Home Posts tagged V4News (Page 455)

ಎಸ್.ಡಿ.ಎಂ. ರಸಾಯನಶಾಸ್ತ್ರ ರಾಷ್ಟ್ರೀಯ ಕಾರ್ಯಾಗಾರ

ಉಜಿರೆ, ಜೂನ್ 6: ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ವೈಜ್ಞಾನಿಕ ಸಾಮಾಜಿಕ ಹೊಣೆಗಾರಿಕೆಯೊಂದಿಗಿನ ರಚನಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯ ಡಾ. ಹೆಚ್. ಎಸ್. ಎಸ್. ರಾಮಕೃಷ್ಣ ಮಟ್ಟೆ ಅಭಿಪ್ರಾಯಪಟ್ಟರು. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗ ಮತ್ತು

ಕಡಬ :ಕೋಡಿಂಬಾಳ ಚರ್ಚಿನಲ್ಲಿ ಎಂಸಿಎ ದಿನಾಚರಣೆ ಮತ್ತು ಪರಿಸರ ದಿನಾಚರಣೆ

ಕಡಬ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳ ಇಲ್ಲಿನ ಎಂಸಿಎ ಘಟಕದ ನೇತೃತ್ವದಲ್ಲಿ ಎಂಸಿಎ ದಿನಾಚರಣೆ ಮತ್ತು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಎಂಸಿಎ ಕೋಡಿಂಬಾಳ ಘಟಕದ ಉಪಾಧ್ಯಕ್ಷ ಚಾಕೋ ವಿ.ಎಂ ಅವರು ಸಭಾಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಕೋಡಿಂಬಾಳ ಚರ್ಚ್‌ ಧರ್ಮಗುರುಗಳಾದ ವಂ.ರೆ.ಫಾ. ಜಾರ್ಜ್ ವಡಕೇದಿಲ್, ಪುತ್ತೂರು ಧರ್ಮಪ್ರಾಂತ್ಯದ ಎಂಸಿಎ ಅಧ್ಯಕ್ಷರಾದ ಬೈಜು ಬೆಂಗಳೂರು, ಕಾರ್ಯದರ್ಶಿ ಪ್ರಕಾಶ್ ಕೆ.ವೈ. ನೆಲ್ಯಾಡಿ, ಸಿಸ್ಟರ್

ಕಡಬ ಪತ್ರಕರ್ತರಿಂದ ಶಾಸಕಿಗೆ ಅಭಿನಂದನೆ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರ ನೇತೃತ್ವದಲ್ಲಿ ಶಾಸಕರನ್ನು ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಪತ್ರಕರ್ತರ ಸಹಕಾರ ಕೋರಿದರು. ಈ ವೇಳೆ

ಕಡಬ : ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ – ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಗಿಡ ನಾಟಿ

ಕಡಬ,: ಅಂತರಾಷ್ಟ್ರೀಯ ಜೀವ ವೈವಿದ್ಯ ದಿನಾಚರಣೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನಾಟಿ ಮಾಡುವ ಮೂಲಕ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಸಲಾಯಿತು. ಈ ಸದರ್ಭದಲ್ಲಿ ಕಡಬ ತಹಸೀಲ್ದಾರ್ ರಮೇಶ್ ಬಾಬು, ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೆಂಪೇ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ ಶೆಟಿ ಕಡಬ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ನಿರ್ದೆಶಕ ಚೆನ್ನಪ್ಪ ಗೌಡ ಕಜೆಮೂಲೆ, ವ್ಯವಸ್ಥಾಪಕ ಭವನೇಂದ್ರ

ಬೈಕ್‌ಗೆ ಢಿಕ್ಕಿ ಹೊಡೆದ ಬಸ್‌: ಕಾಲೇಜು ವಿದ್ಯಾರ್ಥಿ ಸಾವು

ಮೂಡುಬಿದಿರೆ : ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ, ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಬಳಿ ಸೋಮವಾರ ಸಂಜೆ ನಡೆದಿದೆ. ಎಂಬಲ್ಲಿ ಖಾಸಗಿ ಬಸ್‌ ಬೈಕ್‌ಗೆ ಆಳ್ವಾಸ್‌ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲ‌ರ್ಸ್ ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್‌ ಆಚಾರ್ಯ ಮೃತಪಟ್ಟ ವಿದ್ಯಾರ್ಥಿ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ

ಬೊಂದೆಲ್ ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು ಲಾಫ್ಟರ್ ಸೆಶನ್‌

ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ೨೦ ವರ್ಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಲಾಫ್ಟರ್ ಸೆಶನ್‌ಗಳನ್ನು ನಡೆಸಿದರು. ಬೊಂದೆಲ್ ಕ್ಲಬ್‌ನ ಸಂಸ್ಥಾಪಕ ಜಾನ್ ಬಿ.ಮೊಂತೇರೊ ಮತ್ತು ಕ್ಲಬ್‌ನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಇವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ

ಕೆಎಸ್ಆರ್ ಪಿ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯಮೀಸಲು ಪೊಲೀಸ್, 7ನೇ ಪಡೆ, ಮಂಗಳೂರು ಘಟಕದಲ್ಲಿ ಸರಳ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಅದರಂತೆ 7ನೇ ಪಡೆ ಕೆಎಸ್‍ಆರ್‍ಪಿ, ಮಂಗಳೂರು ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಪರಿಸರ ಉಳಿಸುವ ಹಿತದೃಷ್ಟಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಸೈಕಲ್ ಜಾಥಾಕ್ಕೆ ಘಟಕದ ಕಮಾಂಡೆಂಟ್ ಬಿ ಎಂ ಪ್ರಸಾದ್‍ರವರು ಚಾಲನೆ ನೀಡಿದರು. ಸೈಕಲ್ ಜಾಥಾವನ್ನು ಕರ್ನಾಟಕರಾಜ್ಯ

ಹಾವಂಜೆಯಲ್ಲಿ ಹಕ್ಕಿಗಳ ಮಾಹಿತಿ ಫಲಕ ಅನಾವರಣ

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಮತ್ತು ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತಿ ಹಾವಂಜೆ ಇವರ ವತಿಯಿಂದ ಹಾವಂಜೆಯ ಹಕ್ಕಿಗಳ ಮಾಹಿತಿ ಫಲಕ ಅನಾವರಣ ಹಾಗೂ ಪಕ್ಷಿ ಸಂಕುಲಗಳ ವೀಕ್ಷಣೆ ಮತ್ತು ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ ಎಚ್ ಹಕ್ಕಿಗಳ ಮಾಹಿತಿ ಫಲಕ ಅನಾವರಣಗೊಳಿಸಿ ಮಾತನಾಡಿ ಪರಿಸರ ಉಳಿಯಲು ಕಾರಣ ಜೀವ ಸಂಕುಲಗಳು.ಜನರು ನೆಟ್ಟ

ಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ

ಮಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ.ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗಾ