ಪ್ರಭಾರಿ ವ್ಯವಸ್ಥಾಪಕ
ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ
ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕೊಲ್ಲೂರಿನ ಸಲಗೇರಿ ಎಂಬಲ್ಲಿ ತಿರುಗಾಡುತ್ತಿದ್ದು, ಇದನ್ನು ಮನಗಂಡ ಸ್ಥಳೀಯರು ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಆಕೆಯನ್ನು ಮಂಜೇಶ್ವರದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಯಿತು. ಮಹಿಳೆ ತಿರುಗಾಡುತ್ತಿದ್ದ ವಿಚಾರವನ್ನು ಸ್ಥಳೀಯರು ಮತ್ತು ರಿಕ್ಷಾ ಚಾಲಕರು ಕೊಲ್ಲೂರು ಟಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಪಂದಿಸಿದ ಪಿಎಸ್ಐ ಜಯಶ್ರೀ ಹನ್ನೂರ ಹಾಗೂ ಸುಧಾರಾಣಿ ಅವರ ಗಮನಕ್ಕೆ ತಂದರು. ನಂತರ ಮಹಿಳೆಗೆ ಭದ್ರತೆಯನ್ನು
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ವಾಣಿಜ್ಯ ಸಂಕೀರ್ಣದ ಮುಂಭಾಗ ಖಾಸಗಿ ಬಸ್ಸುಗಳು ತಂಗುತ್ತವೆ. ಪ್ರಯಾಣಿಕರು ವಾಣಿಜ್ಯ ಕೇಂದ್ರದ ಅಂಗಡಿಗಳ ಮುಂಭಾಗದ ಪ್ಯಾಸೇಜ್ ನಲ್ಲಿ ನಿಲ್ಲುತ್ತಾರೆ. ಖಾಲಿ ಬಿಟ್ಟ ಕೋಣೆಯಲ್ಲಿ ಸೊಳ್ಳೆಗಳ ಸಾಮ್ರಾಜ್ಯ. ಅದು ಒಂದು ಭಾಗವಾದರೆ, ಇನ್ನೊಂದು ಸಮಸ್ಯೆ ಈ ಸಂಕೀರ್ಣದ ಹಿಂದೆ ಮತ್ತೊಂದು ವಾಣಿಜ್ಯ ಸಂಕೀರ್ಣವಿದೆ. ಇವೆರಡರ ಮಧ್ಯೆ ರಸ್ತೆಯೂ ಇದೆ. ಇಲ್ಲಿನ ಮಳಿಗೆಗಳಿಗೆ ನೂರಾರು ಮಂದಿ ನಿತ್ಯ ಓಡಾಡುತ್ತಾರೆ. ಆದರೆ
ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಪುಲ ಬಳಿ ಶಾಂಭವಿ ನದಿಗೆ ನಿರ್ಮಿಸಲಾದ ಕಿಂಡಿ ಅಣೆಕಟ್ಟುವಿನಲ್ಲಿ ತ್ಯಾಜ್ಯಗಳು ಸಿಲುಕಿ ಹಾಕಿಕೊಂಡಿದ್ದು, ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಶೌರ್ಯ ವಿಪತ್ತು ಘಟಕ ಮುಂದಾಗಿದ್ದು, ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತ್ಯಾಜ್ಯಗಳನ್ನು ತೆರವು ಮಾಡಿದರು. ಕಿಂಡಿ ಅಣೆಕಟ್ಟುವಿಗೆ ಕಡಿದು ಹಾಕಿದ ಬೃಹತ್ ಗಾತ್ರದ ಮರದ ದಿಮ್ಮಿ , ಗಿಡ, ಕಸ, ಪ್ಲಾಸ್ಟಿಕ್ ತ್ಯಾಜ್ಯಗಳು ಸಿಕ್ಕಿಹಾಕಿಕೊಂಡು ನದಿಯ ನೀರು ಸರಾಗವಾಗಿ
ಮೂಡುಬಿದಿರೆ : ಸರಕಾರಿ ಮತ್ತು ಅನುದಾನ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ಆಗ್ರಹಿಸಿ, ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ತಾಲೂಕಿನ ಕ.ರಾ. ಅಕ್ಷರ ದಾಸೋಹ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು. ಮೂಡುಬಿದಿರೆ ಸಿಐಟಿಯುನ ಮಾಜಿ ಅಧ್ಯಕ್ಷೆ ರಮಣಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದಿನಕ್ಕೆ ಆರು ಗಂಟೆಗಿಂತಲೂ ಅಧಿಕ ಸಮಯ ಕೆಲಸ ಮಾಡುವ ಅನಿವಾರ್ಯ ಪರಿಸ್ಥಿತಿಯಲ್ಲಿರುವ ರಾಜ್ಯದ




























