Home Posts tagged V4News (Page 459)

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ಕುಮಾರ್ ರೈ ಸಭೆ

ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದ

ಕಡಬ :ಮನೆಯ ಮೇಲ್ಚಾವಣಿಯಿಂದ ಕೆಳಗೆ ಬಿದ್ದ ಕಾರ್ಮಿಕ ಮೃತ್ಯು

ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ

ಕಡಬ : ಲೈನ್ ಮ್ಯಾನ್ ಮೃತಪಟ್ಟ ಪ್ರಕರಣ: ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಕಡಬ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ಬಾಗಲಕೋಟೆ ಮೂಲದ ದ್ಯಾವಣ್ಣ ದೊಡ್ಡಮನಿ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿದ್ದರು. ಮೃತ ಲೈನ್ ಮ್ಯಾನ್ ಜೊತೆ ಹಿರಿಯ ಅಧಿಕಾರಿಗಳಾಗಲಿ ಅಥವಾ ಸಹಾಯಕ್ಕೆ ಯಾರನ್ನೂ ಕಳುಹಿಸದೇ ಹಾಗೂ

ಹಠಾತ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಕಡಬ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರೆಂಜಿಲಾಡಿಯ ನಿಡ್ಮೇರು‌ ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ‌ (18) ಮೃತ ವಿದ್ಯಾರ್ಥಿನಿ. ಮೃತ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ

ವಕೀಲರ ಸಂಘ (ರಿ ) ಬಂಟ್ವಾಳ : ಪದಗ್ರಹಣ ಕಾರ್ಯಕ್ರಮ

ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ಇಂದು ಮದ್ಯಾಹ್ನ 12.30ಕ್ಕೆ ನಡೆಯಿತು. 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ಶ್ರೀಮತಿ ನಿರ್ಮಲ ಶೆಟ್ಟಿಯವರು ಪ್ರಮಾಣವಚನ

ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಬೈಂದೂರು ಸರ್ಕಾರಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಕೌಶಲ್ಯಗಳ ಕಲಿಕೆಗೆ ಪೂರಕ ವ್ಯವಸ್ಥೆ ಮಾಡಬೇಕು, ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯವಿರುವ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು, ಸಮಾಜಕ್ಕೆ ಉತ್ತಮ ವ್ಯಕ್ತಿತ್ವದ ವ್ಯಕ್ತಿ ರೂಪಿಸುವ, ಪರಿಚಯಿಸುವ

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಅರುಣ್ ಕುಮಾರ್ ಪುತ್ತಿಲ ಅವರು ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಿದ್ದಗಂಗಾ ಮಠದಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ಹಾಗು ಕಿರಿಯ ಶ್ರೀ ಗಳಾದ ಪೂಜ್ಯ ಶ್ರೀ ಶಿವಸಿದ್ಧೇಶ್ವರ ಸ್ವಾಮಿಗಳವರ ಆಶೀರ್ವಾದ ಪಡೆದರು. ಮಠದಾಧ್ಯಕ್ಷರು ಅರುಣ್ ಕುಮಾರ್ ಪುತ್ತಿಲರವರ ಜೊತೆ ರಾಜಕೀಯ ಹಾಗೂ

ಸೋಮೇಶ್ವರದಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರ ವಶ

ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಅನ್ಯಧರ್ಮಕ್ಕೆ ಸೇರಿದ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಾರೆಂಬ ಕಾರಣಕ್ಕೆ ತಂಡವೊಂದು ಹಲ್ಲೆ ನಡೆಸಿತ್ತು. ಘಟನೆಯಲ್ಲಿ ಕೇರಳ ಚೆರ್ಕಳದ ಜಾಫರ್ ಶರೀಫ್

ಮನೋರಂಜನಾ ಕ್ಷೇತ್ರದಲ್ಲಿ ಬೆಳೆಯಲು ವಿಪುಲ ಅವಕಾಶಗಳಿವೆ: ಚರಿಷ್ಮಾ ಚೋಂದಮ್ಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್‌ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ

ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ – ‘ಎಸ್.ಡಿ.ಎಂ. ನೆನಪಿನಂಗಳ’

ಉಜಿರೆ: ಜ್ಞಾನ, ಧನಾತ್ಮಕ ಮನೋಧೋರಣೆ ಹಾಗೂ ಕೌಶಲದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೇ 31ರಂದು ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ‘ಎಸ್.ಡಿ.ಎಂ. ನೆನಪಿನಂಗಳ’ದ ನಾಲ್ಕನೆಯ ಕಂತಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.