“ನಮ್ಮ ಕುಂದಾಪುರ” ಬಳಗದ 26ನೇ ಸಹಮಿಲನವು ಕುಂದಾಪುರ ಹೋಟೆಲ್ನ ನಗು ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಕೀಲರೂ, ಸಾಹಿತಿ, ಸಂಪನ್ಮೂಲವ್ಯಕ್ತಿಗಳಾಗಿರುವ ಎ .ಎಸ್. ಎನ್ ಹೆಬ್ಬಾರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಒಂದು ಹೂವಿನ ಚಿತ್ರವನ್ನು ಬಳಗದ ಗೋಡೆಯ ಮೇಲೆ ಹಾಕಿದರೆ ಸಾವಿರಾರು
ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪೆÇ್ಕ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ ಕ್ಯಾಂಪೆÇ್ಕ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ
ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್ ಮೈದಾನದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ಉಳ್ಳಾಲ: ಉಳ್ಳಾಲ್ ಕ್ರಿಕೆಟ್ ಬೋರ್ಡ್ ವತಿಯಿಂದ ಎಂಟನೇ ಅವಧಿಯ ಟೆನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಳ್ಳಾಲ್ ಪ್ರೀಮಿಯರ್ ಲೀಗ್ ಫೆ.20 ರಿಂದ ಫೆ.25 ರವರೆಗೆ ಐದು ದಿನಗಳ ಕಾಲ ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಉಳ್ಳಾಲ್ ಕ್ರಿಕೆಟ್ ಬೋರ್ಡ್ ಇದರ ಅಧ್ಯಕ್ಷ ಯು.ಬಿ ಸಲೀಂ ಹೇಳಿದರು. ಅವರು ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ
ಹೆಜಮಾಡಿಕೋಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯ 6 ವರ್ಷದ ಒಳಗಿನ ಪುಟಾಣಿ, ಮಕ್ಕಳ ಪ್ರತಿಭೆಯನ್ನು ವ್ಯಕ್ತ ಪಡಿಸಲು ವೇದಿಕೆಯನ್ನು ನಿರ್ಮಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಮೋಜಿನ ಆಟಗಳನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅದ್ರಷ್ಟಶಾಲಿ ಮಗುವನ್ನು ಆಯ್ಕೆ ಮಾಡಿ, ಆ ಮಗುವಿಗೆ ಒಂದು.. ವರ್ಷದ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವೈಧ್ಯಾಧಿಕಾರಿ ಡಾ.ಕ್ರಷ್ಣ
ವಿಟ್ಲ:- ಕರ್ನಾಟಕ ರಾಜ್ಯ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಬಡವರ ಬಂಧು ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿಯ ಸಚಿವ ಅಶ್ವಥ್ ನಾರಾಯಣ್ ಅವರು ಟಿಪ್ಪುವನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದು ಹೇಳುವ ಮೂಲಕ ಪ್ರಚೋಧನೆ ಮತ್ತು ಕುಮ್ಮಕ್ಕು ಕೊಡುವ ಹೇಳಿಕೆ ನೀಡಿರುವುದನ್ನು ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಚಿವರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಡಿಸಿಸಿ ಮಾಜಿ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ
ಪುತ್ತೂರು ಫೆ 5 : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ ಪುತ್ರ ಜತ್ತಪ್ಪ ಗೌಡ ( 68 ವ) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತದ ಕುಡಿತದ ಚಟ ಹೊಂದಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ ಜತ್ತಪ್ಪ ಗೌಡರವರು ಸಂಜೆ 6.30ರ ಸುಮಾರಿಗೆ ಮನೆಯಲ್ಲಿದ್ದ ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಪುತ್ತೂರಿನ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಫೆಬ್ರವರಿ 18, 2023 ರ ಶನಿವಾರದಂದು ಆಚರಿಸಲ್ಪಡುವ ಮಹಾಶಿವರಾತ್ರಿಯು ಅನೇಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ 09:30 ರಿಂದ ಪ್ರಾತಃ ಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ, ಸೂಡ ಇವರಿಂದ “ಅಬ್ಬಗ ದಾರಗ” ತುಳುಪ್ರಸಂಗ ಮತ್ತು “ಬೇಡರ ಕಣ್ಣಪ್ಪ” ಕನ್ನಡ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ 22, 2023
ಮಾದಕ ಪದಾರ್ಥಗಳು ವ್ಯಕ್ತಿಯ ಬಾಹ್ಯ ಮತ್ತು ಆಂತರಿಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ. ಹಾಗಾಗಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಅವರು ಫೆ.15ರ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಮೃತವರ್ಷಿನಿ ಸಭಾಭವನದಲ್ಲಿ ಆಯೋಜಿಸಿದ್ದ ನವಜೀವನ ಸಮಾವೇಶ 2022-23ರಲ್ಲಿ ಭಾಗವಹಿಸಿ
ಕಡಬ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಸರಕಾರಿ ಪದವಿ ಕಾಲೇಜು ಆರಂಭಿಸದೇ ಹೋದರೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಗಳ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಪದವಿ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ರೈ ಕರ್ಮಾಯಿ ಅವರು ಎಚ್ಚರಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಡಬ ಪರಿಸರದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ




























