Home Posts tagged V4News (Page 463)

ರಚನಾ ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ – ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ ವಿಚಾರಗೋಷ್ಠಿ

ರಚನಾ ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಇದರ ವತಿಯಿಂದ ಮಂಗಳೂರು ಕ್ಲಬ್‍ನಲ್ಲಿ ಸದಸ್ಯರ ಸಭೆ ಯನ್ನು ನಡೆಸಲಾಯಿತು. ಎನ್‍ಆರ್‍ಐ ಉದ್ಯಮಿ ಶ್ರೀ ಮೈಕಲ್ ಡಿಸೋಜಾ ಅವರು ಮುಖ್ಯ ಭಾಷಣಕಾರರಾಗಿದ್ದರು. ಮೈಕಲ್ ಡಿಸೋಜರವರು ಮಾತನಾಡಿ ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ, ಪುತ್ತೂರಿನ

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಗ್ಯಾರಂಟಿಯಿಂದ ವಂಚಿಸಬೇಡಿ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ದ.ಕ.ಮತ್ತು ಉಡುಪಿ ಜಿಲ್ಲೆಯ ಜನತೆಯನ್ನು ಗ್ಯಾರಂಟಿ ಯೋಜನೆಯಿಂದ ವಂಚಿಸಬೇಡಿ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ

ಹಾಸನ : ಬೆಂಕಿ ತಗುಲಿ ಮನೆ ಸಂಪೂರ್ಣ ನಾಶ

ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ನಾಶವಾಗಿರುವ ಘಟನೆ ಹಾಸನ ತಾಲೂಕು ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ಮನೆ ಬೆಂಕಿಗೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು , ಕುಟುಂಬಸ್ಥರು ದಿಕ್ಕಿಲ್ಲದೆ ನರಳುವಂತಾಗಿದೆ. ಮನೆಯಲ್ಲಿ ವಾಸವಾಗಿದ್ದ ಹೇಮವತಿ ಮತ್ತು ಅವರ ಇಬ್ಬರು ಮಕ್ಕಳು ಭರತ್ ಮತ್ತು ಶ್ರಾವಣಿ . ಮನೆಯಲ್ಲಿದ್ದ ದವಸ ಧಾನ್ಯ ಬಟ್ಟೆ ಸಂಪೂರ್ಣ ನಾಶವಾಗಿದೆ. ಘಟನೆ

ಬ್ರಹ್ಮಾವರ : ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ

ಬ್ರಹ್ಮಾವರ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ ಧರ್ಮಾವರ ಆಡಿಟೊರಿಯಂನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್ ಮಾತನಾಡಿ ದೇಶದಲ್ಲಿ ಕೋರೋನ ಬಂದ ಬಳಿಕ ಗ್ಯಾರೇಜ ಮಾಲಕರ ಸಂಘದಂತೆ ಅನೇಕ ಕಾರ್ಮಿಕ ಸಂಘಟನೆಗಳು ಸರಕಾರದ ಕೆಲವು ಸವಲತ್ತು ಪಡೆಯುವಂತೆ ಆಗಿದೆ . ಮುಂದೆಯೂ ಕೂಡಾ ಇಲಾಖೆಯ ಸವಲತ್ತುಗಳನ್ನು ಸಂಘಟನೆಯ ಮೂಲಕ ಪಡೆದುಕೊಳ್ಳಿ ಎಂದರು. ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ಮಹಾಂತೇಶ್ ಬ್ರಹ್ಮಾವರ

ದೆಹಲಿಯ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ : ಕವಿತಾ ಸನಿಲ್ ಆಕ್ರೋಶ

ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೋದಿ ಸರ್ಕಾರ ಹಾಗೂ ದೆಹಲಿ ರಾಜ್ಯ ಸರ್ಕಾರ ಕ್ರೀಡಾಪಟುಗಳ ಮೇಲೆ ದೌರ್ಜನ್ಯ ಮಾಡಿರುವುದು ಸರಿಯಲ್ಲ. ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳ

ಪಡುಬಿದ್ರಿಯಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉಚಿತ ಪ್ರದರ್ಶನ

ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ ” ಕೇರಳ ಸ್ಟೋರಿ ” ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ ವೀಕ್ಷಣೆ ಮಾಡಿದ್ದಾರೆ. ಚಿತ್ರ ವೀಕ್ಷಣೆ ಮಾಡಿದ ಯುವತಿಯರು ಪ್ರತಿಕ್ರಿಯಿಸಿ ಮುಂದಿನ ದಿನದಲ್ಲಿ ನಮ್ಮ ಜೀವನದಲ್ಲೂ ಇಂಥಹ ಘಟನೆಗಳು ನಡೆಯ ಬಾರದು ಎಂದಾದರೆ ನಾವು ಹೆಚ್ಚಿನ ಜಾಗ್ರತೆ ವಹಿಸಬೇಕಾಗಿದೆ ಎಂದರು.

ನೇತಾಜಿ ಬ್ರಿಗೇಡ್ ನಿಂದ 120 ನೇ ವಾರದ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) 120 ನೇ ವಾರದ ಸ್ವಚ್ಛತಾ ಅಭಿಯಾನವು ಶ್ರೀ ಮಂಜುನಾಥ ಪ್ರೌಢ ಶಾಲೆ ಪ್ರಾಂತ್ಯ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಮುಖರಾದ ವಿನ್ಸೆಂಟ್, ಶಾಲಾ ಎಸ್ ಡಿ ಎಂ ಸಿ ಪ್ರಮುಖರಾದ ಜಿತೇಶ್ ಲಾಡಿ, ನೇತಾಜಿ ಬ್ರಿಗೇಡ್ ಸಂಚಾಲಕರಾದ ರಾಹುಲ್ ಕುಲಾಲ್ ಪದಾಧಿಕಾರಿಗಳಾದ ಆನಂದ ಕುಲಾಲ್, ಅಭಿಷೇಕ್ ಸಾಲಿಯಾನ್, ಶಶಿಕುಮಾರ್, ನಿತ್ಯಾನಂದ ಕೊಡಂಗಲ್ಲು, ಸಂದೇಶ್ ಕುಂದರ್, ದಯಾನಂದ ನಾಯ್ಕ್, ಪ್ರಸಾದ್, ನಿತ್ಯಾನಂದ,ಸಂತೋಷ್, ನಿತಿನ್ ಭಟ್ ,ಶರಣ್

ಪಡುಬಿದ್ರಿಯಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉಚಿತ ಪ್ರದರ್ಶನ

ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ ” ಕೇರಳ ಸ್ಟೋರಿ ” ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ ವೀಕ್ಷಣೆ ಮಾಡಿದ್ದಾರೆ. ಚಿತ್ರ ವೀಕ್ಷಣೆ ಮಾಡಿದ ಯುವತಿಯರು ಪ್ರತಿಕ್ರಿಯಿಸಿ ಮುಂದಿನ ದಿನದಲ್ಲಿ ನಮ್ಮ ಜೀವನದಲ್ಲೂ ಇಂಥಹ ಘಟನೆಗಳು ನಡೆಯ ಬಾರದು ಎಂದಾದರೆ ನಾವು ಹೆಚ್ಚಿನ ಜಾಗ್ರತೆ ವಹಿಸಬೇಕಾಗಿದೆ ಎಂದರು.

ಕಾಲು ಸೇತುವೆ ನಿರ್ಮಿಸಿ ಹಳ್ಳಿ ಮನಸ್ಸುಗಳನ್ನು ಬೆಸೆದ ಯುವ ತೇಜಸ್ಸು ತಂಡ

     ಸುಳ್ಯ ತಾಲೂಕಿನ ನಾರ್ಣಕಜೆಯ “ಯುವ ತೇಜಸ್ಸು” ಯುವಕರ ತಂಡವೊಂದು ಸುಮಾರು 20ಕ್ಕೂ ಹೆಚ್ಚು ಮನೆಗಳ ಸಂಪರ್ಕಿಸಬೇಕಾದ ರಸ್ತೆಯಲ್ಲಿ ಕಬ್ಬಿಣದ ಶಾಶ್ವತ ಕಾಲುಸಂಕ ನಿರ್ಮಿಸಿಕೊಡುವುದರ ಮೂಲಕ ಆ ಹಳ್ಳಿ ಜನರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ನಾರ್ಣಕಜೆಯಿಂದ ಪೈಲಾರು ಕಡೆ ಸಂಪರ್ಕಿಸಬಹುದಾದ ರಸ್ತೆಯಲ್ಲಿ ಅಡ್ಡಲಾಗಿ ಹೊಳೆ ಹರಿದು ಹೋಗುವ ಕಾರಣ ಈ ಭಾಗದ ಜನ ಮಳೆಗಾಲದಲ್ಲಿ ಮರದ ಕಾಲುಸಂಕ ಅಥವಾ ಸುತ್ತು ಬಳಸಿ ಕಿಲೋಮೀಟರ್ ಗಟ್ಟಲೆ ನಡೆದು ಹೋಗಬೇಕಾದ

ನಿಟ್ಟೆ ಕ್ಷೇಮದಲ್ಲಿ ಮದ್ಯವರ್ಜನ ಶಿಬಿರದ ಉದ್ಘಾಟನೆ

ಉಳ್ಳಾಲ: ದಾನ ಧರ್ಮದ ಸೇತುವೆಯನ್ನು ಕಟ್ಟಿ, ಸಂಪತ್ತು ಸೌಭಾಗ್ಯದ ಐರಾವತವನ್ನು ಈ ಧರೆಗಿಳಿಸಿ ಎಲ್ಲರೂ ಅವರ ಕರ್ತವ್ಯ, ದಾನ, ವಸತಿ, ಆರೊಗ್ಯ, ವಿದ್ಯೆ, ಈ ಪಂಚಮೂಲ ಅವಶ್ಯಕತೆಗೆ ಪೂರಕವಾಗಿ ನೆಮ್ಮದಿಯ ಜೀವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಎಂದು ರಾಜ್ಯ ಸಭಾಸದಸ್ಯ, ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ನಿಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಕ್ಷೇಮ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ,ಜಿಲ್ಲಾ