ಪುತ್ತೂರು: ಆಮ್ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಬಿಡುಗಡೆಗೊಂಡಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ
ಮೂಡುಬಿದಿರೆ: ಅಖಿಲ ಭಾರತ ತುಳು ಒಕ್ಕೂಟ(ರಿ.) ಮತ್ತು ತುಳುಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ತುಳು ಮಹಾಕೂಟ-2023ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಆಳ್ವರು, ಬೇರೆ ಬೇರೆ ಸಮುದಾಯದವರು ತುಳು ಭಾಷೆಯನ್ನು ಅಪ್ಪಿ ಒಪ್ಪಿಕೊಂಡಿದ್ದಾರೆ. ಇತರ ಸಮುದಾಯಗಳು ಇರುವಲ್ಲಿ ಅಲ್ಲಲ್ಲಿ ತುಳು ಸಂಘಟನೆಗಳನ್ನು ಮಾಡಬೇಕಾಗಿದೆ ಆ ಮೂಲಕ ಮುಂದಿನ
ನಾಳೆ ರಾಜ್ಯದ ಮುಖ್ಯಮಂತ್ರಿ ಶ್ರೀ. ಪಿಣರಾಯಿ ವಿಜಯನ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ನಾಳೆಯಿಂದ ಮನೆ, ಜಮೀನು ಇಲ್ಲದ 174 ಕುಟುಂಬಗಳು ಸ್ವಂತ ಮನೆ ಹೊಂದಲಿದ್ದು, ಇವರಿಗೆ ಸ್ವಂತ ಮನೆ ಕನಸಾಗಿತ್ತು. ಈ ವಸತಿ ಸಮುಚ್ಚಯಗಳು ಕಣ್ಣೂರು ಜಿಲ್ಲೆಯ ಕದಂಪುರ್, ಕೊಲ್ಲಂ ಜಿಲ್ಲೆಯ ಪುನಲೂರ್, ಕೊಟ್ಟಾಯಂ ಜಿಲ್ಲೆಯ ವಿಜಯಪುರಂ ಮತ್ತು ಇಡುಕ್ಕಿ ಜಿಲ್ಲೆಯ ಕರಿಮಣ್ಣೂರಿನಲ್ಲಿವೆ. ಪ್ರತಿ ವಸತಿ ಸಮುಚ್ಚಯ ನಿರ್ಮಿಸಲು 6.7 ಕೋಟಿಯಿಂದ 7.85 ಕೋಟಿ ವೆಚ್ಚ ಮಾಡಲಾಗಿದೆ.
ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು. ಶಾಲಾ ಮಕ್ಕಳಿಗೆ
ಬಂಟ್ವಾಳ: ಇಲ್ಲಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಅವರು ಶುಕ್ರವಾರ ತಡರಾತ್ರಿ ಬಿ.ಸಿ.ರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.ಮೃತರು ಪತ್ನಿ 4ಗಂಡು ಹಾಗೂ 5ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಸಂಬಂಧಿಯ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಬಿ.ಸಿ.ರೋಡಿನ ಪದ್ಮ ಪೆಟ್ರೋಲ್ ಪಂಪ್ ಬಳಿ ಆಕಸ್ಮಿಕವಾಗಿ ಸ್ಕಿಡ್ ಆಗಿ ಬಿದ್ದು ಗಂಭೀರ
ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಂಜೇಶ್ವರ : ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ಮಂಜೇಶ್ವರ ಝೋನಲ್ ಸಮಿತಿಯ ವತಿಯಿಂದ ಹೊಸಂಗಡಿ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ಪವಿತ್ರವಾದ ರಂಝಾನ್ ಇಫ್ತಾರ್ ಸಂಗಮ ಹಮ್ಮಿಕೊಳ್ಳಲಾಯಿತು. ಖ್ಯಾತ ವಿದ್ವಾಂಸ ಮುಜಾಹಿದ್ ಬಾಳುಶ್ಯೇರಿ ಯವರು “ನಾಳೆಗಾಗಿ ಸಿದ್ಧರಾಗಿ” ಎಂಬ ವಿಷಯದ ಕುರಿತು ಪ್ರವಚನ ನೀಡಿದರು. ರಂಜಾನ್ ತಿಂಗಳಲ್ಲಿ ಧರ್ಮದ ಹೆಸರಿನಲ್ಲಿ ವಿಶ್ವಾಸಿಗಳನ್ನು ವಂಚಿಸಿ ಹಣ ಸಂಪಾದಿಸಲು ಬಯಸುವ ಮೋಸದ ಪುರೋಹಿತರ ಬಗ್ಗೆ ವಿಶ್ವಾಸಿಗಳು ಹೆಚ್ಚು
ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್ ಅವರ ಹೆಸರು ಇದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುದ್ಧಿಗೆ ಅವರು ಪತ್ರಿಕ್ರಿಯಿಸಿ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೆಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಸ್ವಷ್ಟಪಡಿಸಿದರು
ಯೆನೆಪೋಯ ದಂತ ಮಹಾವಿದ್ಯಾಲಯದ 2017ನೇ ಬಿಡಿಎಸ್ ಬ್ಯಾಚ್ನ ಎನ್ಎಸ್ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಯೆನೆಪೋಯ ದಂತ ಮಹಾವಿದ್ಯಾಲಯದ 5ನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಎನ್ಎಸ್ಎಸ್ ಸ್ವಯಂ ಸೇವಕರಾದ ಎಂ.ಎಸ್. ಝೀಭಾ ಅವರು ಸ್ವಾಗತ ಭಾಷಣ ಮಾಡಿದರು. ಎಂ.ಎಸ್. ಫಾತಿಮತ್ ಇಶಾನ ಅವರು ವಾರ್ಷಿಕ ವರದಿ ವಾಚಿಸಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಸಬಲೀಕರಣ ಗೃಹ ಕಾರ್ಮಿಕ ಒಕ್ಕೂಟದ ವತಿಯಿಂದ ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಎ.ಜೆ ದಂತ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಕಾವೂರಿನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕ ಸುಮಂತ್ ರಾವ್ ಉಚಿತ ಅರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.ಕಾವೂರು ವ್ಯವಸಾಯ ಸೇವಾ




























