ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಪ್ರವಾಸದ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗುತ್ತಿಗಾರು ಪೇಟೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರೊಂದಿಗೆ ತೆರಳಿ ಬಹಿರಂಗ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ವಿಟ್ಲ: ಕಳೆದ ಐದು ವರುಷದ ಅವಧಿಯ ಆಡಳಿತ ಅನುಭವ ಹೊಂದಿರುವ ಬಂಟ್ವಾಳ ಕ್ಷೇತ್ರದ ಮತದಾರರು ಮತ್ತೊಮ್ಮೆ ರಮಾನಾಥ ರೈಯವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವ ನಿರ್ಧಾರದಲ್ಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಚುನಾವಣಾ ಉಸ್ತುವಾರಿಯಾಗಿರಯವ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ಹೇಳಿದರು. ಅವರು ಕೊಳ್ನಾಡು ವಲಯ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆ
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮೂಡುಬಿದಿರೆಯ ವಿವಿಧೆಡೆ ರೋಡ್ ಶೋ ನಡೆಸಿ ಗಮನಸೆಳೆದರು. ಉಮಾನಾಥ ಕೋಟ್ಯಾನ್ ಅವರು ನೀರುಡೆ ಚರ್ಚ್ ಬಳಿಯಿಂದ ಮತಯಾಚನೆ ಆರಂಭಿಸಿದರು. ನೀರುಡೆಯಲ್ಲಿ ಕೃಷಿಕರೇ ಹೆಚ್ಚಿದ್ದು ಈ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಇತ್ತು. ಇಲ್ಲಿ ಹರಿಯುವ ನೀರಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಈ ಭಾಗದ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದು, ಈ ಭಾಗದ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಿದೆ. ಮುಂದಿನ
ಕಾರ್ಕಳ: ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಅವರು ಮನವಿ ಮಾಡಿಕೊಂಡರು. ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು. ಸುನೀಲ್ ಕುಮಾರ್ ಪಕ್ಷ ವಿರೋಧಿಗಳ ಬಳಿ ಕಾಲು ಹಿಡಿಯುವ ಬದಲು ನೀವು
ಬೈಂದೂರು: ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರನ್ನು ಬೆಂಬಲಿಸುವಂತೆ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಕಳಿ ಚಂದ್ರಯ್ಯ ಆಚಾರ್ಯ ಅವರು ಮನವಿ ಮಾಡಿದ್ದಾರೆ. ಬೈಂದೂರು ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಮಠ ಮಂದಿರಗಳಿಗೆ ಹೆಚ್ಚಿನ
ಬೈಂದೂರು: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಕೆ. ಅಣ್ಣಾಮಲೈ ಅವರು ಮೇ 8ರಂದು ಬೈಂದೂರು ಕ್ಷೇತ್ರದ ವಿವಿಧಡೆಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ರೋಡ್ ಶೋ ನಡೆಸಿ ಮತ ಯಾಚಿಸಲಿದ್ದಾರೆ. ಬೆಂಳಗ್ಗೆ 8.30ಕ್ಕೆ ತ್ರಾಸಿಯಿಂದ ರೋಡ್ ಶೋ ಆರಂಭಗೊಂಡು, ಮರವಂತೆ, ನಾವುಂದ, ಅರಹೊಳೆ ಬೈಪಾಸ್ ನಾಗೂರು, ಕಂಬದಕೋಣೆ, ನಾಯ್ಕನಕಟ್ಟೆ,
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಮತಪ್ರಚಾರ ನಡೆಸಿದರು ನಡೆಯಿತು. ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾ ಅಭಿಯಾನದ ಅಂಗವಾಗಿ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಶಾಸಕರು ಶುಭಕೋರಿದರು. ಮುತ್ತೂರು ಗ್ರಾಮದ ಕೊಳವೂರು ಶಕ್ತಿ ಕೇಂದ್ರದ ಕಡೆಗುಂಡ್ಯ ಮಹಾಲಿಂಗೇಶ್ವರ
ಬಂಟ್ವಾಳ: ರಮಾನಾಥ ರೈ ಒಳ್ಳೆಯ ಮನುಷ್ಯ.. ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.. ಅವರು ಚುನಾವಣೆಯಲ್ಲಿ ಸೋತರೆ ನಾನು ಸತ್ತಂತೆ.. ನಾನು ಸಾಯಬಾರದೆಂದಿದ್ದರೆ ಅವರನ್ನು ಗೆಲ್ಲಿಸಿ..ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಪರವಾಗಿ, ಭಾವನಾತ್ಮಕವಾಗಿ ಮೆಚ್ಚುಗೆಯ ಮಾತಗಳನ್ನಾಡಿದ್ದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ. ಭಾನುವಾರ ಬಿ.ಸಿ.ರೋಡಿನ ಬಸ್ತಿಪಡ್ಪುವಿನಲ್ಲಿರುವ ತನ್ನ ನಿವಾಸ ಚೆನ್ನಮ್ಮ
ಬೈಂದೂರು: ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಭಾನುವಾರ ಕ್ಷೇತ್ರದಾದ್ಯಂತ ಮಹಾಪ್ರಚಾರ ಅಭಿಯಾನ ಬಹಳ ಅದ್ದೂರಿಯಾಗಿ ನಡೆಯಿತು. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಪಕ್ಷದ ಧ್ವಜ, ಕೇಸರಿ ಧ್ವಜ, ಕೇಸರಿ ಶಲ್ಯಗಳನ್ನು ಧರಿಸಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರಿಗೆ ಮತ ನೀಡುವಂತೆ ಪ್ರತಿ ಬೂತನಲ್ಲೂ ಮಹಾ ಪ್ರಚಾರ ಅಭಿಯಾನ ನಡೆಸಿದರು. ಮನೆ ಮನೆಗೆ ಭೇಟಿ ನೀಡಿದ ಕಾರ್ಯಕರ್ತರು ಈ ವೇಳೆ ಕಳೆದ ಐದು ವರ್ಷದಲ್ಲಿ
ಕುಂದಾಪುರ ವಿಧಾನ ಸಭಾ ಕೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕಾರ್ಯಕರ್ತರೊಂದಿಗೆ ಬಾರಕೂರು ಭಾಗದಲ್ಲಿ ಮತಯಾಚನೆ ಮಾಡಿದರು.ರಂಗನಕೆರೆ ಶೆಟ್ಟಿಗಾರ್ ಇಂಡಸ್ಟ್ರೀಸ ಕಾರ್ಮಿಕರಲ್ಲಿ ಮತ್ತು ಗೇರು ಬೀಜ ಫ್ಯಾಕ್ಟರಿಯ ಕಾರ್ಮಿಕರು ಸೇರಿದಂತೆ ಕೂರಾಡಿ ಬಾರಕೂರು ನಗರ ಭಾಗ ಸೇರಿದಂತೆ ನಾನಾ ಭಾಗದ ಮತದಾರರನ್ನು ಭೇಟಿಯಾಗಿ ಮತಯಾಚಿಸಿದರು. ಈ ಸಂದರ್ಬ ಅವರು ಮಾತನಾಡಿ ಕುಂದಾಪುರ ವಿಧಾನ ಸಭಾ ಕ್ಷೇತ್ರ ಕಳೆದ ಹಲವಾರು ವರ್ಷದಿಂದ ಒಂದೆ ವ್ಯಕ್ತಿ




























