ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಶಾಸಕ ಹರೀಶ್ ಪೂಂಜರವರು ಇಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಹಿರಿಯ ವಕೀಲ ಸುಬ್ರಹ್ಮಣ್ಯ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು
ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ’ ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಕೃತಿ ಪ್ರಕಟಿಸಿರುವ ಅಜೆಕಾರಿನ ಶ್ರೀ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯ ಮುಖ್ಯಸ್ಥ, ಹಿರಿಯ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸೊಸೈಟಿ ಅಧ್ಯಕ್ಷ
ಕಾರ್ಕಳ, ಈ ಸಲದ ಚುನಾವಣೆ ಕೌರವರ ಹಾಗೂ ಪಾಂಡವರ ಯುದ್ಧ, ಸತ್ಯದ ಮತ್ತು ಸುಳ್ಳಿನ ನಡುವಿನ ಯುದ್ಧ ವಾಗಿದೆ. ಈ ಸಲದ ಚುನಾವಣೆಯಲ್ಲಿ ಸತ್ಯಕ್ಕೆ ಜಯ ಸಲ್ಲುವುದು ಗ್ಯಾರಂಟಿಯಾಗಿರುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬರುವುದು ಖಚಿತ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಳು ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳದಲ್ಲಿ ತಮ್ಮ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಎಚ್.
ಬಿಜೆಪಿಯ ಮೂರು ದಶಕಗಳ ನಂಟನ್ನು ಕಡಿದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೈ ಪಾಳಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಅವರು ತಾನು ಬಿಜೆಪಿಯಿಂದ
ಬೆಂಗಳೂರು, ಏ, 15; ಭಾರತೀಯ ಕಂಪೆನಿ ಕಾರ್ಯದರ್ಶಿಗಳ ಸಂಸ್ಥೆಯಿಂದ ಕಂಪೆನಿಗಳ ವ್ಯಾಜ್ಯ ಇತ್ಯರ್ಥಕ್ಕಾಗಿ ಬೆಂಗಳೂರಿನಲ್ಲಿ “ಮಧ್ಯಸ್ಥಿಕೆ ಕೇಂದ್ರ” ತೆರೆಯಲು ನಿರ್ಧರಿಸಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಪ್ ಕಂಪೆನಿ ಸೆಕ್ರೆಟರೀಸ್ ನ ನೂತನ ಅಧ್ಯಕ್ಷ ಸಿಎಸ್ ಮನೀಶ್ ಗುಪ್ತಾ ಹೇಳಿದ್ದಾರೆ. ಬೆಂಗಳೂರಿನ ಐಸಿಎಸ್ಐ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಾಬಾದ್
ಮಂಜೇಶ್ವರಂ ರೈಲು ನಿಲ್ದಾಣದಲ್ಲಿ ಹಳಿ ಮೇಲೆ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಟಿಯಾನ್ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಮಂಜೇಶ್ವರಂ ಪೊಲೀಸ್ ಠಾಣೆ ಅಥವಾ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ಮಂಜೇಶ್ವರಂ ಪೊಲೀಸ್ ಠಾಣೆ ದೂರವಾಣಿ: 9497 928800 SHO (ಮಂಜೇಶ್ವರಂ): 9497 947263 ದೂರವಾಣಿ : 9497 98 O92
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಭಾನುವಾರ ಕೃಷಿ ಸಿರಿ ವೇದಿಕೆಯಲ್ಲಿ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಅವರು ಮಾತನಾಡಿ ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ ಅಸ್ತವ್ಯಸ್ತವಾಗುತ್ತದೆ. ಬದಲಾಗುತ್ತಿರುವ ಸಮಾಜದಲ್ಲಿ ಸರಳತೆಯನ್ನು ದೌರ್ಬಲ್ಯವೆಂದು
ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ‘ ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ ಭಾನುವಾರ ಬಿಡುಗಡೆಗೊಳಿಸಿದರು. ಕೃತಿ ಪ್ರಕಟಿಸಿರುವ ಅಜೆಕಾರಿನ ಶ್ರೀ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯ ಮುಖ್ಯಸ್ಥ, ಹಿರಿಯ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ
ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ರೈ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಇದಕ್ಕು ಮೊದಲು ಅವರು ಸ್ವರಾಜ್ಯ ಮೈದಾನದಿಂದ ತಾಲ್ಲೂಕು ಕಚೇರಿವರೆಗೆ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸ್ವರಾಜ್ಯ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಆಮ್




























