ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ವಿಜ್ರಂಭಣೆಯಿಂದ ನಡೆಯಿತು. ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ 108 ತೆಂಗಿನಕಾಯಿಯ ಗಣಯಾಗ, ಮೂಡಪ್ಪ ಸೇವೆ ಹಾಗೂ ರಂಗ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಶ್ರೀ ದೇವರನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಪುತ್ತೂರಿನ ಮಿನಿ ವಿಧಾನ ಸೌಧದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜ್ಜೀವನ್ರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನು ನಡೆಸಲಾಯಿತು. ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಾಬು ಜಗಜ್ಜೀವನ್ರಾಮ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ ಬಾಬು ಜಗಜ್ಜೀವನ್ರಾಮ್ ಅವರು ದೇಶದ
ಮಂಗಳೂರು: ನಗರದ ಉರ್ವಸ್ಟೋರ್ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆಗೊಂಡಿತು. ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ
ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಬರೆದಿರುವ ಮತಪೆಟ್ಟಿಗೆ ಕರಾವಳಿ ಜನರ ತೀರ್ಪು ಕೃತಿ ಲೋಕಾರ್ಪಣೆ ಕಾರ್ಯಕ್ರಮವು ನಗರದ ಪ್ರೆಸ್ಕ್ಲಬ್ನಲ್ಲಿ ನಡೆಯಿತು.ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಪಿ.ಬಿ.ಹರೀಶ್ ರೈ ಬರೆದಿರುವ ಮತಪೆಟ್ಟಿಗೆ ಕೃತಿಯನ್ನು ಮಂಗಳೂರಿನ ಜಿ.ಆರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಎಸ್.ಗಣೇಶ್ ರಾವ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಇದೊಂದು
ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಮೊಗ್ರ ಏರಣ ಗುಡ್ಡೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ಕೋಳಿ ಪದಾರ್ಥಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ ಮಗ ಶಿವರಾಮ ಎಂಬವರಿಗೂ ಮಂಗಳವಾರ ತಡರಾತ್ರಿ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ
ಸುಳ್ಯ: ಪಶ್ಚಿಮ ವಲಯ ಪೆÇಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಚುನಾವಣೆ ಹಿನ್ನಲೆಯಲ್ಲಿ ವಿಟ್ಲ, ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಚಂದ್ರಗುಪ್ತ ಅವರು ಬಳಿಕ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ವೇಳೆ ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು. ಬಳಿಕ ಠಾಣೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ ಅವರು ಚುನಾವಣೆ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ
ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೆÇೀಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಹೇಳಿದರು. ಚುನಾವಣಾ ಹಿನ್ನಲೆಯಲ್ಲಿ
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಮಾರ್ಚ್ 27 ರಿಂದ 30 ರ ವರೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ 200 ಮೀ. ಓಟದಲ್ಲಿ ಕಂಚಿನ ಪದಕ ಹಾಗೂ ್ಠ4100 ಮೀ ರಿಲೇ ಓಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಮಕ್ಕಳಿಗೆ ಪ್ರೇರಕ ಶಕ್ತಿಯಾಗಿರುವ ಶ್ರೀಮತಿ ಅಗ್ನೆಸ್ ಸಲ್ದಾನ ಅವರ ಸಾಧನೆಯನ್ನು ಸಂಸ್ಥೆಯ




























