Home Posts tagged V4News (Page 557)

ಸಾಲೆತ್ತೂರು: ಬೆಂಕಿಗಾಹುತಿಯಾದ ಲಾರಿ – ಅಪಾರ ನಷ್ಟ

ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಬಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ

ಕಡಬದಲ್ಲಿ `ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ

ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ. ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ

ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ

ಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ. ಕಳೆದ ವಾರ ಉಡುಪಿಯಲ್ಲಿ ಜರಗಿದ ಪ್ರಥಮ

ನಟ ರಿಷಬ್​ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಪಂಚೆಯಲ್ಲಿ ಮಿಂಚಿದ ನಟ

ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಟ ರಿಷಬ್​ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುವ ಕೆಲಸ ಮಾಡುತ್ತಿರುವ ರಿಷಬ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ

ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಕಿಡ್ನ್ಯಾಪ್ ಪ್ರಕರಣ ದಾಖಲು

ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವ್ಯಪ್ರಭಾ ಅವರ ವಿರುದ್ದ ಅವರ ಅಳಿಯ ನವೀನ್ ಗೌಡ ಅವರು ದೂರು ನೀಡಿದ್ದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ದಿವ್ಯಪ್ರಭಾ ಹಾಗೂ ಮಗಳು ಸ್ಪಂದನಾ , ಪರಶುರಾಮ್ ,

ಕಾರ್ಮಿಕ ಮುಂದಾಳು ರಮೇಶ್ ರೈ ಮತ್ತು ಮೃತ ಯುವತಿ ರಂಜಿತ ರವರ ನಿಧನಕ್ಕೆ ಸಿಪಿಐ ತೀವ್ರ ಆಘಾತ

ಮಂಗಳೂರು.ಫೆ.20. ಭಾರತ ಕಮ್ಯೂನಿಸ್ಟ್ ಪಕ್ಷದ ಕಡಬ ತಾಲೂಕಿನ ಉಪ ಕಾರ್ಯದರ್ಶಿ, ಪುತ್ತೂರು ತಾಲೂಕು ಬೀಡಿ ಲೇಬರ್ ಯೂನಿಯನ್‌(ಎಐಟಿಯುಸಿ) ನ ಜತೆ ಕಾರ್ಯದರ್ಶಿ ಸುಮಾರು 55 ವರ್ಷ ಪ್ರಾಯದ ರಮೇಶ್ ರೈ ಅವರು ಇಂದು ಮುಂಜಾನೆ ಆನೆ ದಾಳಿಯಿಂದ ಸ್ಥಳೀಯ ಯುವತಿ ರಂಜಿತಳನ್ನು ರಕ್ಷಿಸುವ ಸಲುವಾಗಿ ತಾವೇ ಸ್ವತಃ ಆನೆ ದಾಳಿಗೆ ತುತ್ತಾಗಿ ಗಂಭೀರ ಸ್ವರೂಪದ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ರಮೇಶ್ ರೈ ಹಾಗೂ 21 ವರ್ಷ ಪ್ರಾಯದ ಕುಮಾರಿ ರಂಜಿತ ಇವರುಗಳ ಅಕಾಲಿಕ ಮರಣಕ್ಕೆ ಸಿಪಿಐ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಶಿಕಾರಿಪುರ ಕೃಷ್ಣಮೂರ್ತಿ, ಉದಯ ಕುಮಾರ್, ರಘುರಾಮ ರಾವ್ ಮತ್ತು ತಂಡದವರಿಂದ ರುದ್ರ ಪಠನ, ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರ ಪಾರಾಯಣ ಬಳಗದವರಿಂದ ಸಾಮೂಹಿಕ ಕುಂಕುಮಾರ್ಚನೆ, ಶ್ರೀ ಲಲಿತಾ ಸಹಸ್ರನಾಮಾರ್ಚನೆ ಜರುಗಿತು. ಸ್ವಾಮಿನಿ

ಹರೇಕಳ: ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಎಂಬವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16 ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಮನೆಗೆ ಬಂದಾಗ

ಫೆ.25ರಂದು ಕಲ್ಲಡ್ಕ ಕಟ್ಟೆಮಾರಿನ ಶ್ರೀ ಮಂತ್ರದೇವತಾ ಸಾನಿಧ್ಯ ವಾರ್ಷಿಕ ಕೋಲೋತ್ಸವ

ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ. ಕಲ್ಲಡ್ಕದ ಅಮ್ಟೂರಿನಲ್ಲಿರುವ ಈ ಸಾನಿಧ್ಯವು ಹಲವಾರು ಕಾರಣಿಕ ಶಕ್ತಿಯ ಮೂಲಕ ಹೆಸರುವಾಸಿಯಾಗಿದೆ. ಕಷ್ಟ ಅಂತ ಬಂದ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿದ ಪುಣ್ಯ ಸಾನಿಧ್ಯ. ಇದೀಗ ಕ್ಷೇತ್ರದಲ್ಲಿ ಮನೋಜ್ ಕಟ್ಟೆಮಾರ್ ನೇತೃತ್ವದಲ್ಲಿ ಇದೇ ಬರುವ ಫೆ.25ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವ ನಡೆಯಲಿದೆ. ಹಾಗೂ ಫೆ.26ರಂದು ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ