Home Posts tagged V4News (Page 462)

ಉಳ್ಳಾಲ: ವಿವಾಹಿತ ನಿಗೂಢ ನಾಪತ್ತೆ

ಉಳ್ಳಾಲ: ವಿವಾಹಿತರೋರ್ವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು. ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ನಂತರ ಜೆಪ್ಪು ಕಂರ್ಭಿಸ್ಥಾನ ಸಮೀಪ ತಾಯಿ ಮನೆಯಲ್ಲಿ ಬಿಟ್ಟು ಕೆಲಸಕ್ಕೆ

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ”- ಯಕ್ಷಗಾನ ಕಲಾ ಸಂಘ ಉದ್ಘಾಟನೆ

ಪುತ್ತೂರು : ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ ಯಕ್ಷಸಿಂಚನ ಉದ್ಘಾಟನೆಗೊಂಡಿತು, ಉದ್ಘಾಟಕರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು. ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಖ್ಯಾತ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ

ಕಾಪುವಿನಲ್ಲಿ ಕೆರೆಯಂತಾದ ಹೆದ್ದಾರಿ

ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿಯ ಹೆದ್ದಾರಿ ಕೆರೆಯಾಗಿ ರೂಪುಗೊಂಡಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ಇಲ್ಲಿ ನಿರಂತರ ಸಮಸ್ಯೆ ಅನುಭವಿಸುವಂತ್ತಾಗಿದ್ದು, ಸಣ್ಣ ಮಳೆಗೂ ರಸ್ತೆಯ ಈ ಭಾಗ ಜಲಾವೃತವಾಗುತ್ತಿದ್ದು, ಪಕ್ಕದ ಬಸ್ ತಂಗುದಾಣದಲ್ಲಿ ಬಸ್ ಕಾಯಲು ನಿಂತ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಮೇಲೆ ಮಳೆಯ ಕೆಸರು ಮಿಶ್ರಿತ ನೀರು ಎರಚಿ ನಿರಂತರ ಸಮಸ್ಯೆ ಅನುಭವಿಸುತ್ತಿದ್ದಾರೆ.

ಕಾರ್ಮಿಕ ಚಳುವಳಿಯ ಧ್ರುವತಾರೆ CITU ಗೆ 53 ವರ್ಷಗಳ ಸಂಭ್ರಮ

ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ CITUಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) CITU ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ ಮೂಲಕ CITU ನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣಗೈದ CITU ದ. ಕ. ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿಯವರು ಮಾತನಾಡುತ್ತಾ, ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ

ಕಾಪು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ ಬಿಜೆಪಿ ಪಕ್ಷವು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ಬೂತ್‍ನಲ್ಲಿ ಕಡಿಮೆ ಮತ ಸಿಕ್ಕಿದೆಯೋ ಆ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ನಮ್ಮ ನ್ಯೂನ್ಯತೆಯನ್ನು ಸರಿ ಪಡಿಸಿಕೊಳ್ಳ ಬೇಕಾಗಿದೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಪುತ್ತೂರು : ಹಾಡಹಗಲೇ ಮನೆಯೊಂದರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು

ಪುತ್ತೂರು : ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೌನೀಶ್ ಅವರ ಮನೆಯಿಂದ ಕಳ್ಳತನ ನಡೆದಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ ಹಾಕಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು.ಮಧ್ಯಾಹ್ನ 12 ಗಂಟೆಯ ವೇಳೆಗೆ ಹಿಂತಿರುಗಿ ಬಂದಾಗ ಮನೆಯ

ಮಳೆಗಾಲದಲ್ಲಿ ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡದೆ ಕಾರ್ಯಪ್ರವೃತ್ತರಾಗಬೇಕು : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಳೆಗಾಲದ ಸಂದರ್ಭದಲ್ಲಿ ಪಂಚಾಯತಿ ಪಿಡಿಓಗಳು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸಬೇಕು. ಪೋನ್ ಸ್ವಿಚ್ ಆಫ್ ಮಾಡಿಕೊಳ್ಳದೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು, ಯಾವುದೇ ಸಮಸ್ಯೆ, ಅವಘಡಗಳು ಎದುರಾದರೂ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿ.ಸಿ.ರೋಡಿನ

ಬೇಲೂರಿನ ಸನ್ಯಾಸಿಹಳ್ಳಿ ಗ್ರಾಮದಲ್ಲಿ ಜೋಳದ ಬೆಳೆ ಹಾನಿ

ಮೂಲ ಮಾಲೀಕರ ಹೆಸರಿನಲ್ಲಿ ಭೂಮಿಯ ಪಹಣಿ ಇನ್ನಿತರ ದಾಖಲೆಗಳಿದ್ದರೂ, ಸರಕಾರದಿಂದ ನನಗೆ ಭೂಮಿ ಮಂಜೂರಾಗಿದೆ ಎಂದು ಹೇಳಿ ಮೂಲ ಭೂ ಮಾಲೀಕ ಬೆಳೆದಿದ್ದ ಜೋಳದ ಬೆಳೆಯನ್ನು ಟ್ರಾಕ್ಟರ್‍ನಿಂದ ಉಳುಮೆ ಮಾಡಿ ಹಾನಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಸನ್ಯಾಸಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಭೂ ಮಾಲೀಕ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದರಖಾಸ್ತಿನ ಮೂಲಕ ಜವರಮ್ಮ ಎಂಬುವರಿಗೆ ಮಂಜೂರಾಗಿದ್ದ ಸರ್ವೆ ನಂಬರ್

ಕೊಯಿಲದ ಯುವಕ ವಿದೇಶದಲ್ಲಿ ಆತ್ಮಹತ್ಯೆ

ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮ ಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ

ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು ಶಾಸಕ, ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸ್ಪೀಕರ್ ಹುದ್ದೆಗೆ ಖಾದರ್ ಸೂಕ್ತ ವ್ಯಕ್ತಿಯಾಗಿದ್ದು, ಅವರ ಭಾಷಣವನ್ನು ಪೂರ್ತಿ ಕೇಳಿದ್ದೇನೆ. ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಪೂಜಾರಿ ಬೆನ್ನು ತಟ್ಟಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಖಾದರ್, ಜನಾರ್ದನ ಪೂಜಾರಿ ಹಾಗೂ ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿಕೊಂಡು,