ಕುಕ್ಕುಂದೂರು ಬೂತ್ ಸಂಖ್ಯೆ 110 ಗ್ರಾಮ ಪಂಚಾಯತ್ ಕಚೇರಿ ಕುಕ್ಕುಂದೂರಿಲ್ಲಿ ಪ್ರಮೋದ್ ಮುತಾಲಿಕ್ ಅವರು ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.
ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ ಚಲಾವಣೆ.
ಕಡಬ :ಕುಂತೂರಿನ ಮತಗಟ್ಟೆಯಲ್ಲಿ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಮತ ಚಲಾಯಿಸಿದರು
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ತಮ್ಮ ಮತ ಚಲಾಯಿಸಿದರು.
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮತದಾನ ಮಾಡಿದರು.
ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ ಕರ್ತವ್ಯವನ್ನು ನೆರವೇರಿಸಿದರು.ಸಾಮಾನ್ಯರಲ್ಲಿ ಸಾಮಾನ್ಯರಂತೆ ಬಂದು ಮತ ಚಲಾಯಿಸಿ, ಅನಂತರ ಕೈ ಬೆರಳಿನ
ವಿನಯ್ ಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಸರಕಾರಿ ಕಾಲೇಜಿಗೆ ತಮ್ಮ ಕುಟುಂಬದದೊಂದಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.
ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಪದವಿ ಪೂರ್ವ
ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನಗೈದರು.




























