Home Posts tagged V4News (Page 500)

ಕಲ್ಯಾದ ಕೈರಬೆಟ್ಟುವಿನ ಕಾಂಗ್ರೆಸ್ಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆ

ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕರು ಮತ್ತು ಸಚಿವರಾದ ಶ್ರೀ.ವಿ.ಸುನಿಲ್ ಕುಮಾರ್ ರವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಇಂದು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಬಾಲೇಶ್

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಕೌಶಲ್ಯವನ್ನು ವಿದ್ಯಾರ್ಥಿಜೀವನದಲ್ಲೇಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತಕರ್ನಲ್ ನಿತಿನ್‍ಆರ್ ಭಿಡೆಅಭಿಪ್ರಾಯಪಟ್ಟರು. ಶ್ರೀ ಧ. ಮಂ. ಡಿ.ಎಡ್. ಕಾಲೇಜು ಸಭಾಂಗಣದಲ್ಲಿಉಜಿರೆಎಸ್ ಡಿ ಎಮ್‍ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘವು ನಡೆಸಿಕೊಟ್ಟ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ

 ಭರತ್ ಶೆಟ್ಟಿ ವೈಫಲ್ಯಕ್ಕೆ ಗುರುಪುರ ಹೋಬಳಿ ಬಲಿಯಾಗಿದೆ : ಮುನೀರ್ ಕಾಟಿಪಳ್ಳ ಆರೋಪ

ಮಂಗಳೂರು ನಗರ ಉತ್ತರ ಕ್ಷೇತ್ರದ ಗ್ರಾಮೀಣ ಭಾಗವಾಗಿರುವ ಗುರುಪುರ ಹೋಬಳಿ ಭರತ್ ಶೆಟ್ಟಿ ಶಾಸಕರಾದ ಮೇಲೆ ಅಭಿವೃದ್ದಿ ಕಾರ್ಯದಲ್ಲಿ ಪೂರ್ತಿ ಹಿಂದೆ ಬಿದ್ದಿದೆ. ಹೊಸದಾಗಿ ಸರಕಾರಿ ಶಾಲೆ, ಕಾಲೇಜು ತೆರೆಯಲು, ಆಸ್ಪತ್ರೆ ಸ್ಥಾಪಿಸಲು ಶಾಸಕ ಭರತ್ ಶೆಟ್ಟರಿಂದ ಸಾಧ್ಯವಾಗಲಿಲ್ಲ. ಗುರುಪರ ಬ್ಲಾಕ್ ವ್ಯಾಪ್ತಿಯಲ್ಲಿರುವ ಎರಡು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಬಿದ್ದಿರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗಲಿ, ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು

ಉಳ್ಳಾಲ ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ

ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ.ಖಾಲಿದ್ ಅವರು ತನ್ನ ಪತ್ನಿ,ಮಗ,ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು.ದರ್ಗಾ ಭೇಟಿ‌‌ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು.ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯು

ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು : ದೈವದ ಆಶೀರ್ವಾದ ಪಡೆದ ಗುರ್ಮೆ ಸುರೇಶ್ ಶೆಟ್ಟಿ

ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನ ಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಾಡುರಂಗ ಕರ್ಕೇರ, ಉಪಾಧ್ಯಕ್ಷರು ಪವಿತ್ರ ಗಿರೀಶ್ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ

ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ವರುಣ ದೇವ ಕರುಣೆ ತೋರಿದ್ದರಿಂದ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಆದರೆ ಈ ಬಾರಿ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದರಿಂದ

ಜಿಲ್ಲಾ ಪಂಚಾಯತ್ ಸದಸ್ಯರಿಂದ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಟ್ಟಿ ಬಿಡುಗಡೆ

ಕಾರ್ಕಳ: ಕಾರ್ಕಳದ ಐದು ಮಂದಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಮ್ಮ ಅವಧಿಯಲ್ಲಿ ತಮ್ಮ ತಮ್ಮ ಕ್ಷೇತ್ರದಲ್ಲಿ ಶಾಸಕರ ಅನುದಾನದಿಂದ ಆಗಿರುವಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾ ಪಂಚಾಯತ್ ಸದಸ್ಯರು ಪಟ್ಟಿ ಬಿಡುಗಡೆಗೊಳಿಸಿದರು. ಚುನಾವಣೆಯಲ್ಲಿ ನಮ್ಮ ಸಚಿವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಕಾರ್ಯಕ್ಷೇತ್ರದ ಅಭಿವೃದ್ಧಿಯನ್ನು ಅವರಿಂದ ಮಾಡಿಸಿಕೊಳ್ಳಬೇಕು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯಕೋಟಿಯನ್, ಉದಯ ಶೆಟ್ಟಿ,

ಮತ್ತೊಮ್ಮೆ ಅವಕಾಶ ದೊರಕಿದ್ರೆ 2025ರ ವೇಳೆಗೆ ನಗರದ ಚಿತ್ರಣವೇ ಬದಲಾವಣೆ : ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್

ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ದಿಯ ಕುರಿತಾದ

ಮಂಜೇಶ್ವರದಲ್ಲಿ ಸರ್ವೀಸ್ ರೋಡ್, ಅಂಡರ್ ಪಾಸ್ ವ್ಯವಸ್ಥೆ : ಪ್ರಮುಖ ಬೇಡಿಕೆ ಈಡೇರದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಮಂಜೇಶ್ವರ: ರಾಷ್ಟೀಯ ಹೆದ್ದಾರಿ ಎನ್.ಹೆಚ್. 66 ಅಭಿವೃದ್ಧಿಯ ಭಾಗವಾಗಿ ಹಲವೆಡೆ ಅಂಡರ್ ಪಾಸ್, ಸರ್ವಿಸ್ ರೋಡ್‍ನ ವ್ಯವಸ್ಥೆ ನೀಡಲಾಗಿದ್ದರೂ ಕೇರಳದ ಅತಿ ದೊಡ್ಡ ಎರಡನೇ ಚೆಕ್-ಪೋಸ್ಟ್ ಮಂಜೇಶ್ವರಕ್ಕೆ ಸರ್ವಿಸ್ ರೋಡ್ ಆಗಲಿ, ಅಂಡರ್ ಪಾಸ್ ಆಗಲಿ ಯಾವುದನ್ನು ನೀಡದ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟನೆಗೆ ಸಿದ್ದತೆ ನಡೆಸುತಿದ್ದಾರೆ. ಇದರ ಮೊದಲ ಹಂತವಾಗಿ ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರ ಅಧ್ಯಕ್ಷತೆಯಲ್ಲಿ ಊರವರು ಗುರುನರಸಿಂಹ ಮಂಟಪದಲ್ಲಿ ಸಭೆ

“ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯುವಂತೆ ಮಾಡಿದ್ದಾರೆ” : -ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ

ಮಂಗಳೂರು: “ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.“ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ