ಕುಕ್ಕೆ ಸುಬ್ರಹ್ಮಣ್ಯ: ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇಶದಾಧ್ಯಂತ ಗಮನ ಸೆಳೆದ ಕಾಂತರ ಸಿನಿಮಾದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು
ಉಳ್ಳಾಲ: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಕುತ್ತಾರು,ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ.ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ
ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ. 224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.75.87 ಮತದಾನ ದಾಖಲಾಗಿದ್ದು ಅಭ್ಯರ್ಥಿಗಳ
ಬುಧವಾರ ಮತದಾನ ಮುಗಿದ ಬಳಿಕ ಕಾವೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯ ಹಿನ್ನೆಲೆಯಲ್ಲಿ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ
ಉಳ್ಳಾಲ: ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಜಿಲ್ಲೆಯ,ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿ.ಕಾವೇರಿ ನಿನ್ನೆ ಹುಟ್ಟು ಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು. ಸ್ನೇಹಿತೆಯರಿಬ್ಬರು ಸಮುದ್ರ
ಚಾರ್ಮಾಡಿಯಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಉಂಟಾದ ಗೊಂದಲಗಳಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೆÇಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.ಚಾರ್ಮಾಡಿಯ ಒಂದು ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಒಂದಿಷ್ಟು ವಿಳಂಬವಾಗಿತ್ತು. ರಾತ್ರಿ 7:20ರವರೆಗೂ ಇಲ್ಲಿ ಮತದಾನ ನಡೆದಿತ್ತು. ಆದರೆ ರಾತ್ರಿ 10:30 ದಾಟಿದರೂ ಮತಗಟ್ಟೆಯ ಅಧಿಕಾರಿಗಳು ಅಲ್ಲಿಂದ ತೆರಳಿರಲಿಲ್ಲ. ಇದರಿಂದ ಅನುಮಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ
ಕಾರ್ಕಳ: ಅಪ್ರಾಪ್ತ ಬಾಲಕನೋರ್ವ ನಕಲಿ ಮತದಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆ ಬುಧವಾರ ರಾತ್ರಿ ನಡೆದಿದೆ. ಈ ಬಗ್ಗೆ ಮತಯಂತ್ರ ಹಾಗೂ ಚುನಾವಣಾ ಸಿಬ್ಬಂದಿ ಸಂಚರಿಸಬೆಕಾಗಿದ್ದ ಬಸ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು ನಕಲಿ ಮತದಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪೊಲೀಸರ
ಸಕಲೇಶಪುರ : ಧರ್ಮಸ್ಥಳದಲ್ಲಿ ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ಪ್ರಸಂಗ ನಡೆಯಿತು .ರೋಹಿತ್ ಎಂಬ ವರ ಸಕಲೇಶಪುರ ಶಾಪ್ ಸಿದ್ದೇಗೌಡ ಶಾಲೆಯಲ್ಲಿ ಮತ ಚಲಾಯಿಸಿದರೆ, ನಂದಿನಿ ಎಂಬ ವದು ಕುಡುಗರಹಳ್ಳಿಯಲ್ಲಿರುವ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಿದರು.
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಇಂದು 90 ವರ್ಷ ಮೇಲ್ಪಟ್ಟ ವೃದ್ದೆಯರು ಮತದಾನ ಮಾಡಿದರು.ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಹಸಗವಳ್ಳಿಯ ರಂಗನಾಥ ಪ್ರೌಡಶಾಲೆಯ ಮತಗಟ್ಟೆ ಸಂಖ್ಯೆ 135 ರಲ್ಲಿ 99 ವರ್ಷದ ವೃದ್ಧೆ ಸಿದ್ದಮ್ಮ ನೆಡೆದು ಕೊಂಡು ಬಂದು ಮತದಾನ ಮಾಡಿದ್ದು ವಿಶೇಷವಾಗಿತ್ತು. ಯಸಳೂರು ಹೋಬಳಿಯ ಚಂಗಡಹಳ್ಳಇ ಪಂಚಾಯತಿ ವ್ಯಾಪ್ತಿಯ ಬಸ್ಕಲ್ ಗ್ರಾಮದ 99 ವರ್ಷದ ವಯೋವೃದ್ಧ ಬಿಳಿಗಮ್ಮ ಮತ ಚಲಾವಣೆ ಮಾಡಿದ್ದು ವಿಶೇಷವಾಗಿತ್ತು.ಹಾಗೆ 97
ತನ್ನ ಹಕ್ಕನ್ನು ಚಲಾಯಿಸಿ ಮನೆಗೆ ತೆರಳಿದ 93ರ ಹರೆಯದ ವಯೋವೃದ್ದೆಯೊರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತರು ಹೆಜಮಾಡಿ ನಿವಾಸಿ ಮರಿಯಮ್ಮ 94 ವರ್ಷ ಮುಂಜಾನೆ ಹೆಜಮಾಡಿಯ ಪೇಟೆ ಸಮೀಪದ ಸರ್ಕಾರಿ ಶಾಲಾ ಬೂತಲ್ಲಿ ತನ್ನವರೊಂದಿಗೆ ವೀಲ್ಹ್ ಚಯರ್ ಸಹಕಾರದಿಂದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದರು. ವಿಶೇಷವೆಂದರೆ ವಯೋವೃದ್ದೆಯನ್ನು ಕಂಡ ಪೊಲೀಸ್ ಅಧಿಕಾರಿಯೋರ್ವರು ಹಿರಿಯರೆಂಬ ಕರುಣೆಯಿಂದ ಅವರನ್ನು ಮಾತನಾಡಿಸಿ ನೂರಾರು ದೇವರು ನಿಮಗೆ




























