ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಎನ್ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.2022 ರ ಜುಲೈ 26 ರಂದು ರಾತ್ರಿ
ಮೂಡುಬಿದಿರೆ : ಕಡಂದಲೆ ಗ್ರಾಮದ ಸರ್ವೆ ನಂಬ್ರ 308/ಪಿ1ರ 27 ಎಕ್ರೆ ಸರ್ಕಾರಿ ಭೂಮಿಯಲ್ಲಿ 400/220 ಕೆಪಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲುದ್ದೇಶಿಸಿದ್ದು ಈ ಸ್ಥಳದಲ್ಲಿರುವ 2229 ಮರಗಳನ್ನು ಕಡಿಯುವ ಹಿನ್ನಲೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯು ಮೂಡುಬಿದಿರೆ ಅರಣ್ಯ ಇಲಾಖೆಯ ಸಭಾಭವನದಲ್ಲಿ ಶನಿವಾರ ನಡೆಯಿತು.. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ದೇಶಿತ ಯೋಜನೆಗಾಗಿ ಮರಗಳ ನ್ನು ತೆರವುಗೊಳಿಸಲಿದ್ದು
ಬೃಹತ್ ಬಂಡೆಕಲ್ಲುಗಳನ್ನು ಟಿಪ್ಪರ್ ಗಳಲ್ಲಿ ಕಾನೂನು ಬಾಹಿರವಾಗಿ ಅಪಾಯಕಾರಿ ಸ್ಥಿತಿಯಲ್ಲಿ ಸಾಗಿಸುತ್ತಿದ್ದು, ಜನರ ಪ್ರಾಣಕ್ಕೆ ಕುತ್ತುತರುವ ಇಂಥಹ ಪ್ರಕ್ರಿಯೆಗೆ ಸಾರಿಗೆ ಇಲಾಖೆ ಕಡಿವಾಣ ಹಾಕ ಬೇಕಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಎಂ.ಪಿ. ಮೊಹಿದ್ಧಿನಬ್ಬ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬಡಪಾಯಿಗಳಿಂದ ಸಂಚಾರದಲ್ಲಿ ಸಣ್ಣಪುಟ್ಟ ತೊಡಕುಗಳಾದರೂ ಸಾರಿಗೆ ಇಲಾಖೆ ಸಹಿತ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳುತ್ತಿದ್ದು, ಇಂಥಹ ಅಮಾಯಕರ ಪ್ರಾಣದ ಜೊತೆ
ಬಂಟ್ವಾಳ: ರೈತರ ವಿರೋಧದ ನಡುವೆಯೂ ಕೃಷಿ ಭೂಮಿಯನ್ನು ನಾಶಪಡಿಸಿ, ರೈತರ ಹಿತಾಸಕ್ತಿ ಕಾಪಾಡದೆ ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ ಹಾಗೂ ಜಿಲ್ಲಾಡಳಿತದ ವಿರುದ್ಧ ಮಾ. 8ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ
ಉಳ್ಳಾಲ ತಾಲೂಕಿನ ಪಿಲಾರ್ ದಾರಂದಬಾಗಿಲಿನಲ್ಲಿ ಮಾರ್ಚ್ 5 ರ ಭಾನುವಾರದಂದು ಪಂಜಂದಾಯ ದೈವದ ನೇಮ ನಡೆಲಿದೆ.ಕುತ್ತಾರ್ ಪಂಜಂದಾಯ ಮೂಲಸಾನದಿಂದ ಶನಿವಾರ ರಾತ್ರಿ ಭಂಡಾರ ಬಂದು ಭಾನುವಾರ ಬೆಳಗ್ಗಿನಿಂದ ಮಧ್ಯಾಹ್ನ ತನಕ ಪಿಲಾರ್ ದಾರಂದಬಾಗಿಲಿನಲ್ಲಿ ನೇಮ ನಡೆಯಲಿದೆ. ಪಿಲಾರ್ ನೇಮದ ಅಂಗವಾಗಿ ಶನಿವಾರ ರಾತ್ರಿ ಪಿಲಾರ್ ಯುವಕ ಮಂಡಲವು “ಶಿವದೂತೆ ಗುಳಿಗೆ” ನಾಟಕ ಪ್ರದರ್ಶನ ಆಯೋಜಿಸಿದೆ. ಕೊರಗ ತನಿಯನಿಗೆ ನೆಲೆ ನೀಡಿದ ದೈವವಾಗಿ ಪಂಜಂದಾಯ ದೈವದ ಕಾರ್ಣಿಕವು
ಉಳ್ಳಾಲ: ಎಸ್ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಉಳ್ಳಾಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡರು. ಉಳ್ಳಾಲ ನಗರಸಭೆ ಎದುರುಗಡೆಯಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಿಯಾಝ್ ಫರಂಗಿಪೇಟೆ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವಕಾಶ ಕಲ್ಪಿಸಿದ ಪಕ್ಷದ ಎಲ್ಲಾ
ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಇಬ್ಬರಿಗಾಗಿ
ಮುಡಿಪು : ಕಲಾವಿದನಾಗಲಿ ಗಾಯಕನಾಗಲಿ ಸಂಗೀತದ ಎಲ್ಲಾ ಪ್ರಕಾರಗಳನ್ನು ಒಂದೇ ರೀತಿ ಇಷ್ಟಪಡಬೇಕು. ಸಂಗೀತ ಕ್ಷೇತ್ರದಲ್ಲಿ ಸ್ವರಗಳ ಜ್ಞಾನ ಅರಿತುಕೊಂಡು ಬೆಳೆದರೆ ಯಶಸ್ಸು ಸಾಧ್ಯ. ಸಂಗೀತ ಮತ್ತು ಸಾಹಿತ್ಯ ಎನ್ನುವಂತದ್ದು ಸಾಗರ. ಅದರಲ್ಲಿಯೂ ಕನಕದಾಸರು ಹಾಗೂ ಪುರಂದರದಾಸರ ರಚನೆಗಳು ಅಪೂರ್ವ. ಗಾಯಕರು ಸಾಹಿತ್ಯಕ್ಕೆ ಗಮನಕೊಟ್ಟು ಹಾಡಿದರೆ ಅದರ ಚಂದವೇ ಬೇರೆ ಎಂದು ಬೆಂಗಳೂರಿನ ಖ್ಯಾತ ಗಾಯಕರು, ಗಾನ ಗಂಧರ್ವ ಶಶಿಧರ್ ಕೋಟೆ ಅವರು ಹೇಳಿದರು. ಮಂಗಳೂರು
ಕಿನ್ನಿಗೋಳಿ: ಕಿನ್ನಿಗೋಳಿ ಸುತ್ತಮುತ್ತ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಹಗಲು ದರೋಡೆಗಿಳಿಯುವ ತಂಡ ಕಾರ್ಯಾಚರಿಸುತ್ತಿದೆ. ಮನೆ ಮನೆಗೆ ಭೇಟಿ ನೀಡುತ್ತಿರುವ ಯುವಕನೋರ್ವ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಒಡವೆಗಳನ್ನು ಪಡೆದು, ತನ್ನ ಬಳಿ ಇರುವ ಪುಡಿಯೊಂದರಲ್ಲಿ ತನ್ನ ಪಾತ್ರೆಯಲ್ಲಿರುವ ನೀರಿನಲ್ಲಿ ತೊಳೆಯುತ್ತಾನೆ ಚಿನ್ನದ ಒಡವೆಗಳಿಗೆ ಹೊಳಪು ಬರುತ್ತದೆ ಅದರೆ ಒಡವೆಯ ಸುಮಾರು 25% ಕರಗಿ ಅವರಲ್ಲಿರುವ ನೀರಿನಲ್ಲಿರುತ್ತದೆ. ಅದನ್ನು ಆ ಯುವಕ
ಮಹಿಳಾ ಠಾಣೆಯ ಹೆಡ್ ಕಾನ್ಸ್ಟೇಬಲ್ ಶ್ರೀಲತಾ ಅವರ ವಿರುದ್ಧ ಫಾಸಿಮ್ ನೌಶಿಫ್ ಎಂಬವರು ಪೊಲೀಸ್ ಕಮಿಷನರ್ ಅವರಿಗೆ ಪೂರ್ವದ್ವೇಷದಲ್ಲಿ ಸುಳ್ಳು ದೂರು ನೀಡಿದ್ದಾರೆ. 2020 ನೇ ಸಾಲಿನಲ್ಲಿ ಮಹಿಳಾ ಠಾಣೆಯಲ್ಲಿ ನಪಿಸತ್ ಅಸ್ಮಾರ ನೀಡಿದ ದೂರಿನ ಆಧಾರದಲ್ಲಿ ವರದಕ್ಷಿಣ ಕಿರುಕುಳ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಮುನ್ನ ಫಾಸಿಮ್ ನೌಶಿಫ್ ಮೇಲೆ (2020ರಲ್ಲಿಯೇ ) ಎಂಡಿಎಂ ಮಾದಕ ದ್ರವ್ಯ ಅಕ್ರಮ ಸಾಗಾಟ ಪ್ರಕರಣ ದಾಖಲಾಗಿ, ಬಂಧಿತನಾಗಿದ್ದ. ಈ




























