Home Posts tagged V4News (Page 45)

ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅರಿಯಡ್ಕ ವಲಯದ ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕರ್ನುರೂ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ರೈ ಇವರು ಉದ್ಘಾಟಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ

ಸೇವಾರ್ಥ ಏಕಾದಶೋತ್ತರ ಶತಾಧಿಕ ಸಹಸ್ರ ನಾಳೀಕೇರ ಮಹಾಗಣಪತಿ ಯಾಗ

ಶ್ರೀ ಆದಿಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ವಂಡಾರು ಇಲ್ಲಿ ವೇದಮೂರ್ತಿ ಶ್ರೀ ರಮೇಶ ಬಾಯರಿ ವಂಡಾರು ಇವರ ನೇತೃತ್ವದಲ್ಲಿ ಶ್ರೀ ಜಯಕುಮಾರ ಅಳಗುಂಡಗಿ ಶ್ರೀಮತಿ ಶ್ವೇತಾ ಜಯಕುಮಾರ ಇವರ ಸೇವಾರ್ಥ ಏಕಾದಶೋತ್ತರ ಶತಾಧಿಕ ಸಹಸ್ರ ನಾಳೀಕೇರ ಮಹಾಗಣಪತಿ ಯಾಗ ವಿವಿಧ ಧಾರ್ಮಿಕ ವಿಧಿ ವಿಧಾನದೊಂದಿಗೆ ಸಾನಿಧ್ಯದಲ್ಲಿ ಸಂಪನ್ನಗೊಂಡಿತು. ವೇದಮೂರ್ತಿ ರಮೇಶ್ ಬಾಯರಿ ಮಾತನಾಡಿ ಮಹಾಗಣಪತಿಯನ್ನು ಪರಮಾತ್ಮನ ಮತ್ತು ಸೃಷ್ಟಿಕರ್ತನ ರೂಪವಾಗಿ ಪರಿಗಣಿಸಲಾಗುತ್ತದೆ. ಬ್ರಹ್ಮಾಂಡದ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, 18 ನೇ ವರ್ಷದ ಜಿಲ್ಲಾ ಶೈಕ್ಷಣಿಕ ಸಹಮಿಲನ – 2025 ಪರಮಪೂಜ್ಯ

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಇಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾಸಂಸ್ಥಾನ್ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, 18 ನೇ ವರ್ಷದ ಜಿಲ್ಲಾ ಶೈಕ್ಷಣಿಕ ಸಹಮಿಲನ – 2025 ಪರಮಪೂಜ್ಯ ಜಗದ್ಗುರುಗಳಾದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಗಳ ದಿವ್ಯ ಹಸ್ತದಿಂದ ದೀಪ ಪ್ರಜ್ವಲಿಸಿ ಅರ್ಚನೆಯೊಂದಿಗೆ ಸರಸ್ವತಿ ವಂದನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಶ್ರೀ.

ಪ. ಪೂ. ಕಾಲೇಜುಗಳ ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್: ಆಳ್ವಾಸ್ ಗೆ 11 ಪದಕ

ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್ ವಿ ಪದವಿಪೂರ್ವ ಕಾಲೇಜು, ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ಪಿಯು ಕಾಲೇಜು ಒಟ್ಟು 7 ಚಿನ್ನ, 3 ಬೆಳ್ಳಿ ಮತ್ತು 01 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕಗಳನ್ನು ಪಡೆದುಕೊಂಡಿತು. ಜೊತೆಯಲ್ಲಿ ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ 8 ಕ್ರೀಡಾಪಟುಗಳು

ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಎಂದು ಗುರುತಿಸಲಾಗಿದೆ. ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವ್ರ ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ

ಮಂಗಳೂರು: ರನ್ನರ್ಸ್ ಕ್ಲಬ್ ವತಿಯಿಂದ ನೀವಿಯಸ್ ಮಂಗಳೂರು ಮ್ಯಾರಥಾನ್-2025 ಯಶಸ್ವಿ

ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ವರ್ಟೆಕ್ಸ್ ಸಹಯೋಗದಲ್ಲಿ ನೀವಿಯಸ್ ಮಂಗಳೂರು ಮ್ಯಾರಥಾನ್-2025 ನಾಲ್ಕನೇ ಆವೃತ್ತಿಯ ಮ್ಯಾರಥಾನ್ ಮಂಗಳೂರಿನಲ್ಲಿ ನಡೆಯಿತು. ಇದು ಅತೀ ದೊಡ್ಡ ಮ್ಯಾರಥಾನ್ ಆಗಿದ್ದು, ಅಂತರರಾಷ್ಟ್ರೀಯ ಮಟ್ಟದ ಮ್ಯಾರಥಾನ್‌ಗಳು ಭಾಗವಹಿಸಿದ್ದರು. ವಿವಿಧ ವಿಭಾಗದಲ್ಲಾಗಿ ಸುಮಾರು 6 ಸಾವಿರಕ್ಕೂ ಹೆಚ್ಚು ಮಂದಿ ಈ ಮ್ಯಾರಥಾನ್ ಪಾಲ್ಗೊಂಡಿದ್ದರು. ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ವರ್ಟೆಕ್ಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೀವಿಯಸ್

ತುಳುನಾಡಿನ ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಶ್ರೇಷ್ಠ ನಿರ್ಧಾರ :ಡಾ.ಗಣನಾಥ ಎಕ್ಕಾರ್

ಮಂಗಳೂರು: ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ ಸರಕಾರದ ನಡೆ ಶ್ಲಾಘನೀಯವಾದದ್ದು ಎಂದು ಜಾನಪದ ವಿದ್ವಾಂಸ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರು ತಾಲೂಕು

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ-2025 ಸಮಾರೋಪ ಮತ್ತು ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಭ್ರಮ -2025 ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮ ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗ್ಗಲಡ್ಕ ಇದರ ಸಹಯೋಗದೊಂದಿಗೆ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ನ.7 ರಂದು ಸಂಜೆ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ಸು‌ಳ್ಯ

ಕೀರ್ತನೆಯ ಹರಿಕಾರ ಸಂತಶ್ರೇಷ್ಠ ಕನಕದಾಸ ಜಯಂತಿ

ಆಲೂರು:ಪಟ್ಟಣದ ಮುಖ್ಯರಸ್ತೆಯಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ಮಾಡಿ ನಂತರ ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕುವಕಚೇರಿ ಆವರಣದಲ್ಲಿ ಆಯೋಜಿಸಿದ್ದು,ಕಾರ್ಯಕ್ರಮವನ್ನು ಆಲೂರು ಸಕಲೇಶಪುರ ಕಟ್ಟಾಯ ವಿಧಾನಸಭಾ ಶಾಸಕರಾದ ಸಿಮೆಂಟ್ ಮಂಜು ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕನಕದಾಸರ ಜನ್ಮ ದಿನವನ್ನು ‘ಕನಕದಾಸ ಜಯಂತಿ’ಎಂದು ಆಚರಿಸಲಾಗುತ್ತದೆ. ಕತ್ತಿ ಗುರಾಣಿ ಹಿಡಿದು ರಣರಂಗದಲ್ಲಿ

ಗಾಂಜಾ ಮಾರಾಟದಲ್ಲಿ ಇಬ್ಬರು ಅಸ್ಸಾಂ ಮೂಲದ ಕಾರ್ಮಿಕರ ಬಂಧನ

ಸಕಲೇಶಪುರ- ನಗರ ಪೊಲೀಸ್ ಠಾಣೆ ವ್ಯಾಪ್ತಿಯ APMC ಬಳಿ ಅಸ್ಸಾಂ ಮೂಲದ ಕಾರ್ಮಿಕರಾದ ಅಮ್ಜದ್ ಅಲಿ ಮತ್ತು ಇದ್ರೀಸ್ ಅಲಿ ಎಂಬ ಇಬ್ಬರನ್ನು ಪೊಲೀಸರು ದಸ್ತಗಿರಿಮಾಡಿದ್ದಾರೆ. ಇವರು ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿಯ ಬೆಟ್ಟದಮನೆಯ ಎಸ್ಟೇಟ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಸುಮಾರು 500 ಗ್ರಾಂ (ಅರ್ಧ ಕಿಲೋ) ಗಾಂಜಾ ಸೊಪ್ಪನ್ನು ಮಾರಾಟಮಾಡುತ್ತಿದ್ದ ವೇಳೆ ಹಿಡಿಯಲ್ಪಟ್ಟಿದ್ದಾರೆ. ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನಂತರ ಅವರನ್ನು